ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೊಳ್ಳೇಗಾಲದಲ್ಲಿ ಬಿಎಸ್‌ಪಿ ಕಾರ್ಯಕರ್ತರ ಮೇಲೆ ಎನ್‌.ಮಹೇಶ್‌ ಬೆಂಬಲಿಗರಿಂದ ಹಲ್ಲೆ

Last Updated 3 ಡಿಸೆಂಬರ್ 2020, 2:40 IST
ಅಕ್ಷರ ಗಾತ್ರ

ಕೊಳ್ಳೇಗಾಲ: ಶಾಸಕ ಎನ್.ಮಹೇಶ್ ವಿರುದ್ಧ ಪತ್ರಿಕಾಗೋಷ್ಠಿ ನಡೆಸಿದ ಬಿಎಸ್‌ಪಿಯ ಮೂವರು ಕಾರ್ಯಕರ್ತರ ಮೇಲೆ ಶಾಸಕರ ಬೆಂಬಲಿಗರು ಬುಧವಾರ ಸಂಜೆ ಹಲ್ಲೆ ನಡೆಸಿದ್ದಾರೆ.

ಬಿಎಸ್‌ಪಿ ಟೌನ್ ಉಪಾಧ್ಯಕ್ಷ ಹನುಮಂತು, ಪ್ರಧಾನ ಕಾರ್ಯದರ್ಶಿ ರಂಗಸ್ವಾಮಿ, ಕಾರ್ಯಕರ್ತ ಚೈನಾರಾಂ ಕಾಪಡಿ ಮೇಲೆ ಹಲ್ಲೆ ನಡೆಸಲಾಗಿದೆ. ಎನ್.ಮಹೇಶ್ ಬೆಂಬಲಿಗರು, ನಗರಸಭೆ ಸದಸ್ಯ ನಾಸೀರ್ ಶರೀಫ್ ಮತ್ತು ಜಾಕಾವುಲ್ಲಾ ಅವರು ಹಲ್ಲೆ ಮಾಡುತ್ತಿರುವ ವಿಡಿಯೊ ಸಾಮಾಜಿಕ ಜಾಲ ತಾಣಗಳಲ್ಲಿ ಹರಿದಾಡುತ್ತಿದೆ.

ಈ ಸಂಬಂಧ ಠಾಣೆಯಲ್ಲಿ ರಾತ್ರಿವರೆಗೂ ಪ್ರಕರಣ ದಾಖಲಾಗಿರಲಿಲ್ಲ. ಪ್ರತಿಕ್ರಿಯೆಗಾಗಿ ಶಾಸಕರಿಗೆ ಕರೆ ಮಾಡಿದರೂ, ಸಂಪರ್ಕಕ್ಕೆ ಸಿಗಲಿಲ್ಲ.

ಬಿಎಸ್‌ಪಿಯ ಕ್ಷೇತ್ರ ಅಧ್ಯಕ್ಷ ಎಸ್.ರಾಜಶೇಖರ್ ಮೂರ್ತಿ ಹಾಗೂಹನುಮಂತು, ಪ್ರಧಾನ ಕಾರ್ಯದರ್ಶಿ ರಂಗಸ್ವಾಮಿ, ಕಾರ್ಯಕರ್ತ ಚೈನಾರಾಂ ಕಾಪಡಿ ಅವರು ಬುಧವಾರ ಬೆಳಿಗ್ಗೆ ಪತ್ರಿಕಾಗೋಷ್ಠಿ ನಡೆಸಿ ಶಾಸಕ ಎನ್.ಮಹೇಶ್ ವಿರುದ್ಧ ವಾಗ್ದಾಳಿ ನಡೆಸಿದ್ದರು.

ಇದರಿಂದ ಕೋಪಗೊಂಡ, ಶಾಸಕರ ಬೆಂಬಲಿಗರಾದನಾಸೀರ್ ಶರೀಫ್ ಮತ್ತು ಜಾಕಾವುಲ್ಲಾ ಬುಧವಾರ ಸಂಜೆ ಚೈನಾರಾಂ ಕಾಪಡಿ ಅವರರಾಘವೇಂದ್ರ ಬ್ಯಾಂಕರ್ ಮಳಿಗೆಗೆ ಹೋಗಿ ಹಲ್ಲೆ ಮಾಡಿದ್ದಾರೆ.

‘ನಿಮಗೆ ಪತ್ರಿಕಾಗೋಷ್ಠಿ ನಡೆಸಲು ಅನುಮತಿ ನೀಡಿದ್ದು ಯಾರು’ ಎಂದು ನಾಸೀರ್ ಶರೀಫ್ ಮತ್ತು ಜಾಕಾವುಲ್ಲಾ ಅವರು ಜಗಳವಾಡುತ್ತಿರುವುದು ವಿಡಿಯೊದಲ್ಲಿ ದಾಖಲಾಗಿದೆ. ಗಾಯಾಳುಗಳು ಸರ್ಕಾರಿ ಉಪ ವಿಭಾಗ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ.

ಘಟನೆ ಬಗ್ಗೆ ‘ಪ್ರಜಾವಾಣಿ’ಗೆ ಪ್ರತಿಕ್ರಿಯಿಸಿರುವ ರಾಜಶೇಖರ ಮೂರ್ತಿ ಅವರು, ‘ಎನ್‌.ಮಹೇಶ್‌ ಬೆಂಬಲಿಗರು ನಮ್ಮ ಕಾರ್ಯಕರ್ತರ ಮೇಲೆ ದೌರ್ಜನ್ಯ ಎಸಗಿದ್ದಾರೆ. ಇದು ಅತ್ಯಂತ ಖಂಡನೀಯ. ಪಕ್ಷದ ಮುಂದಿನ ನಡೆಯಲು ರಾಜ್ಯ ಘಟಕದ ಅಧ್ಯಕ್ಷರು ತೀರ್ಮಾನಿಸುತ್ತಾರೆ’ ಎಂದು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT