ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಹಂಕಾರದಿಂದಾಗಿ ಸಿದ್ದರಾಮಯ್ಯ ಅಧಿಕಾರ ಕಳೆದುಕೊಂಡರು: ಸಚಿವ ಸಿ.ಸಿ.ಪಾಟೀಲ

Last Updated 29 ಡಿಸೆಂಬರ್ 2020, 12:27 IST
ಅಕ್ಷರ ಗಾತ್ರ

ಚಾಮರಾಜನಗರ: ಸಿದ್ದರಾಮಯ್ಯ ಅವರು ತಮ್ಮ ಅಹಂಕಾರದಿಂದಾಗಿ ಅಧಿಕಾರ ಕಳೆದುಕೊಂಡು ವಿರೋಧ ಪಕ್ಷದಲ್ಲಿ ಕುಳಿತಿದ್ದಾರೆ ಎಂದು ಗಣಿ ಮತ್ತು ಭೂವಿಜ್ಞಾನ ಸಚಿವ ಸಿ.ಸಿ. ಪಾಟೀಲ ಅವರು ಟೀಕಿಸಿದರು.

‘ದನದ ಮಾಂಸ ತಿನ್ನುತ್ತೇನೆ’ ಎಂಬ ಸಿದ್ದರಾಮಯ್ಯ ಹೇಳಿಕೆಗೆ ನಗರದಲ್ಲಿ ಪ್ರತಿಕ್ರಿಯಿಸಿರುವ ಅವರು, ‘ಸಿದ್ದರಾಮಯ್ಯ ಅವರು ಹಿರಿಯ ನಾಯಕರು. ಒಂದು ವರ್ಗದ ಜನರ ಭಾವನೆಗೆ ನೋವು ಉಂಟು ಮಾಡುವುದು ಅವರಿಗೆ ಶೋಭೆ ತರುವುದಿಲ್ಲ. ಅವರ ಹೇಳಿಕೆ ಖಂಡನೀಯ’ ಎಂದರು.

‘ಸಿದ್ದರಾಮಯ್ಯ ಅವರುಇಂತಹ ಅಹಂಕಾರದಿಂದಲೇ ಅಧಿಕಾರ ಕಳೆದುಕೊಂಡರು. ಮುಂದಿನ ಬಾರಿಯೂ ಕಾಂಗ್ರೆಸ್‌ ಅನ್ನು ವಿರೋಧ ಪಕ್ಷದಲ್ಲಿ ಕೂರಿಸುವ ಆಸೆ ಅವರಿಗಿದೆ. ಆದ್ದರಿಂದಲೇ, ಇಂತಹ ಮಾತುಗಳನ್ನಾಡುತ್ತಿದ್ದಾರೆ’ ಎಂದು ಸಿ.ಸಿ.ಪಾಟೀಲ ಅವರು ವ್ಯಂಗ್ಯವಾಡಿದರು.

ವಿಧಾನಪರಿಷತ್‌ ಉಪಸಭಾಪತಿ ಧರ್ಮೇಗೌಡ ಅವರ ಸಾವಿಗೆ ಪ್ರತಿಕ್ರಿಯಿಸಿ, ‘ಧರ್ಮೇಗೌಡ ಒಬ್ಬ ಧೀಮಂತ ರಾಜಕಾರಣಿ. ಪುಕ್ಕಲ ಅಲ್ಲ. ಹೋರಾಟ ಮಾಡಿಕೊಂಡು ಬಂದವರು. ಅವರನ್ನು ಈ ರೀತಿ ಕಳೆದುಕೊಳ್ಳುತ್ತೇವೆ ಎಂದುಕೊಂಡಿರಲಿಲ್ಲ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT