<p><strong>ಗುಂಡ್ಲುಪೇಟೆ</strong>: ತಾಲ್ಲೂಕಿನ ಕಂದೇಗಾಲ ಸಮೀಪ 20ಕ್ಕೂ ಹೆಚ್ಚು ಕೋತಿಗಳ ಕಳೇಬರ ಪತ್ತೆಯಾಗಿದ್ದು ಮೇಲ್ನೋಟಕ್ಕೆ ವಿಷಪ್ರಾಷನದಿಂದ ಕೋತಿಗಳು ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದೆ.</p><p>ಕಂದೇಗಾಲ-ಕೊಡಸೋಗೆ ರಸ್ತೆಯಲ್ಲಿ ಎರಡು ಚೀಲಗಳಲ್ಲಿ ಕೋತಿಗಳ ಕಳೇಬರವನ್ನು ತಂದು ಬಿಸಾಡಿ ಹೋಗಲಾಗಿದೆ.</p><p>ಇದನ್ನು ನೋಡಿದ ದಾರಿಹೋಕರು ಅರಣ್ಯ ಇಲಾಖೆ ಹಾಗೂ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. </p><p>ಗುಂಡ್ಲುಪೇಟೆ ಬಫರ್ ವಲಯದ ಡಿಆರ್ಎಫ್ಒ ಶಿವಕುಮಾರ್ ಸ್ಥಳಕ್ಕೆ ಭೇಟಿನೀಡಿ ಪರಿಶೀಲನೆ ನಡೆಸಿದ್ದಾರೆ. ಕೋತಿಗಳಿಗೆ ವಿಷಪ್ರಾಶನ ಮಾಡಿರುವುದು ಮೇಲ್ನೋಟಕ್ಕೆ ಕಂಡುಬರುತ್ತಿದ್ದು ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕ್ರಮಕೈಗೊಳ್ಳುವುದಾಗಿ ತಿಳಿಸಿದ್ದಾರೆ.</p><p>ಮಲೆ ಮಹದೇಶ್ವರ ವನ್ಯಜೀವಿ ವಿಭಾಗದಲ್ಲಿ ವಿಷಪ್ರಾಶನದಿಂದ 5 ಹುಲಿಗಳು ಮೃತಪಟ್ಟ ಬೆನ್ನಲ್ಲೇ ಗುಂಡ್ಲುಪೇಟೆ ತಾಲ್ಲೂಕಿನ ಕಂದೇಗಾಲದಲ್ಲಿ ಕೋತಿಗಳ ಮಾರಣಹೋಮ ನಡೆದಿರುವುದು ವನ್ಯಜೀವಿ ಪ್ರೇಮಿಗಳ ಆಕ್ರೋಶಕ್ಕೆ ಕಾರಣವಾಗಿದೆ. ವಿಷವಿಕ್ಕಿ ವಿಕೃತಿ ಮೆರೆದವರನ್ನು ಬಂಧಿಸುವಂತೆ ಪರಿಸರವಾದಿ ಬಸವಣ್ಣ ಹಾಗೂ ಶಂಭು ಒತ್ತಾಯಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಗುಂಡ್ಲುಪೇಟೆ</strong>: ತಾಲ್ಲೂಕಿನ ಕಂದೇಗಾಲ ಸಮೀಪ 20ಕ್ಕೂ ಹೆಚ್ಚು ಕೋತಿಗಳ ಕಳೇಬರ ಪತ್ತೆಯಾಗಿದ್ದು ಮೇಲ್ನೋಟಕ್ಕೆ ವಿಷಪ್ರಾಷನದಿಂದ ಕೋತಿಗಳು ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದೆ.</p><p>ಕಂದೇಗಾಲ-ಕೊಡಸೋಗೆ ರಸ್ತೆಯಲ್ಲಿ ಎರಡು ಚೀಲಗಳಲ್ಲಿ ಕೋತಿಗಳ ಕಳೇಬರವನ್ನು ತಂದು ಬಿಸಾಡಿ ಹೋಗಲಾಗಿದೆ.</p><p>ಇದನ್ನು ನೋಡಿದ ದಾರಿಹೋಕರು ಅರಣ್ಯ ಇಲಾಖೆ ಹಾಗೂ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. </p><p>ಗುಂಡ್ಲುಪೇಟೆ ಬಫರ್ ವಲಯದ ಡಿಆರ್ಎಫ್ಒ ಶಿವಕುಮಾರ್ ಸ್ಥಳಕ್ಕೆ ಭೇಟಿನೀಡಿ ಪರಿಶೀಲನೆ ನಡೆಸಿದ್ದಾರೆ. ಕೋತಿಗಳಿಗೆ ವಿಷಪ್ರಾಶನ ಮಾಡಿರುವುದು ಮೇಲ್ನೋಟಕ್ಕೆ ಕಂಡುಬರುತ್ತಿದ್ದು ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕ್ರಮಕೈಗೊಳ್ಳುವುದಾಗಿ ತಿಳಿಸಿದ್ದಾರೆ.</p><p>ಮಲೆ ಮಹದೇಶ್ವರ ವನ್ಯಜೀವಿ ವಿಭಾಗದಲ್ಲಿ ವಿಷಪ್ರಾಶನದಿಂದ 5 ಹುಲಿಗಳು ಮೃತಪಟ್ಟ ಬೆನ್ನಲ್ಲೇ ಗುಂಡ್ಲುಪೇಟೆ ತಾಲ್ಲೂಕಿನ ಕಂದೇಗಾಲದಲ್ಲಿ ಕೋತಿಗಳ ಮಾರಣಹೋಮ ನಡೆದಿರುವುದು ವನ್ಯಜೀವಿ ಪ್ರೇಮಿಗಳ ಆಕ್ರೋಶಕ್ಕೆ ಕಾರಣವಾಗಿದೆ. ವಿಷವಿಕ್ಕಿ ವಿಕೃತಿ ಮೆರೆದವರನ್ನು ಬಂಧಿಸುವಂತೆ ಪರಿಸರವಾದಿ ಬಸವಣ್ಣ ಹಾಗೂ ಶಂಭು ಒತ್ತಾಯಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>