<p><strong>ಚಾಮರಾಜನಗರ:</strong> ಈಚೆಗೆ ಆಲಿಕಲ್ಲು ಮಳೆ ಸುರಿದು ಬೆಳೆ ಹಾನಿ ಹಾಗೂ ಮನೆ ಹಾನಿ ಸಂಭವಿಸಿದ ತಾಲ್ಲೂಕಿನ ದೊಡ್ಡಮೋಳೆ, ಕಟ್ನವಾಡಿ, ಕೆ.ಕೆ ಹುಂಡಿ ಗ್ರಾಮಗಳಿಗೆ ಶಾಸಕ ಪುಟ್ಟರಂಗಶೆಟ್ಟಿ ಭೇಟಿ ನೀಡಿ ಪರಿಶೀಲಿಸಿದರು.</p>.<p>ಕೆ.ಕೆ ಹುಂಡಿ ಗ್ರಾಮ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಆಲಿಕಲ್ಲು ಮಳೆಗೆ ಬಾಳೆ ಬೆಳೆ ನಾಶವಾಗಿರುವುದನ್ನು ವೀಕ್ಷಿಸಿದ ಶಾಸಕರು ಅಧಿಕಾರಿಗಳು ಹಾಗೂ ರೈತರಿಂದ ಹಾನಿಯ ವಿವರ ಪಡೆದರು. </p>.<p>ದೊಡ್ಡಮೋಳೆ, ಕಟ್ನವಾಡಿ ಗ್ರಾಮಗಳಲ್ಲಿ ಮಳೆಗೆ ಮನೆಯ ಗೋಡೆ ಕುಸಿದಿದ್ದು ರಾಜಸ್ವ ನಿರೀಕ್ಷಕರು, ಕಂದಾಯ ಅಧಿಕಾರಿಗಳ ತಂಡ ಭೇಟಿನೀಡಿ, ಹಾನಿ ಅಂದಾಜಿಸಿ ಸರ್ಕಾರದಿಂದ ಸೂಕ್ತ ಪರಿಹಾರ ನೀಡಲು ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದರು.</p>.<p>ಈ ಸಂದರ್ಭ ರಾಜಸ್ವ ನಿರೀಕ್ಷಕ ರಾಜಶೇಖರ್, ಗುರುಸಿದ್ದಪ್ಪ, ಗ್ರಾಮ ಆಡಳಿತಾಧಿಕಾರಿ ವೆಂಕಟೇಶ್, ಮುಖಂಡರಾದ ಎಚ್.ಎಂ.ಮಹದೇವಶೆಟ್ಟಿ, ಮಂಜುನಾಥ್, ಕುಮಾರ್, ಉಡಿಗಾಲ ನಂಜಪ್ಪ, ದೊರೆಸ್ವಾಮಿ, ಕೇಶವಮೂರ್ತಿ, ಶಿವಣ್ಣ, ಸುಬ್ರಹ್ಮಣ್ಯ, ಮಹದೇವಸ್ವಾಮಿ, ಕುಮಾರ್ ಇತರರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಾಮರಾಜನಗರ:</strong> ಈಚೆಗೆ ಆಲಿಕಲ್ಲು ಮಳೆ ಸುರಿದು ಬೆಳೆ ಹಾನಿ ಹಾಗೂ ಮನೆ ಹಾನಿ ಸಂಭವಿಸಿದ ತಾಲ್ಲೂಕಿನ ದೊಡ್ಡಮೋಳೆ, ಕಟ್ನವಾಡಿ, ಕೆ.ಕೆ ಹುಂಡಿ ಗ್ರಾಮಗಳಿಗೆ ಶಾಸಕ ಪುಟ್ಟರಂಗಶೆಟ್ಟಿ ಭೇಟಿ ನೀಡಿ ಪರಿಶೀಲಿಸಿದರು.</p>.<p>ಕೆ.ಕೆ ಹುಂಡಿ ಗ್ರಾಮ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಆಲಿಕಲ್ಲು ಮಳೆಗೆ ಬಾಳೆ ಬೆಳೆ ನಾಶವಾಗಿರುವುದನ್ನು ವೀಕ್ಷಿಸಿದ ಶಾಸಕರು ಅಧಿಕಾರಿಗಳು ಹಾಗೂ ರೈತರಿಂದ ಹಾನಿಯ ವಿವರ ಪಡೆದರು. </p>.<p>ದೊಡ್ಡಮೋಳೆ, ಕಟ್ನವಾಡಿ ಗ್ರಾಮಗಳಲ್ಲಿ ಮಳೆಗೆ ಮನೆಯ ಗೋಡೆ ಕುಸಿದಿದ್ದು ರಾಜಸ್ವ ನಿರೀಕ್ಷಕರು, ಕಂದಾಯ ಅಧಿಕಾರಿಗಳ ತಂಡ ಭೇಟಿನೀಡಿ, ಹಾನಿ ಅಂದಾಜಿಸಿ ಸರ್ಕಾರದಿಂದ ಸೂಕ್ತ ಪರಿಹಾರ ನೀಡಲು ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದರು.</p>.<p>ಈ ಸಂದರ್ಭ ರಾಜಸ್ವ ನಿರೀಕ್ಷಕ ರಾಜಶೇಖರ್, ಗುರುಸಿದ್ದಪ್ಪ, ಗ್ರಾಮ ಆಡಳಿತಾಧಿಕಾರಿ ವೆಂಕಟೇಶ್, ಮುಖಂಡರಾದ ಎಚ್.ಎಂ.ಮಹದೇವಶೆಟ್ಟಿ, ಮಂಜುನಾಥ್, ಕುಮಾರ್, ಉಡಿಗಾಲ ನಂಜಪ್ಪ, ದೊರೆಸ್ವಾಮಿ, ಕೇಶವಮೂರ್ತಿ, ಶಿವಣ್ಣ, ಸುಬ್ರಹ್ಮಣ್ಯ, ಮಹದೇವಸ್ವಾಮಿ, ಕುಮಾರ್ ಇತರರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>