ಈ ಬಗ್ಗೆ ‘ಪ್ರಜಾವಾಣಿ’ಗೆ ಪ್ರತಿಕ್ರಿಯಿಸಿದ ಲೋಕೋಪಯೋಗಿ ಇಲಾಖೆಯ ಕಾರ್ಯಪಾಲಕ ಎಂಜಿನಿಯರ್ ಸುರೇಂದ್ರ ಅವರು, ‘ಎರಡು ಕಡೆ ಸಣ್ಣ ಪ್ರಮಾಣದಲ್ಲಿ ಭೂ ಕುಸಿತ ಉಂಟಾಗಿದೆ. ಇದರಿಂದ ವಾಹನಗಳ ಓಡಾಡಕ್ಕೆ ತೊಂದರೆಯಾಗುವುದಿಲ್ಲ. ಮಳೆ ಬಂದರೂ ಭೂ ಕುಸಿತ ಉಂಟಾಗದ ರೀತಿಯಲ್ಲಿ ದುರಸ್ತಿ ಮಾಡಲು ಕ್ರಮ ಕೈಗೊಳ್ಳಲಾಗಿದೆ’ ಎಂದು ಹೇಳಿದರು.