ಪ್ರಧಾನಿ ಮೋದಿ ಅವರು ಬೆಂಗಳೂರಿಗೆ ಭೇಟಿ ನೀಡಿದ ಸಂದರ್ಭದಲ್ಲಿ ಕೈಗೊಳ್ಳಲಾದ ಕಳಪೆ ರಸ್ತೆ ಕಾಮಗಾರಿ ಬಗ್ಗೆ ಕೇಳಿದ್ದಕ್ಕೆ, ‘ಈ ಬಗ್ಗೆ ಪ್ರಧಾನಿ ಅವರೇ ವರದಿ ಕೇಳಿದ್ದಾರೆ. ಕಾಮಗಾರಿಯನ್ನು ನಾನು ನೋಡಿಲ್ಲ. ನನ್ನ ಕ್ಷೇತ್ರದಲ್ಲಿ ನಡೆದಿಲ್ಲ. ಪಕ್ಕದ ಕ್ಷೇತ್ರದಲ್ಲಿ ನಡೆದಿದೆ. ಈಗ ಪ್ರಧಾನಿ ಕಚೇರಿಯೇ ವರದಿ ಕೇಳಿರುವುದರಿಂದ ಯಾವುದನ್ನೂ ಮರೆಮಾಚಲು ಸಾಧ್ಯವಿಲ್ಲ. ಮುಖ್ಯಮಂತ್ರಿ ಅವರು ಅಧಿಕಾರಿಗಳಿಂದ ವಿವರಣೆ ಕೇಳಿದ್ದಾರೆ’ ಎಂದು ಉತ್ತರಿಸಿದರು.