ಸಿದ್ಧತೆಗಳ ಬಗ್ಗೆ ‘ಪ್ರಜಾವಾಣಿ’ಯೊಂದಿಗೆ ಮಾತನಾಡಿದ ಪ್ರಾಧಿಕಾರದ ಕಾರ್ಯದರ್ಶಿ ಜಯವಿಭವ ಸ್ವಾಮಿ ಅವರು, ‘ಇತ್ತೀಚಿನ ದಿನಗಳಲ್ಲಿ ಬೆಟ್ಟಕ್ಕೆ ಬರುವ ಭಕ್ತರ ಸಂಖ್ಯೆ ಹೆಚ್ಚುತ್ತಿದೆ. ಹೊಸ ವರ್ಷದ ಸಂದರ್ಭದಲ್ಲೂ ಹೆಚ್ಚು ಜನರು ಬರುತ್ತಾರೆ ಎಂಬ ನಿರೀಕ್ಷೆ ಇದೆ. ಈಗಾಗಲೇ ಪ್ರಾಧಿಕಾರದ ಅತಿಥಿಗೃಹಗಳಲ್ಲಿ ಶೇ 70ರಷ್ಟು ಕೊಠಡಿಗಳನ್ನು ಭಕ್ತರು ಕಾಯ್ದಿರಿಸಿದ್ದಾರೆ. ಶೇ 30ರಷ್ಟು ಕೊಠಡಿಗಳನ್ನು ಗಣ್ಯರಿಗಾಗಿ ಮೀಸಲಿಟ್ಟಿದ್ದೇವೆ’ ಎಂದು ಹೇಳಿದರು.