‘ಪ್ರಜಾವಾಣಿ’ಯೊಂದಿಗೆ ಮಾತನಾಡಿದ ಒಕ್ಕೂಟದ ರಾಜೇಶ್ ಅವರು, ‘ಮುಷ್ಕರವನ್ನು ವಾಪಸ್ ಪಡೆದಿದ್ದೇವೆ. ಕೋಡಿಹಳ್ಳಿ ಚಂದ್ರಶೇಖರ್ ಅವರು ಪತ್ರಿಕಾಗೋಷ್ಠಿ ನಡೆಸಿ ನಿರ್ಧಾರವನ್ನು ಘೋಷಣೆ ಮಾಡಿದ್ದಾರೆ. ಹೈಕೋರ್ಟ್ ನೀಡಿರುವ ಸಲಹೆಗೆ ಮನ್ನಣೆ ನೀಡಿ ಈ ನಿರ್ಧಾರ ಕೈಗೊಂಡಿದ್ದೇವೆ. ತಕ್ಷಣದಿಂದಲೇ ಕರ್ತವ್ಯಕ್ಕೆ ಹಾಜರಾಗುತ್ತೇವೆ. ಗುರುವಾರದಿಂದ ಪೂರ್ಣಪ್ರಮಾಣದಲ್ಲಿ ಕರ್ತವ್ಯ ನಿರ್ವಹಿಸುತ್ತೇವೆ’ ಎಂದರು.