<p><strong>ಹನೂರು</strong>: ಸಂಬಂಧಿಕರೊಬ್ಬರ ಶವ ಸಂಸ್ಕಾರಕ್ಕೆ ಹೋಗಿ ವಾಪಸಾಗುತ್ತಿದ್ದಾಗ, ತಾಲ್ಲೂಕಿನ ಹಲಗಾಪುರ ಗ್ರಾಮದ ಬಳಿ ಮಿನಿ ಲಾರಿಯೊಂದು ಮಗುಚಿ 40ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ.</p>.<p>ಶನಿವಾರ ಸಂಜೆ ದುರ್ಘಟನೆ ನಡೆದಿದೆ. ಆರು ಜನರಿಗೆ ಗಂಭೀರ ಸ್ವರೂಪದ ಗಾಯಗಳಾಗಿದ್ದು, ಅವರನ್ನು ಮೈಸೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ. ಗಾಯಗೊಂಡವರೆಲ್ಲ ಹುತ್ತೂರು ಗ್ರಾಮದವರು.</p>.<p>ತಾಲ್ಲೂಕಿನ ಶಾಗ್ಯ ಗ್ರಾಮದಲ್ಲಿ ನಿಧನರಾಗಿದ್ದ ಸಂಬಂಧಿಕರೊಬ್ಬರ ಅಂತ್ಯಕ್ರಿಯೆಯಲ್ಲಿ ಪಾಲ್ಗೊಳ್ಳುವುದಕ್ಕೆ ಗ್ರಾಮಸ್ಥರು ಮಿನಿ ಲಾರಿಯಲ್ಲಿ ತೆರಳಿದ್ದರು. ಕಾರ್ಯ ಮುಗಿಸಿ ವಾಪಸ್ ಬರುವಾಗ ಚಾಲಕನ ನಿಯಂತ್ರಣ ತಪ್ಪಿ ವಾಹನ ಮಗುಚಿ ಬಿದ್ದಿದೆ. ಲಾರಿಯಲ್ಲಿ 50ರಿಂದ 60 ಜನರು ಇದ್ದರು ಎಂದು ಹೇಳಲಾಗುತ್ತಿದೆ.</p>.<p>35ಕ್ಕೂ ಹೆಚ್ಚು ಜನರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಐವರಿಗೆ ಹೆಚ್ಚು ಗಾಯಗಳಾಗಿವೆ. ಎಲ್ಲರಿಗೂ ಹನೂರು ಸರ್ಕಾರಿ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗೆ ಕಾಮಗೆರೆಯ ಹೋಲಿಕ್ರಾಸ್ ಆಸ್ಪತ್ರೆ ಹಾಗೂ ಕೊಳ್ಳೇಗಾಲದ ಉಪವಿಭಾಗ ಆಸ್ಪತ್ರೆಗೆ ದಾಖಲಿಸಲಾಯಿತು.</p>.<p>ಹೋಲಿಕ್ರಾಸ್ ಆಸ್ಪತ್ರೆಗೆ 14 ಜನರು ಚಿಕಿತ್ಸೆಗಾಗಿ ದಾಖಲಾಗಿದ್ದು, ಇವರಲ್ಲಿ ಇಬ್ಬರಿಗೆ ತಲೆಗೆ ಬಲವಾಗಿ ಪೆಟ್ಟು ಬಿದ್ದ ಕಾರಣದಿಂದ ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರಿಗೆ ರವಾನಿಸಲಾಗಿದೆ. ಕೊಳ್ಳೇಗಾಲ ಸರ್ಕಾರಿ ಉಪವಿಭಾಗ ಆಸ್ಪತ್ರೆಗೆ ದಾಖಲಾಗಿದ್ದ 34 ಜನರ ಪೈಕಿ, ನಾಲ್ವರನ್ನು ಮೈಸೂರಿನ ಆಸ್ಪತ್ರೆಗೆ ಕಳುಹಿಸಿಕೊಡಲಾಗಿದೆ.</p>.<p>ಗಾಯಗೊಂಡಿರುವ ಹಲವರಿಗೆ ಬೆನ್ನಿಗೆ ಏಟಾಗಿದೆ ಎಂದು ಎಂದು ಪ್ರತ್ಯಕ್ಷದರ್ಶಿಗಳು ಹೇಳಿದ್ದಾರೆ. ಘಟನಾ ಸ್ಥಳಕ್ಕೆ ಹನೂರು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.</p>.<p>ಶಾಸಕ ಆರ್.ನರೇಂದ್ರ ಅವರು ಕೊಳ್ಳೇಗಾಲ ಸರ್ಕಾರಿ ಉಪವಿಭಾಗ ಆಸ್ಪತ್ರೆಗೆ ಭೇಟಿ ನೀಡಿ ಗಾಯಾಳುಗಳ ಆರೋಗ್ಯ ವಿಚಾರಿಸಿದರು.