ಶಾಸಕರಾದ ಸಿ.ಪುಟ್ಟರಂಗಶೆಟ್ಟಿ, ಆರ್.ನರೇಂದ್ರ, ಎನ್.ಮಹೇಶ್, ಸಿ.ಎಸ್.ನಿರಂಜನಕುಮಾರ್ ಮಾತನಾಡಿ, ‘ನ್ಯಾಯಬೆಲೆ ಅಂಗಡಿಗಳಲ್ಲಿ ಪಡಿತರದಾರರಿಗೆ ತೊಂದರೆ ಆಗಬಾರದು. ಪಡಿತರದಾರರಿಂದ ಯಾವುದೇ ಕಾರಣಕ್ಕೂ ಹಣ ಪಡೆಯಬಾರದು. ಪಡಿತರ ಅಂಗಡಿ ಹೊರತುಪಡಿಸಿ ಇತರೆ ಅಂಗಡಿಗಳಲ್ಲಿ ತೂಕ, ಅಳತೆಯಲ್ಲಿ ಲೋಪವಾಗಬಾರದು. ವಸ್ತುಗಳಿಗೆ ಹೆಚ್ಚಿನ ಬೆಲೆ ಪಡೆಯಬಾರದು. ಇಂತಹವುಗಳ ಬಗ್ಗೆ ಇಲಾಖೆ ಅಧಿಕಾರಿಗಳು ಗಮನ ಹರಿಸಬೇಕು’ ಎಂದರು.