<p><strong>ಚಾಮರಾಜನಗರ</strong>: ಪತ್ನಿ ಹಾಗೂ ಇಬ್ಬರು ಮಕ್ಕಳೊಂದಿಗೆ ಆತ್ಮಹತ್ಯೆ ಮಾಡಿಕೊಂಡತಾಲ್ಲೂಕಿನ ಎಚ್.ಮೂಕಹಳ್ಳಿ ಗ್ರಾಮದ ರೈತ ಮಹಾದೇವಪ್ಪ ಅವರ ಮನೆಗೆ ಕೊಳ್ಳೇಗಾಲ ಕ್ಷೇತ್ರದ ಶಾಸಕ ಎನ್.ಮಹೇಶ್ ಅವರು ಗುರುವಾರ ಭೇಟಿ ನೀಡಿ, ರೈತನ ಹಿರಿಯ ಮಗಳು ಜ್ಯೋತಿ ಹಾಗೂ ಅಳಿಯ ಸುರೇಶ್ ಅವರಿಗೆ ಸಾಂತ್ವನ ಹೇಳಿದರು.</p>.<p>ಜ್ಯೋತಿ ಅವರಿಗೆ ವೈಯಕ್ತಿಕವಾಗಿ ಪರಿಹಾರ ನೀಡಿ, ಧೈರ್ಯ ತುಂಬಿದರು.</p>.<p>'ಕೋವಿಡ್ ಬಂದರೆ ನೆರೆಹೊರೆ ಜನರು ಸಂತ್ರಸ್ತರೊಡನೆ ಪ್ರೀತಿ ವಿಶ್ವಾಸದಿಂದ ಮಾತನಾಡಿ,ನೆರೆ ಹೊರೆಯವರಿಗೆ ಅಗತ್ಯ ಇರುವ ನೆರವು ಕಲ್ಪಿಸಲು ಮುಂದಾಗಬೇಕು. ಕೋವಿಡ್-19 ತಾತ್ಕಾಲಿಕವಾಗಿ ಇದ್ದು, ಔಷಧೋಪಚಾರ ಸಿಗುತ್ತಿದ್ದಂತೆಯೇ ಇಲ್ಲವಾಗುತ್ತದೆ. ಹಾಗಾಗಿ, ಗ್ರಾಮೀಣ ಭಾಗದ ಜನರು ವೈರಾಣು ಸಮಸ್ಯೆಗೆ ಹೆದರಬಾರದು. ಭಯದಿಂದ ಆತ್ಮಹತ್ಯೆಮಾಡಿಕೊಳ್ಳುವ ದಿಸೆಯಲ್ಲಿ ಚಿಂತಿಸಬಾರದು' ಎಂದರು.</p>.<p>ಹಿರಿಯ ಮಗಳು ಗ್ರಾಮದಲ್ಲಿ ಇರಲು ಒಲವು ವ್ಯಕ್ತಪಡಿಸಿದರೆ, ಮನೆ ನಿರ್ಮಿಸಿಕೊಡಲಾಗುವುದು ಹಾಗೂ ವ್ಯವಸಾಯದ ಭೂಮಿಗೆ ನೀರಾವರಿ ವ್ಯವಸ್ಥೆ ಕಲ್ಪಿಸಿ ಕೊಡುವ ಭರವಸೆ ನೀಡಿದರು.</p>.<p class="Subhead">ಕಾಂಗ್ರೆಸ್ ಮುಖಂಡರಿಂದ ಸಾಂತ್ವನ, ನೆರವು:ಕಾಂಗ್ರೆಸ್ ಜಿಲ್ಲಾ ಸಮಿತಿ ಅಧ್ಯಕ್ಷ ಪಿ.ಮರಿಸ್ವಾಮಿ ಹಾಗೂ ಮುಖಂಡ ಕೆ.ಪಿ.ಸದಾಶಿವಮೂರ್ತಿ ಅವರು ಗುರುವಾರ ಮಹಾದೇವಪ್ಪ ಅವರ ಮನೆಗೆ ಭೇಟಿ ನೀಡಿ, ಹಿರಿಯ ಮಗಳು ಜ್ಯೋತಿ ಹಾಗೂ ಆಕೆಯ ಪತಿ ಸುರೇಶ್ಗೆ ಸಾಂತ್ವನ ಹೇಳಿ, ವೈಯಕ್ತಿಕ ಧನಸಹಾಯ ಮಾಡಿದರು.</p>.<p>ಈ ವೇಳೆ ಮಾತನಾಡಿದ ಕೆ.ಪಿ.ಸದಾಶಿವಮೂರ್ತಿ ಅವರು, ‘ನನ್ನ ಜಿಲ್ಲಾ ಪಂಚಾಯಿತಿ ಕ್ಷೇತ್ರಕ್ಕೆ ಒಳಪಡುವ ಎಚ್.