ಸಭೆಯಲ್ಲಿ ಭಾಗವಹಿಸಿದ್ದ ಪಿಡಿಒಗಳು ಮಾತನಾಡಿ, ‘ಗ್ರಾಮಗಳಿಗೆ ಹೊರಜಿಲ್ಲೆ, ಬೇರೆ ರಾಜ್ಯಗಳಿಂದ ಬಂದಿರುವವರ ಬಗ್ಗೆ ನಿಗಾ ವಹಿಸಲಾಗುತ್ತಿದೆ. ಒಂದು ವೇಳೆ ಯಾರದಾದರು ಬಂದಿದ್ದರೆ, ಅವರ ಮನೆ ಮನೆಗೆ ತೆರಳಿ, ಆಸ್ಪತ್ರೆಗಳಲ್ಲಿ ತೆರಳಿ ತಪಾಸಣೆ ಮಾಡಿಸಿಕೊಳ್ಳುವಂತೆ ಜಾಗೃತಿ ಮೂಡಿಸಲಾಗುತ್ತಿದೆ. ಆಶಾಕಾರ್ಯಕರ್ತೆಯರಿಂದ ವರದಿ ತರಿಸಿಕೊಂಡು ಕ್ರಮವಹಿಸಲಾಗುತ್ತಿದೆ’ ಎಂದರು.