<p><strong>ಚಾಮರಾಜನಗರ:</strong> ‘ರಾಷ್ಟ್ರೀಯ ಹೆದ್ದಾರಿ 209 ಕಾಮಗಾರಿಯನ್ನು ತ್ವರಿತವಾಗಿ ಪೂರ್ಣಗೊಳಿಸಬೇಕು’ ಎಂದು ಸಂಬಂಧಪಟ್ಟ ಅಧಿಕಾರಿಗಳಿಗೆ ಸಂಸದ ಆರ್.ಧ್ರುವನಾರಾಯಣ ಸೂಚಿಸಿದರು.</p>.<p>ರಾಷ್ಟ್ರೀಯ ಹೆದ್ದಾರಿ 209ರ ಜಿಲ್ಲಾ ವ್ಯಾಪ್ತಿಯಲ್ಲಿ ಕೈಗೊಂಡಿರುವ ರಸ್ತೆ ಕಾಮಗಾರಿ ಕಾಮಗಾರಿ ಪ್ರಗತಿಯನ್ನು ಅವರು ಮಂಗಳವಾರ ಪರಿಶೀಲಿಸಿದರು.</p>.<p>‘ಕೋಳಿಪಾಳ್ಯ, ಪುಣಜನೂರು ಮಾರ್ಗದಲ್ಲಿ ರಸ್ತೆ ಕಾಮಗಾರಿ ನಡೆಯುತ್ತಿದೆ. ಈ ಭಾಗದಲ್ಲಿ ಅನೇಕ ತೊಂದರೆಗಳನ್ನು ಎದುರಿಸುವಂತಾಗಿದೆ’ ಎಂಬ ದೂರುಗಳು ಬಂದಿರುವುದರಿಂದ ಸಂಸದರುಕಾಮಗಾರಿ ಸ್ಥಳಕ್ಕೆ ಭೇಟಿ ನೀಡಿ ತುರ್ತಾಗಿ ಕಾಮಗಾರಿ ಪೂರ್ಣಗೊಳಿಸುವಂತೆ ಸೂಚಿಸಿದರು.</p>.<p>‘ಚಾಮರಾಜನಗರದಿಂದ ಕೋಳಿಪಾಳ್ಯ, ಪುಣಜನೂರಿನವರೆಗೆ ಕಾಮಗಾರಿ ಪ್ರಗತಿಯಲ್ಲಿದೆ. ಅದು ಪೂರ್ಣಗೊಳ್ಳುವವರೆಗೆ ವಾಹನ ಸಂಚಾರಕ್ಕೆ ಅನನುಕೂಲವಾಗಲಿದೆ.ಆದ್ದರಿಂದಡಿಸೆಂಬರ್ 26ರೊಳಗೆ ಮಾರ್ಗಮಧ್ಯದ ಗುಂಡಿಗಳನ್ನು ಮುಚ್ಚಬೇಕು. ಜಿಲ್ಲೆಯಗಡಿಭಾಗದವರೆಗೂ ಯಾವುದೇ ತೊಂದರೆಯಾಗದಂತೆ ಕೆಲಸ ಪೂರ್ಣಗೊಳಿಸಬೇಕು’ ಎಂದುಹೇಳಿದರು.</p>.<p>‘ಕಾಮಗಾರಿಯಲ್ಲಿ ಗುಣಮಟ್ಟ ಕಾಯ್ದುಕೊಳ್ಳಬೇಕು. ರಸ್ತೆ ಅಭಿವೃದ್ಧಿ ಕೆಲಸದಲ್ಲಿ ಯಾವುದೇ ಲೋಪಕ್ಕೆ ಅವಕಾಶ ನೀಡಬಾರದು. ದೂರುಗಳು ಬರದಂತೆ ಉತ್ತಮ ಕಾಮಗಾರಿಪೂರೈಸಬೇಕು’ ಎಂದರು.</p>.<p class="Subhead"><strong>ಶೇ 37ರಷ್ಟು ಪ್ರಗತಿ:</strong> ರಾಷ್ಟ್ರೀಯ ಹೆದ್ದಾರಿ 209ರ ಕಾಮಗಾರಿ ಶೇ 37ರಷ್ಟು ಪ್ರಗತಿಯಾಗಿದೆ. ರಸ್ತೆ ವಿಸ್ತರಣೆ, ಸೇತುವೆ ನಿರ್ಮಾಣ ಕೆಲಸ ನಡೆಯುತ್ತಿದೆ ಎಂದರು.