‘ಸಭೆಗೆ ಸಂಬಂಧಿಸಿದ ಎಲ್ಲ ಅಧಿಕಾರಿಗಳನ್ನು ಕರೆಯಲಾಗುತ್ತದೆ. ಸಮಸ್ಯೆಗಳನ್ನು ಸಂಪೂರ್ಣವಾಗಿ ಚರ್ಚಿಸಿ ಪರಿಹರಿಸಲು ಪ್ರಯತ್ನಿಸಲಾಗುವುದು. ಕರ ನಿರಾಕರಣಾ ಚಳವಳಿಯ ವಿದ್ಯುತ್ ಬಿಲ್ ಸಮಸ್ಯೆ ಪರಿಹರಿಸುವ ನಿಟ್ಟಿನಲ್ಲಿ ಈಗಾಗಲೇ ಇಂಧನ ಸಚಿವರು, ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮದ ಅಧಿಕಾರಿಗಳ ಜೊತೆ ಬೆಂಗಳೂರಿನಲ್ಲಿ ಚರ್ಚೆ ನಡೆಸಲಾಗಿದೆ. ಬಿಲ್ ಮನ್ನಾ ಕುರಿತು ಸರ್ಕಾರ ತೀರ್ಮಾನಿಸಲಿದ್ದು, ಈ ಬಗ್ಗೆ ಯಾವುದೇ ಒತ್ತಾಯ ಮಾಡದಂತೆ ನಿಗಮದ ಅಧಿಕಾರಿಗಳಿಗೆ ಸೂಚಿಸಲಾಗಿದೆ. ಜಿಲ್ಲಾ ಉಸ್ತುವಾರಿ ಸಚಿವರ ಗಮನಕ್ಕೆ ತರದೇ ನಿಗಮದ ಅಧಿಕಾರಿಗಳು ಕೈಗೊಂಡಿರುವ ತೀರ್ಮಾನದಲ್ಲಿ ತಪ್ಪಾಗಿದೆ’ ಎಂದರು.