‘ಭವನದಲ್ಲಿ ನಿತ್ಯವೂ ರಾಜಕೀಯ ಚಟುವಟಿಕೆಗಳು ನಡೆಯುತ್ತಿವೆ. ರಾಜಕೀಯ ಮುಖಂಡರು, ಅಭ್ಯರ್ಥಿಗಳು ಸುದ್ದಿಗೋಷ್ಠಿ ಹಾಗೂ ಸಂವಾದ ನಡೆಸುವ ಮೂಲಕ ಪತ್ರಕರ್ತರಿಗೆ ಆಮಿಷ ಒಡ್ಡುತ್ತಿದ್ದಾರೆ ಎನ್ನಲಾಗುತ್ತಿದೆ. ಇದು ನೀತಿಸಂಹಿತೆಯ ಸ್ಪಷ್ಟ ಉಲ್ಲಂಘನೆ ಆಗುವಂತಿದೆ. ರಾಜಕೀಯ ಮುಖಂಡರು ಮತ್ತು ಅಭ್ಯರ್ಥಿಗಳು ಸುದ್ದಿಗೋಷ್ಠಿ, ಸಂವಾದದ ಸಮಯದಲ್ಲಿ ಔತಣಕೂಟ ಏರ್ಪಡಿಸುತ್ತಿದ್ದಾರೆ ಎನ್ನಲಾಗಿದೆ. ಭವನಕ್ಕೆ ಸಿಸಿಟಿವಿ ಕ್ಯಾಮೆರಾ ಅಳವಡಿಸಿ, ಅಲ್ಲಿ ನಡೆಯುವ ಚಲನವಲನ ಪರಿಶೀಲಿಸಬಹುದಾಗಿದೆ’ ಎಂದು ನೋಟಿಸ್ನಲ್ಲಿ ಹೇಳಲಾಗಿದೆ.