ಮೂಕಳ್ಳಿ ಗ್ರಾಮದಲ್ಲಿ ಒಂದೇ ಕುಟುಂಬದ ನಾಲ್ವರು ಸಾಮೂಹಿಕ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನೋವು ತರುವಂತಹದ್ದು, ಈ ಘಟನೆಯಿಂದ ಮಾನವ ಕುಲವೇ ತಲೆತಗ್ಗಿಸುವಂತಾಗಿದೆ. ಕೋವಿಡ್ಗೆ ಯಾರೊಬ್ಬರೂ ಹೆದರಬಾರದು. ಸೋಂಕಿತರನ್ನು ಕೀಳಾಗಿ ಕಾಣದೆ ಅವರಿಗೆ ಧೈರ್ಯ ತುಂಬಬೇಕು. ಅವರಿಗೆ ಸಹಾಯ ಮಾಡುವ ಮೂಲಕ ಮಾನವೀಯತೆ ಪ್ರದರ್ಶಿಸಬೇಕು’ ಎಂದು ಹೇಳಿದರು.</p>.<p>ಪಿ.ಮರಿಸ್ವಾಮಿ ಅವರು ಮಾತನಾಡಿ, ಆತ್ಮಹತ್ಯೆಗೆ ಶರಣಾದ ಮಹಾದೇವಪ್ಪ ಅವರ ಕುಟುಂಬಕ್ಕೆ ಸರ್ಕಾರ ಸೂಕ್ತ ಪರಿಹಾರ ಎಂದು ಒತ್ತಾಯಿಸಿದರು.</p>.<p>ಜಿಲ್ಲಾ ಕಾಂಗ್ರೆಸ್ ವಕ್ತಾರ ಕೆರೆಹಳ್ಳಿ ನವೀನ್, ಮುಖಂಡ ಬೂದಂಬಳ್ಳಿ ಶಂಕರ್, ಗ್ರಾಮದ ಮುಖಂಡರಾದ ಪ್ರಕಾಶ್, ನಂಜುಂಡಸ್ವಾಮಿ, ಮಹದೇವಸ್ವಾಮಿ ಇದ್ದರು.</p>.<p class="Briefhead">ಇನ್ನೂ ತಿಳಿದು ಬಾರದ ಕಾರಣ</p>.<p>ಈ ಮಧ್ಯೆ, ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ತನಿಖೆ ಮುಂದುವರಿಸಿದ್ದಾರೆ. ಆದರೆ, ಆತ್ಮಹತ್ಯೆಗೆ ಏನು ಕಾರಣ ಎಂಬುದು ಇನ್ನೂ ಸ್ಪಷ್ಟವಾಗಿ ತಿಳಿದು ಬಂದಿಲ್ಲ.</p>.<p>ಬುಧವಾರ ಸಂಜೆ ಮರಣೋತ್ತರ ಪರೀಕ್ಷೆಗೂ ಮೊದಲು ಎಲ್ಲ ನಾಲ್ಕು ಜನರ ಗಂಟಲು ದ್ರವ ಸಂಗ್ರಹಿಸಿ ಕೋವಿಡ್ ಪರೀಕ್ಷೆ ನಡೆಸಲಾಗಿತ್ತು. ಎಲ್ಲರ ವರದಿಯೂ ನೆಗೆಟಿವ್ ಬಂದಿತ್ತು. ಆ ಬಳಿಕ ಮರಣೋತ್ತರ ಪರೀಕ್ಷೆ ನಡೆಸಿ ಶವಗಳಳನ್ನು ಕುಟುಂಬದವರಿಗೆ ಹಸ್ತಾಂತರಿಸಲಾಯಿತು. ರಾತ್ರಿಯೇ ಅಂತ್ಯ ಸಂಸ್ಕಾರ ನೆರವೇರಿಸಲಾಗಿದೆ.</p>.<p>ಆರ್ಥಿಕ ಸಂಕಷ್ಟದಿಂದ ಆತ್ಮಹತ್ಯೆ ಮಾಡಿಕೊಂಡಿದ್ದಾರೆ, ಕೋವಿಡ್ ಬಂದ ನಂತರ ಊರಿನ ಜನರು ಸರಿಯಾಗಿ ಬೆರೆಯುತ್ತಿರಲಿಲ್ಲ ಎಂಬ ಕಾರಣಕ್ಕೆ ಮಹಾದೇವಪ್ಪ ಅವರು ತೀವ್ರ ನೊಂದಿದ್ದರು ಎಂಬ ಮಾತುಗಳು ಕೇಳಿ ಬಂದಿದ್ದವು.