<br />ಎಲ್ಲರಿಗೂ ಸೂಕ್ತ ಚಿಕಿತ್ಸೆ ನೀಡುವುದರ ಜೊತೆಗೆ, ಅಗತ್ಯವಿದ್ದರೆ ಮೈಸೂರಿಗೆ ರವಾನಿಸುವಂತೆ ವೈದ್ಯರಿಗೆ ಸೂಚಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹನೂರು</strong>: ಸಂಬಂಧಿಕರೊಬ್ಬರ ಶವ ಸಂಸ್ಕಾರಕ್ಕೆ ಹೋಗಿ ವಾಪಸಾಗುತ್ತಿದ್ದಾಗ, ತಾಲ್ಲೂಕಿನ ಹಲಗಾಪುರ ಗ್ರಾಮದ ಬಳಿ ಮಿನಿ ಲಾರಿಯೊಂದು ಮಗುಚಿ 40ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ.</p>.<p>ಶನಿವಾರ ಸಂಜೆ ದುರ್ಘಟನೆ ನಡೆದಿದೆ. ಆರು ಜನರಿಗೆ ಗಂಭೀರ ಸ್ವರೂಪದ ಗಾಯಗಳಾಗಿದ್ದು, ಅವರನ್ನು ಮೈಸೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ. ಗಾಯಗೊಂಡವರೆಲ್ಲ ಹುತ್ತೂರು ಗ್ರಾಮದವರು.</p>.<p>ತಾಲ್ಲೂಕಿನ ಶಾಗ್ಯ ಗ್ರಾಮದಲ್ಲಿ ನಿಧನರಾಗಿದ್ದ ಸಂಬಂಧಿಕರೊಬ್ಬರ ಅಂತ್ಯಕ್ರಿಯೆಯಲ್ಲಿ ಪಾಲ್ಗೊಳ್ಳುವುದಕ್ಕೆ ಗ್ರಾಮಸ್ಥರು ಮಿನಿ ಲಾರಿಯಲ್ಲಿ ತೆರಳಿದ್ದರು. ಕಾರ್ಯ ಮುಗಿಸಿ ವಾಪಸ್ ಬರುವಾಗ ಚಾಲಕನ ನಿಯಂತ್ರಣ ತಪ್ಪಿ ವಾಹನ ಮಗುಚಿ ಬಿದ್ದಿದೆ. ಲಾರಿಯಲ್ಲಿ 50ರಿಂದ 60 ಜನರು ಇದ್ದರು ಎಂದು ಹೇಳಲಾಗುತ್ತಿದೆ.</p>.<p>35ಕ್ಕೂ ಹೆಚ್ಚು ಜನರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಐವರಿಗೆ ಹೆಚ್ಚು ಗಾಯಗಳಾಗಿವೆ. ಎಲ್ಲರಿಗೂ ಹನೂರು ಸರ್ಕಾರಿ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗೆ ಕಾಮಗೆರೆಯ ಹೋಲಿಕ್ರಾಸ್ ಆಸ್ಪತ್ರೆ ಹಾಗೂ ಕೊಳ್ಳೇಗಾಲದ ಉಪವಿಭಾಗ ಆಸ್ಪತ್ರೆಗೆ ದಾಖಲಿಸಲಾಯಿತು.</p>.<p>ಹೋಲಿಕ್ರಾಸ್ ಆಸ್ಪತ್ರೆಗೆ 14 ಜನರು ಚಿಕಿತ್ಸೆಗಾಗಿ ದಾಖಲಾಗಿದ್ದು, ಇವರಲ್ಲಿ ಇಬ್ಬರಿಗೆ ತಲೆಗೆ ಬಲವಾಗಿ ಪೆಟ್ಟು ಬಿದ್ದ ಕಾರಣದಿಂದ ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರಿಗೆ ರವಾನಿಸಲಾಗಿದೆ. ಕೊಳ್ಳೇಗಾಲ ಸರ್ಕಾರಿ ಉಪವಿಭಾಗ ಆಸ್ಪತ್ರೆಗೆ ದಾಖಲಾಗಿದ್ದ 34 ಜನರ ಪೈಕಿ, ನಾಲ್ವರನ್ನು ಮೈಸೂರಿನ ಆಸ್ಪತ್ರೆಗೆ ಕಳುಹಿಸಿಕೊಡಲಾಗಿದೆ.</p>.<p>ಗಾಯಗೊಂಡಿರುವ ಹಲವರಿಗೆ ಬೆನ್ನಿಗೆ ಏಟಾಗಿದೆ ಎಂದು ಎಂದು ಪ್ರತ್ಯಕ್ಷದರ್ಶಿಗಳು ಹೇಳಿದ್ದಾರೆ. ಘಟನಾ ಸ್ಥಳಕ್ಕೆ ಹನೂರು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.</p>.<p>ಶಾಸಕ ಆರ್.ನರೇಂದ್ರ ಅವರು ಕೊಳ್ಳೇಗಾಲ ಸರ್ಕಾರಿ ಉಪವಿಭಾಗ ಆಸ್ಪತ್ರೆಗೆ ಭೇಟಿ ನೀಡಿ ಗಾಯಾಳುಗಳ ಆರೋಗ್ಯ ವಿಚಾರಿಸಿದರು.<br />ಎಲ್ಲರಿಗೂ ಸೂಕ್ತ ಚಿಕಿತ್ಸೆ ನೀಡುವುದರ ಜೊತೆಗೆ, ಅಗತ್ಯವಿದ್ದರೆ ಮೈಸೂರಿಗೆ ರವಾನಿಸುವಂತೆ ವೈದ್ಯರಿಗೆ ಸೂಚಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>