<p><strong>ಚಾಮರಾಜನಗರ: </strong>ಕೆಎಸ್ಆರ್ಟಿಸಿ ನೌಕರರ 11ನೇ ದಿನದ ಮುಷ್ಕರದ ನಡುವೆಯೇ, ಚಾಮರಾಜನಗರ ವಿಭಾಗದಲ್ಲಿ ಶನಿವಾರ 268 ಬಸ್ಗಳು ಸಂಚಾರ ನಡೆಸಿವೆ.</p>.<p>520 ಚಾಲಕರು, ನಿರ್ವಾಹಕರು ಹಾಗೂ 130ರಷ್ಟು ಮೆಕ್ಯಾನಿಕ್ಗಳು ಕರ್ತವ್ಯಕ್ಕೆ ಹಾಜರಾಗಿದ್ದಾರೆ.ನಗರ, ಪಟ್ಟಣ ಹಾಗೂ ಗ್ರಾಮೀಣ ಭಾಗಗಳಲ್ಲಿ ಬಸ್ಗಳು ಓಡಾಟ ನಡೆಸಿವೆ.</p>.<p class="Subhead">ಐವರ ವಜಾ: ಈ ಮಧ್ಯೆ, ವಿಭಾಗದ ಐವರು ನೌಕರರನ್ನು ಕೆಎಸ್ಆರ್ಟಿಸಿ ವಜಾ ಮಾಡಿ ಆದೇಶ ಹೊರಡಿಸಿದೆ. ಈ ಪೈಕಿ ನಾಲ್ವರು ಚಾಲಕ ಕಂ ನಿರ್ವಾಹಕರಾಗಿದ್ದು, ಒಬ್ಬರು ನಿರ್ವಾಹಕರಾಗಿದ್ದಾರೆ.</p>.<p>‘ಇಬ್ಬರನ್ನು ಕರ್ತವ್ಯಕ್ಕೆ ಗೈರಾದ ಕಾರಣಕ್ಕೆ ಕೆಲಸದಿಂದ ತೆಗೆಯಲಾಗಿದ್ದು, ಇನ್ನೂ ಮೂವರ ವಿರುದ್ಧವೂ ಕರ್ತವ್ಯಲೋಪದ ಆರೋಪಗಳಿವೆ’ ಎಂದು ಕೆಎಸ್ಆರ್ಟಿಸಿ ವಿಭಾಗೀಯ ನಿಯಂತ್ರಣಾಧಿಕಾರಿ ಶ್ರೀನಿವಾಸ ಬಿ. ಅವರು ‘ಪ್ರಜಾವಾಣಿ’ಗೆ ತಿಳಿಸಿದರು.</p>.<p class="Subhead">ಮಾತಿನ ಚಕಮಕಿ: ಖಾಸಗಿ ಹಾಗೂ ಕೆಎಸ್ಆರ್ಟಿಸಿ ಬಸ್ಗಳು ನಗರದ ಕೆಎಸ್ಆರ್ಟಿಸಿ ನಿಲ್ದಾಣದಿಂದಲೇ ಕಾರ್ಯಾಚರಿಸುತ್ತಿವೆ. ಪ್ರಯಾಣಿಕರನ್ನು ಹತ್ತಿಸುವ ವಿಚಾರದಲ್ಲಿ ಖಾಸಗಿ ಹಾಗೂ ಕೆಎಸ್ಆರ್ಟಿಸಿ ಸಿಬ್ಬಂದಿ ನಡುವೆ ಪದೇ ಪದೇ ಮಾತಿನ ಚಕಮಕಿ ನಡೆಯುತ್ತಿದೆ.</p>.<p>ನಾಲ್ಕೈದು ದಿನಗಳಿಂದ ರಸ್ತೆಗಿಳಿಯುತ್ತಿರುವ ಕೆಎಸ್ಆರ್ಟಿಸಿ ಬಸ್ಗಳ ಸಂಖ್ಯೆ ಹೆಚ್ಚಾಗಿದೆ. ಸಾರಿಗೆ ಬಸ್ಗಳು ಪ್ರಯಾಣಿಕರನ್ನು ತುಂಬಿದರೆ, ತಮಗೆ ನಷ್ಟವಾಗುತ್ತದೆ ಎಂಬುದು ಖಾಸಗಿಯವರ ಆರೋಪ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಾಮರಾಜನಗರ: </strong>ಕೆಎಸ್ಆರ್ಟಿಸಿ ನೌಕರರ 11ನೇ ದಿನದ ಮುಷ್ಕರದ ನಡುವೆಯೇ, ಚಾಮರಾಜನಗರ ವಿಭಾಗದಲ್ಲಿ ಶನಿವಾರ 268 ಬಸ್ಗಳು ಸಂಚಾರ ನಡೆಸಿವೆ.