</p>.<p>ಆದರೆ, ಪೊಲೀಸರು ಈ ಎರಡು ಕಾರಣಗಳನ್ನೂ ನಿರಾಕರಿಸುತ್ತಾರೆ.</p>.<p>ಈ ಬಗ್ಗೆ ‘ಪ್ರಜಾವಾಣಿ’ಗೆ ಪ್ರತಿಕ್ರಿಯಿಸಿದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ದಿವ್ಯಾ ಸಾರಾ ಥಾಮಸ್ ಅವರು, ‘ತನಿಖೆ ನಡೆಯುತ್ತಿದೆ. ಆತ್ಮಹತ್ಯೆಗೆ ಇನ್ನೂ ಸ್ಪಷ್ಟವಾದ ಕಾರಣ ತಿಳಿದು ಬಂದಿಲ್ಲ. ಅವರ ಸ್ನೇಹಿತರು, ಕುಟುಂಬದವರೊಂದಿಗೆ ಮಹಾದೇವಪ್ಪ ಅವರು ಯಾವುದೇ ವಿಚಾರ ಹಂಚಿಕೊಂಡಿಲ್ಲ’ ಎಂದರು.</p>.<p>ಊರಿನವರು ಬೆರೆಯುತ್ತಿರಲಿಲ್ಲ ಎಂಬ ಮಾತು ಕೇಳಿ ಬರುತ್ತಿರುವುದರ ಬಗ್ಗೆ ಕೇಳಿದ್ದಕ್ಕೆ, ‘ಅಂತಹ ಸಾಧ್ಯತೆ ಇಲ್ಲ. ಸ್ನೇಹಿತರು ಅವರೊಂದಿಗೆ ಚೆನ್ನಾಗಿಯೇ ಇದ್ದರು. ಎಲ್ಲ ಸಹಕಾರವನ್ನೂ ನೀಡುತ್ತಿದ್ದರು’ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಾಮರಾಜನಗರ</strong>: ಪತ್ನಿ ಹಾಗೂ ಇಬ್ಬರು ಮಕ್ಕಳೊಂದಿಗೆ ಆತ್ಮಹತ್ಯೆ ಮಾಡಿಕೊಂಡತಾಲ್ಲೂಕಿನ ಎಚ್.ಮೂಕಹಳ್ಳಿ ಗ್ರಾಮದ ರೈತ ಮಹಾದೇವಪ್ಪ ಅವರ ಮನೆಗೆ ಕೊಳ್ಳೇಗಾಲ ಕ್ಷೇತ್ರದ ಶಾಸಕ ಎನ್.ಮಹೇಶ್ ಅವರು ಗುರುವಾರ ಭೇಟಿ ನೀಡಿ, ರೈತನ ಹಿರಿಯ ಮಗಳು ಜ್ಯೋತಿ ಹಾಗೂ ಅಳಿಯ ಸುರೇಶ್ ಅವರಿಗೆ ಸಾಂತ್ವನ ಹೇಳಿದರು.</p>.<p>ಜ್ಯೋತಿ ಅವರಿಗೆ ವೈಯಕ್ತಿಕವಾಗಿ ಪರಿಹಾರ ನೀಡಿ, ಧೈರ್ಯ ತುಂಬಿದರು.</p>.<p>'ಕೋವಿಡ್ ಬಂದರೆ ನೆರೆಹೊರೆ ಜನರು ಸಂತ್ರಸ್ತರೊಡನೆ ಪ್ರೀತಿ ವಿಶ್ವಾಸದಿಂದ ಮಾತನಾಡಿ,ನೆರೆ ಹೊರೆಯವರಿಗೆ ಅಗತ್ಯ ಇರುವ ನೆರವು ಕಲ್ಪಿಸಲು ಮುಂದಾಗಬೇಕು. ಕೋವಿಡ್-19 ತಾತ್ಕಾಲಿಕವಾಗಿ ಇದ್ದು, ಔಷಧೋಪಚಾರ ಸಿಗುತ್ತಿದ್ದಂತೆಯೇ ಇಲ್ಲವಾಗುತ್ತದೆ. ಹಾಗಾಗಿ, ಗ್ರಾಮೀಣ ಭಾಗದ ಜನರು ವೈರಾಣು ಸಮಸ್ಯೆಗೆ ಹೆದರಬಾರದು. ಭಯದಿಂದ ಆತ್ಮಹತ್ಯೆಮಾಡಿಕೊಳ್ಳುವ ದಿಸೆಯಲ್ಲಿ ಚಿಂತಿಸಬಾರದು' ಎಂದರು.