ರಾಜಕೀಯ ಭೇಟಿ ಅಲ್ಲ: ಜೆಡಿಎಸ್ ಮುಖಂಡ ಎಚ್.ಡಿ.ಕುಮಾರಸ್ವಾಮಿ ಅವರು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಭೇಟಿ ಮಾಡಿರುವ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವರು, ‘ಯಾರು ಬೇಕಾದರೂ ಮತ್ತು ಯಾವ ಪಕ್ಷದ ಮುಖಂಡರು ಕೂಡ ಮುಖ್ಯಮಂತ್ರಿಯವರನ್ನು ಭೇಟಿ ಮಾಡಬಹುದು. ಅದರಲ್ಲಿ ಏನು ತಪ್ಪಿದೆ? ಇದರಲ್ಲಿ ಯಾವ ರಾಜಕೀಯವೂ ಅಲ್ಲ. ದಾಸರಹಳ್ಳಿ ಕ್ಷೇತ್ರದಲ್ಲಿ ಮಳೆಯಿಂದ ಬಹಳಷ್ಟು ಹಾನಿಯಾಗಿದೆ. ತುರ್ತಾಗಿ ಹಣ ಬಿಡುಗಡೆ ಮಾಡಿ ಕ್ಷೇತ್ರದ ಜನರಿಗೆ ಅಭಿವೃದ್ಧಿ ಮಾಡಿ ಎಂದು ಮನವಿ ಮಾಡುವುದಕ್ಕೆ ಬಂದಿದ್ದರು, ಯಾವ ರಾಜಕೀಯವೂ ಇಲ್ಲ ಎಂದು ಮುಖ್ಯ ಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರೇ ಸ್ಪಷ್ಟನೆ ನೀಡಿದ್ದಾರ’ ಎಂದರು.