ನಗರದಲ್ಲಿ ಶನಿವಾರ ಸುದ್ದಿಗೋಷ್ಠಿ ನಡೆಸಿದ ಸ್ನೇಹಬಳಗದ ಅಧ್ಯಕ್ಷ ಕೆ.ಆರ್.ಲೋಕೇಶ್, ‘ಡಾ. ಮೋಹನ್ ಅವರು ರಾಜಕೀಯ ಮುಖಂಡರ ಜತೆ ನಿರಂತರವಾಗಿ ಸಂಪರ್ಕದಲ್ಲಿರದೆ, ನೇರವಾಗಿ ಸಾರ್ವಜನಿಕರ ಜತೆ ಸಂಪರ್ಕ ಬೆಳೆಸಿದ್ದರು. ಇದರಿಂದಾಗಿ ಕೊನೆಗಳಿಗೆಯಲ್ಲಿ ಅವರಿಗೆ ಟಿಕೆಟ್ ತಪ್ಪಿದೆ. ಅಂದಿನಿಂದ ಪಕ್ಷದ ಜಿಲ್ಲಾಧ್ಯಕ್ಷರಾಗಲಿ, ವರಿಷ್ಠರಾಗಲಿ, ಮುಖಂಡರಾಗಲಿ ಈವರೆಗೂ ಅವರನ್ನು ಸಂಪರ್ಕ ಮಾಡಿ ಬಿಜೆಪಿ ಅಭ್ಯರ್ಥಿ ಪರವಾಗಿ ಪ್ರಚಾರ ಮಾಡುವಂತೆ ಕರೆದಿಲ್ಲ’ ಎಂದು ದೂರಿದರು.