</p>.<p>ಹಿರಿಯ ಮಗಳು ಗ್ರಾಮದಲ್ಲಿ ಇರಲು ಒಲವು ವ್ಯಕ್ತಪಡಿಸಿದರೆ, ಮನೆ ನಿರ್ಮಿಸಿಕೊಡಲಾಗುವುದು ಹಾಗೂ ವ್ಯವಸಾಯದ ಭೂಮಿಗೆ ನೀರಾವರಿ ವ್ಯವಸ್ಥೆ ಕಲ್ಪಿಸಿ ಕೊಡುವ ಭರವಸೆ ನೀಡಿದರು.</p>.<p class="Subhead">ಕಾಂಗ್ರೆಸ್ ಮುಖಂಡರಿಂದ ಸಾಂತ್ವನ, ನೆರವು:ಕಾಂಗ್ರೆಸ್ ಜಿಲ್ಲಾ ಸಮಿತಿ ಅಧ್ಯಕ್ಷ ಪಿ.ಮರಿಸ್ವಾಮಿ ಹಾಗೂ ಮುಖಂಡ ಕೆ.ಪಿ.ಸದಾಶಿವಮೂರ್ತಿ ಅವರು ಗುರುವಾರ ಮಹಾದೇವಪ್ಪ ಅವರ ಮನೆಗೆ ಭೇಟಿ ನೀಡಿ, ಹಿರಿಯ ಮಗಳು ಜ್ಯೋತಿ ಹಾಗೂ ಆಕೆಯ ಪತಿ ಸುರೇಶ್ಗೆ ಸಾಂತ್ವನ ಹೇಳಿ, ವೈಯಕ್ತಿಕ ಧನಸಹಾಯ ಮಾಡಿದರು.</p>.<p>ಈ ವೇಳೆ ಮಾತನಾಡಿದ ಕೆ.ಪಿ.ಸದಾಶಿವಮೂರ್ತಿ ಅವರು, ‘ನನ್ನ ಜಿಲ್ಲಾ ಪಂಚಾಯಿತಿ ಕ್ಷೇತ್ರಕ್ಕೆ ಒಳಪಡುವ ಎಚ್.ಮೂಕಳ್ಳಿ ಗ್ರಾಮದಲ್ಲಿ ಒಂದೇ ಕುಟುಂಬದ ನಾಲ್ವರು ಸಾಮೂಹಿಕ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನೋವು ತರುವಂತಹದ್ದು, ಈ ಘಟನೆಯಿಂದ ಮಾನವ ಕುಲವೇ ತಲೆತಗ್ಗಿಸುವಂತಾಗಿದೆ. ಕೋವಿಡ್ಗೆ ಯಾರೊಬ್ಬರೂ ಹೆದರಬಾರದು. ಸೋಂಕಿತರನ್ನು ಕೀಳಾಗಿ ಕಾಣದೆ ಅವರಿಗೆ ಧೈರ್ಯ ತುಂಬಬೇಕು. ಅವರಿಗೆ ಸಹಾಯ ಮಾಡುವ ಮೂಲಕ ಮಾನವೀಯತೆ ಪ್ರದರ್ಶಿಸಬೇಕು’ ಎಂದು ಹೇಳಿದರು.</p>.<p>ಪಿ.ಮರಿಸ್ವಾಮಿ ಅವರು ಮಾತನಾಡಿ, ಆತ್ಮಹತ್ಯೆಗೆ ಶರಣಾದ ಮಹಾದೇವಪ್ಪ ಅವರ ಕುಟುಂಬಕ್ಕೆ ಸರ್ಕಾರ ಸೂಕ್ತ ಪರಿಹಾರ ಎಂದು ಒತ್ತಾಯಿಸಿದರು.</p>.<p>ಜಿಲ್ಲಾ ಕಾಂಗ್ರೆಸ್ ವಕ್ತಾರ ಕೆರೆಹಳ್ಳಿ ನವೀನ್, ಮುಖಂಡ ಬೂದಂಬಳ್ಳಿ ಶಂಕರ್, ಗ್ರಾಮದ ಮುಖಂಡರಾದ ಪ್ರಕಾಶ್, ನಂಜುಂಡಸ್ವಾಮಿ, ಮಹದೇವಸ್ವಾಮಿ ಇದ್ದರು.</p>.<p class="Briefhead">ಇನ್ನೂ ತಿಳಿದು ಬಾರದ ಕಾರಣ</p>.