‘ದೇವರಾಜೇಗೌಡ ಜೈಲಿನಿಂದ ಹೊರಬಂದರೆ ಸರ್ಕಾರ ಬಿದ್ದು ಹೋಗುತ್ತದೆ’ ಎಂಬ ಹೇಳಿಕೆ ಕುರಿತ ಪ್ರಶ್ನೆಗೆ ಉತ್ತರಿಸಿದ ಸಚಿವರು, ‘ದೇವರಾಜೇಗೌಡರಂತಹ ನೂರು ಜನ ಜೈಲಿಂದ ಹೊರಬಂದರೂ ಸರ್ಕಾರ ಬೀಳುವುದಿಲ್ಲ. ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಪೆನ್ಡ್ರೈವ್ ಹಂಚಿರುವುದು ಬಿಜೆಪಿಯ ಕುತಂತ್ರ. ಪೆನ್ಡ್ರೈವ್ ಇದೆ ಎಂದು ಹೇಳುತ್ತಿದ್ದವರು ದೇವರಾಜೇಗೌಡ. ಅವರೇ ಅದನ್ನು ಹೊರಗಡೆ ಬಿಟ್ಟಿರಬೇಕು. ಅವರ ಬಳಿ ಏನೇ ಸಾಕ್ಷಿ ಇದ್ದರೂ ಎಸ್ಐಟಿಗೆ ಕೊಡಲಿ. ಯಾರಾದರೂ ಕುತಂತ್ರ ಮಾಡಿರುವ ಸಾಕ್ಷಿ ಇದ್ದರೂ ಕೊಡಲಿ. ಪ್ರಜ್ವಲ್ ನಮ್ಮ ದೇಶದಲ್ಲಿ ಇಲ್ಲದಿರುವುದರಿಂದ ಬಂಧನ ಸಾಧ್ಯವಾಗಿಲ್ಲ’ ಎಂದರು.