<p><strong>ಚಾಮರಾಜನಗರ:</strong>ಸರ್ಕಾರವು ವಾರಾಂತ್ಯದ ಕರ್ಫ್ಯೂ ರದ್ದುಪಡಿಸಿರುವುದರಿಂದ ಜಿಲ್ಲೆಯ ಪ್ರಸಿದ್ಧ ಯಾತ್ರಾ ಸ್ಥಳ ಮಹದೇಶ್ವರ ಬೆಟ್ಟದ ಮಲೆ ಮಹದೇಶ್ವರ ಸ್ವಾಮಿ ದೇವಾಲಯ ಶನಿವಾರ ಮತ್ತು ಭಾನುವಾರ ಸೇರಿದಂತೆ ವಾರದ ಎಲ್ಲ ದಿನಗಳಲ್ಲೂ ಭಕ್ತರ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ.</p>.<p>’ತಕ್ಷಣದಿಂದಲೇ ಜಾರಿಗೆ ಬರುವಂತೆ, ಸರ್ಕಾರದ ಮುಂದಿನ ಆದೇಶದವರೆಗೂ ದೇವಾಲಯವು ವಾರದ ಎಲ್ಲ ದಿನ ಬೆಳಿಗ್ಗೆ 5 ಗಂಟೆಯಿಂದ ರಾತ್ರಿ 10 ಗಂಟೆಯವರೆಗೆ ದರ್ಶನಕ್ಕೆ ತೆರೆದಿರುತ್ತದೆ‘ ಎಂದು ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಜಯವಿಭವಸ್ವಾಮಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.</p>.<p>’ಕೋವಿಡ್ ನಿರ್ಬಂಧದ ಭಾಗವಾಗಿಯಾವುದೇ ಉತ್ಸವ, ಸೇವೆಗಳು ಇರುವುದಿಲ್ಲ.ದಾಸೋಹದಲ್ಲಿ ವೈಯಕ್ತಿಕ ಅಂತರ ಕಾಪಾಡಿಕೊಂಡು ತಿಂಡಿ ಪ್ರಸಾದ ನೀಡಲಾಗುತ್ತದೆ.ದೇವಾಲಯದ ಗರ್ಭಗುಡಿಯ ಮುಂಭಾಗ ಒಂದು ಬಾರಿಗೆ 50 ಜನರಿಗೆ ಮಾತ್ರ ಪ್ರವೇಶ ಕಲ್ಪಿಸಲಾಗುವುದು. ಲಾಡು ಪ್ರಸಾದ ವ್ಯವಸ್ಥೆ ನಿಯಮಾನುಸಾರ ಇರಲಿದೆ‘ ಎಂದು ಅವರು ಹೇಳಿದ್ದಾರೆ.</p>.<p>’ಭಕ್ತಾದಿಗಳು ಮಾಸ್ಕ್ ಧರಿಸುವುದು ಕಡ್ಡಾಯ. ಅಂತರ ಕಾಯ್ದುಕೊಂಡು, ಸ್ಯಾನಿಟೈಸರ್ ಬಳಸಿ ದೇವಾಲಯದೊಳಗೆ ಪ್ರವೇಶಿಸಬೇಕು.ಕೋವಿಡ್ ರೋಗ ಲಕ್ಷಣಗಳಿದ್ದಲ್ಲಿ ಪ್ರವೇಶಕ್ಕೆ ಅವಕಾಶ ಕೊಡುವುದಿಲ್ಲ‘ ಎಂದು ಅವರು ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಾಮರಾಜನಗರ:</strong>ಸರ್ಕಾರವು ವಾರಾಂತ್ಯದ ಕರ್ಫ್ಯೂ ರದ್ದುಪಡಿಸಿರುವುದರಿಂದ ಜಿಲ್ಲೆಯ ಪ್ರಸಿದ್ಧ ಯಾತ್ರಾ ಸ್ಥಳ ಮಹದೇಶ್ವರ ಬೆಟ್ಟದ ಮಲೆ ಮಹದೇಶ್ವರ ಸ್ವಾಮಿ ದೇವಾಲಯ ಶನಿವಾರ ಮತ್ತು ಭಾನುವಾರ ಸೇರಿದಂತೆ ವಾರದ ಎಲ್ಲ ದಿನಗಳಲ್ಲೂ ಭಕ್ತರ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ.</p>.<p>’ತಕ್ಷಣದಿಂದಲೇ ಜಾರಿಗೆ ಬರುವಂತೆ, ಸರ್ಕಾರದ ಮುಂದಿನ ಆದೇಶದವರೆಗೂ ದೇವಾಲಯವು ವಾರದ ಎಲ್ಲ ದಿನ ಬೆಳಿಗ್ಗೆ 5 ಗಂಟೆಯಿಂದ ರಾತ್ರಿ 10 ಗಂಟೆಯವರೆಗೆ ದರ್ಶನಕ್ಕೆ ತೆರೆದಿರುತ್ತದೆ‘ ಎಂದು ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಜಯವಿಭವಸ್ವಾಮಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.</p>.<p>’ಕೋವಿಡ್ ನಿರ್ಬಂಧದ ಭಾಗವಾಗಿಯಾವುದೇ ಉತ್ಸವ, ಸೇವೆಗಳು ಇರುವುದಿಲ್ಲ.ದಾಸೋಹದಲ್ಲಿ ವೈಯಕ್ತಿಕ ಅಂತರ ಕಾಪಾಡಿಕೊಂಡು ತಿಂಡಿ ಪ್ರಸಾದ ನೀಡಲಾಗುತ್ತದೆ.ದೇವಾಲಯದ ಗರ್ಭಗುಡಿಯ ಮುಂಭಾಗ ಒಂದು ಬಾರಿಗೆ 50 ಜನರಿಗೆ ಮಾತ್ರ ಪ್ರವೇಶ ಕಲ್ಪಿಸಲಾಗುವುದು. ಲಾಡು ಪ್ರಸಾದ ವ್ಯವಸ್ಥೆ ನಿಯಮಾನುಸಾರ ಇರಲಿದೆ‘ ಎಂದು ಅವರು ಹೇಳಿದ್ದಾರೆ.</p>.<p>’ಭಕ್ತಾದಿಗಳು ಮಾಸ್ಕ್ ಧರಿಸುವುದು ಕಡ್ಡಾಯ. ಅಂತರ ಕಾಯ್ದುಕೊಂಡು, ಸ್ಯಾನಿಟೈಸರ್ ಬಳಸಿ ದೇವಾಲಯದೊಳಗೆ ಪ್ರವೇಶಿಸಬೇಕು.ಕೋವಿಡ್ ರೋಗ ಲಕ್ಷಣಗಳಿದ್ದಲ್ಲಿ ಪ್ರವೇಶಕ್ಕೆ ಅವಕಾಶ ಕೊಡುವುದಿಲ್ಲ‘ ಎಂದು ಅವರು ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>