<p>ಈ ಮಧ್ಯೆ, ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ತನಿಖೆ ಮುಂದುವರಿಸಿದ್ದಾರೆ. ಆದರೆ, ಆತ್ಮಹತ್ಯೆಗೆ ಏನು ಕಾರಣ ಎಂಬುದು ಇನ್ನೂ ಸ್ಪಷ್ಟವಾಗಿ ತಿಳಿದು ಬಂದಿಲ್ಲ.</p>.<p>ಬುಧವಾರ ಸಂಜೆ ಮರಣೋತ್ತರ ಪರೀಕ್ಷೆಗೂ ಮೊದಲು ಎಲ್ಲ ನಾಲ್ಕು ಜನರ ಗಂಟಲು ದ್ರವ ಸಂಗ್ರಹಿಸಿ ಕೋವಿಡ್ ಪರೀಕ್ಷೆ ನಡೆಸಲಾಗಿತ್ತು. ಎಲ್ಲರ ವರದಿಯೂ ನೆಗೆಟಿವ್ ಬಂದಿತ್ತು. ಆ ಬಳಿಕ ಮರಣೋತ್ತರ ಪರೀಕ್ಷೆ ನಡೆಸಿ ಶವಗಳಳನ್ನು ಕುಟುಂಬದವರಿಗೆ ಹಸ್ತಾಂತರಿಸಲಾಯಿತು. ರಾತ್ರಿಯೇ ಅಂತ್ಯ ಸಂಸ್ಕಾರ ನೆರವೇರಿಸಲಾಗಿದೆ.</p>.<p>ಆರ್ಥಿಕ ಸಂಕಷ್ಟದಿಂದ ಆತ್ಮಹತ್ಯೆ ಮಾಡಿಕೊಂಡಿದ್ದಾರೆ, ಕೋವಿಡ್ ಬಂದ ನಂತರ ಊರಿನ ಜನರು ಸರಿಯಾಗಿ ಬೆರೆಯುತ್ತಿರಲಿಲ್ಲ ಎಂಬ ಕಾರಣಕ್ಕೆ ಮಹಾದೇವಪ್ಪ ಅವರು ತೀವ್ರ ನೊಂದಿದ್ದರು ಎಂಬ ಮಾತುಗಳು ಕೇಳಿ ಬಂದಿದ್ದವು.</p>.<p>ಆದರೆ, ಪೊಲೀಸರು ಈ ಎರಡು ಕಾರಣಗಳನ್ನೂ ನಿರಾಕರಿಸುತ್ತಾರೆ.</p>.<p>ಈ ಬಗ್ಗೆ ‘ಪ್ರಜಾವಾಣಿ’ಗೆ ಪ್ರತಿಕ್ರಿಯಿಸಿದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ದಿವ್ಯಾ ಸಾರಾ ಥಾಮಸ್ ಅವರು, ‘ತನಿಖೆ ನಡೆಯುತ್ತಿದೆ. ಆತ್ಮಹತ್ಯೆಗೆ ಇನ್ನೂ ಸ್ಪಷ್ಟವಾದ ಕಾರಣ ತಿಳಿದು ಬಂದಿಲ್ಲ. ಅವರ ಸ್ನೇಹಿತರು, ಕುಟುಂಬದವರೊಂದಿಗೆ ಮಹಾದೇವಪ್ಪ ಅವರು ಯಾವುದೇ ವಿಚಾರ ಹಂಚಿಕೊಂಡಿಲ್ಲ’ ಎಂದರು.</p>.<p>ಊರಿನವರು ಬೆರೆಯುತ್ತಿರಲಿಲ್ಲ ಎಂಬ ಮಾತು ಕೇಳಿ ಬರುತ್ತಿರುವುದರ ಬಗ್ಗೆ ಕೇಳಿದ್ದಕ್ಕೆ, ‘ಅಂತಹ ಸಾಧ್ಯತೆ ಇಲ್ಲ. ಸ್ನೇಹಿತರು ಅವರೊಂದಿಗೆ ಚೆನ್ನಾಗಿಯೇ ಇದ್ದರು. ಎಲ್ಲ ಸಹಕಾರವನ್ನೂ ನೀಡುತ್ತಿದ್ದರು’ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>