ಗುರುವಾರ, 1 ಜೂನ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೋವಿಡ್ 19 ಲಾಕ್‌ಡೌನ್‌ ತೆರವಾಗುತ್ತಲೇ ಬಂಡೀಪುರ ಸಫಾರಿಗೆ ಮುಗಿ ಬಿದ್ದ ಜನ

Last Updated 11 ಜುಲೈ 2021, 16:00 IST
ಅಕ್ಷರ ಗಾತ್ರ

ಗುಂಡ್ಲುಪೇಟೆ: ಕೋವಿಡ್ 19 ಲಾಕ್‌ಡೌನ್‌ ತೆರವಾದ ನಂತರ ಇದೇ ಮೊದಲ ಬಾರಿಗೆ ಶನಿವಾರ ಮತ್ತು ಭಾನುವಾರ ಪ್ರವಾಸಿಗರು ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಸಫಾರಿ ಹಾಗೂ ಹಿಮವದ್‌ಗೋಪಾಲಸ್ವಾಮಿ ಬೆಟ್ಟಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಭೇಟಿ ನೀಡಿದ್ದಾರೆ.

ಎರಡು ದಿನಗಳಲ್ಲಿ 500ಕ್ಕೂ ಹೆಚ್ಚು ಜನರು ಸಫಾರಿಗೆ ಆಗಮಿಸಿದ್ದರು. ಎರಡು ತಿಂಗಳಿನಿಂದ ಶೆಡ್‌ನಲ್ಲಿ ನಿಂತಿದ್ದ ಎಲ್ಲ ಸಫಾರಿ ವಾಹನಗಳು ಶನಿವಾರ ಹಾಗೂ ಭಾನುವಾರ ಭರ್ತಿಯಾದವು.

ಸಫಾರಿಗೆ ತೆರಳಿದ ಪ್ರವಾಸಿಗರಿಗೆ ಕಲ್ಕಟ್ಟ ಹಳ್ಳ ಹಾಗೂ ಟೈಗರ್ ರಸ್ತೆಯಲ್ಲಿ ಹುಲಿ ಹಾಗೂ ಆನೆಗಳ ಹಿಂಡು, ಚಿರತೆ, ಕಾಡಮ್ಮೆಗಳ ದರ್ಶನವಾಗಿದೆ.

ಹಲವು ದಿನಗಳಿಂದ ಪ್ರವಾಸಿಗರು ಇಲ್ಲದೆ ಬಿಕೋ ಎನ್ನುತ್ತಿದ್ದ ಜಂಗಲ್ ಲಾಡ್ಜ್ ಮತ್ತು ಖಾಸಗಿ ರೆಸಾರ್ಟ್‌ಗಳು ಕೂಡ ತುಂಬಿದ್ದವು.

‘ಪ್ರವಾಸಿಗರನ್ನು ನಂಬಿ ಜೀವನ ಮಾಡುವ ಎಳನೀರು, ಬೇಕರಿ, ಟೀ ಕಾಫಿ ಅಂಗಡಿಗಳಿಗೂ ಭಾನುವಾರ ಒಳ್ಳೆಯ ವ್ಯಾಪಾರ ಆಗಿದೆ. ಎರಡು ತಿಂಗಳಿನಿಂದ ವ್ಯಾಪಾರ ಇಲ್ಲದೆ ಬೇಸರವಾಗಿತ್ತು. ಲಾಕ್ ಡೌನ್ ಓಪನ್ ಆದ ಬಳಿಕ ವಾಹನಗಳ ಓಡಾಟ ಹೆಚ್ಚಿರುವುದರಿಂದ ಉತ್ತಮ ವ್ಯಾಪಾರ ಆಗುತ್ತಿದೆ’ ಎಂದು ಎಳನೀರು ವ್ಯಾಪಾರಿ ಮಹೇಶ್ ತಿಳಿಸಿದರು.

ಲಾಕ್‌ಡೌನ್‌ ತೆರವಾದ ನಂತರ ಬರುತ್ತಿರುವ ಪ್ರವಾಸಿಗರ ಸಂಖ್ಯೆ ಹೆಚ್ಚುತ್ತಿದೆ. ಸಫಾರಿಯಲ್ಲಿ ಪ್ರಾಣಿಗಳ ದರ್ಶನವೂ ಆಗುತ್ತಿದೆ ಎಂದು ಹುಲಿ ಯೋಜನೆ ನಿರ್ದೇಶಕ ಎಸ್.ಆರ್.‌ನಟೇಶ್ ಅವರು ಹೇಳಿದರು.

ನೆರೆಯ ತಮಿಳುನಾಡಿನಲ್ಲಿ ಲಾಕ್‌ಡೌನ್‌ ಮುಂದುವರೆಸಿರುವುದರಿಂದ ತಮಿಳುನಾಡು ಪ್ರವೇಶ ಪಡೆಯಬೇಕಾದರೆ ಆರ್‌ಟಿಪಿಸಿಆರ್‌ ನೆಗೆಟಿವ್‌ ವರದಿ ಮತ್ತು ಇ– ಪಾಸ್ ಕಡ್ಡಾಯ ಮಾಡಲಾಗಿದೆ.

‘ಆನ್‌ಲೈನ್‌ನಲ್ಲಿ ಇ–ಪಾಸ್ ಪಡೆಯಲು ಮಾಹಿತಿ ನೋಂದಣಿ ಆದ ನೀಡಿರುವ ಮಾಹಿತಿ ಸೂಕ್ತವಾಗಿದೆ ಎಂದು ಪರಿಶೀಲನೆ ಮಾಡಿ ಅನುಮತಿ ನೀಡಲಾಗುತ್ತದೆ. ಇಲ್ಲದಿದ್ದರೆ ಅನುಮತಿ ನಿರಾಕರಿಸಲಾಗುತ್ತದೆ. ಆದ್ದರಿಂದ ತಕ್ಷಣವೇ ಪಾಸ್ ದೊರೆಯುದಿಲ್ಲ’ ಎಂಬದು ಅನೇಕ ಪ್ರವಾಸಿಗರ ದೂರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT

ಇನ್ನಷ್ಟು ಸುದ್ದಿ

ಇನ್ನಷ್ಟು
ADVERTISEMENT
ADVERTISEMENT
ADVERTISEMENT
ಪ್ರಜಾವಾಣಿ ವಿಡಿಯೊ
ಸಿನಿಮಾ
ADVERTISEMENT