ರಸ್ತೆ ವಿಸ್ತರಣೆಗೆ ಅವಕಾಶ ಕೊಡಲ್ಲ: ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಮೇಲುಕಾಮನಹಳ್ಳಿಯಿಂದ ಕೆಕ್ಕನಹಳ್ಳ ಚೆಕ್ ಪೋಸ್ಟ್ವರೆಗೆ ರಸ್ತೆ ವಿಸ್ತರಣೆ ಮಾಡುವ ಸಂಬಂಧ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಮಾಡಿರುವ ಪ್ರಸ್ತಾವದ ಬಗ್ಗೆ ಪ್ರತಿಕ್ರಿಯಿಸಿದ ಉಮೇಶ್ ಕತ್ತಿ ಅವರು, 'ಪ್ರಸ್ತಾವವನ್ನು ವಿರೋಧಿಸಿ ಪತ್ರ ಬರೆಯಲಾಗಿದೆ. ಯಾವ ಕಾರಣಕ್ಕೂ ರಸ್ತೆ ವಿಸ್ತರಣೆಗೆ ಮತ್ತು ರಾತ್ರಿ ಸಂಚಾರಕ್ಕೆ ಅವಕಾಶ ಕೊಡುವುದಿಲ್ಲ' ಎಂದು ಸ್ಪಷ್ಟಪಡಿಸಿದರು.