</p>.<p>520 ಚಾಲಕರು, ನಿರ್ವಾಹಕರು ಹಾಗೂ 130ರಷ್ಟು ಮೆಕ್ಯಾನಿಕ್ಗಳು ಕರ್ತವ್ಯಕ್ಕೆ ಹಾಜರಾಗಿದ್ದಾರೆ.ನಗರ, ಪಟ್ಟಣ ಹಾಗೂ ಗ್ರಾಮೀಣ ಭಾಗಗಳಲ್ಲಿ ಬಸ್ಗಳು ಓಡಾಟ ನಡೆಸಿವೆ.</p>.<p class="Subhead">ಐವರ ವಜಾ: ಈ ಮಧ್ಯೆ, ವಿಭಾಗದ ಐವರು ನೌಕರರನ್ನು ಕೆಎಸ್ಆರ್ಟಿಸಿ ವಜಾ ಮಾಡಿ ಆದೇಶ ಹೊರಡಿಸಿದೆ. ಈ ಪೈಕಿ ನಾಲ್ವರು ಚಾಲಕ ಕಂ ನಿರ್ವಾಹಕರಾಗಿದ್ದು, ಒಬ್ಬರು ನಿರ್ವಾಹಕರಾಗಿದ್ದಾರೆ.</p>.<p>‘ಇಬ್ಬರನ್ನು ಕರ್ತವ್ಯಕ್ಕೆ ಗೈರಾದ ಕಾರಣಕ್ಕೆ ಕೆಲಸದಿಂದ ತೆಗೆಯಲಾಗಿದ್ದು, ಇನ್ನೂ ಮೂವರ ವಿರುದ್ಧವೂ ಕರ್ತವ್ಯಲೋಪದ ಆರೋಪಗಳಿವೆ’ ಎಂದು ಕೆಎಸ್ಆರ್ಟಿಸಿ ವಿಭಾಗೀಯ ನಿಯಂತ್ರಣಾಧಿಕಾರಿ ಶ್ರೀನಿವಾಸ ಬಿ. ಅವರು ‘ಪ್ರಜಾವಾಣಿ’ಗೆ ತಿಳಿಸಿದರು.</p>.<p class="Subhead">ಮಾತಿನ ಚಕಮಕಿ: ಖಾಸಗಿ ಹಾಗೂ ಕೆಎಸ್ಆರ್ಟಿಸಿ ಬಸ್ಗಳು ನಗರದ ಕೆಎಸ್ಆರ್ಟಿಸಿ ನಿಲ್ದಾಣದಿಂದಲೇ ಕಾರ್ಯಾಚರಿಸುತ್ತಿವೆ. ಪ್ರಯಾಣಿಕರನ್ನು ಹತ್ತಿಸುವ ವಿಚಾರದಲ್ಲಿ ಖಾಸಗಿ ಹಾಗೂ ಕೆಎಸ್ಆರ್ಟಿಸಿ ಸಿಬ್ಬಂದಿ ನಡುವೆ ಪದೇ ಪದೇ ಮಾತಿನ ಚಕಮಕಿ ನಡೆಯುತ್ತಿದೆ.</p>.<p>ನಾಲ್ಕೈದು ದಿನಗಳಿಂದ ರಸ್ತೆಗಿಳಿಯುತ್ತಿರುವ ಕೆಎಸ್ಆರ್ಟಿಸಿ ಬಸ್ಗಳ ಸಂಖ್ಯೆ ಹೆಚ್ಚಾಗಿದೆ. ಸಾರಿಗೆ ಬಸ್ಗಳು ಪ್ರಯಾಣಿಕರನ್ನು ತುಂಬಿದರೆ, ತಮಗೆ ನಷ್ಟವಾಗುತ್ತದೆ ಎಂಬುದು ಖಾಸಗಿಯವರ ಆರೋಪ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>