</p>.<p>‘ರಸ್ತೆ ಅಭಿವೃದ್ಧಿಗೆ ಅಗತ್ಯವಿರುವ ಭೂಸ್ವಾಧೀನ ಪ್ರಕ್ರಿಯೆ ಶೇ 90ರಷ್ಟು ಪೂರ್ಣಗೊಂಡಿದೆ. ಭೂಮಾಲೀಕರಿಗೆ ಪರಿಹಾರ ನೀಡುವ ಪ್ರಕ್ರಿಯೆನಡೆದಿದೆ. ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ ಪ್ರಾಧಿಕಾರ ಆಸಕ್ತಿಯಿಂದ ಎಲ್ಲ ಕೆಲಸವನ್ನು ಮಾಡುತ್ತಿದೆ’</p>.<p>ಎಪಿಎಂಸಿ ಸದಸ್ಯ ಬಿ.ಕೆ. ರವಿಕುಮಾರ್, ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ ಪ್ರಾಧಿಕಾರದ ಯೋಜನಾ ವ್ಯವಸ್ಥಾಪಕ ಶ್ರೀಧರ್, ಕಾರ್ಯಪಾಲಕ ಎಂಜಿನಿಯರ್ ಕಾಂತರಾಜು, ತಹಶೀಲ್ದಾರ್ ಕೆ. ಪುರಂದರ್, ಭೂಸ್ವಾಧೀನ ಇಲಾಖೆಯ ಹಿರಿಯ ಅಧಿಕಾರಿಗಳು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಾಮರಾಜನಗರ:</strong> ‘ರಾಷ್ಟ್ರೀಯ ಹೆದ್ದಾರಿ 209 ಕಾಮಗಾರಿಯನ್ನು ತ್ವರಿತವಾಗಿ ಪೂರ್ಣಗೊಳಿಸಬೇಕು’ ಎಂದು ಸಂಬಂಧಪಟ್ಟ ಅಧಿಕಾರಿಗಳಿಗೆ ಸಂಸದ ಆರ್.ಧ್ರುವನಾರಾಯಣ ಸೂಚಿಸಿದರು.</p>.<p>ರಾಷ್ಟ್ರೀಯ ಹೆದ್ದಾರಿ 209ರ ಜಿಲ್ಲಾ ವ್ಯಾಪ್ತಿಯಲ್ಲಿ ಕೈಗೊಂಡಿರುವ ರಸ್ತೆ ಕಾಮಗಾರಿ ಕಾಮಗಾರಿ ಪ್ರಗತಿಯನ್ನು ಅವರು ಮಂಗಳವಾರ ಪರಿಶೀಲಿಸಿದರು.</p>.<p>‘ಕೋಳಿಪಾಳ್ಯ, ಪುಣಜನೂರು ಮಾರ್ಗದಲ್ಲಿ ರಸ್ತೆ ಕಾಮಗಾರಿ ನಡೆಯುತ್ತಿದೆ. ಈ ಭಾಗದಲ್ಲಿ ಅನೇಕ ತೊಂದರೆಗಳನ್ನು ಎದುರಿಸುವಂತಾಗಿದೆ’ ಎಂಬ ದೂರುಗಳು ಬಂದಿರುವುದರಿಂದ ಸಂಸದರುಕಾಮಗಾರಿ ಸ್ಥಳಕ್ಕೆ ಭೇಟಿ ನೀಡಿ ತುರ್ತಾಗಿ ಕಾಮಗಾರಿ ಪೂರ್ಣಗೊಳಿಸುವಂತೆ ಸೂಚಿಸಿದರು.</p>.<p>‘ಚಾಮರಾಜನಗರದಿಂದ ಕೋಳಿಪಾಳ್ಯ, ಪುಣಜನೂರಿನವರೆಗೆ ಕಾಮಗಾರಿ ಪ್ರಗತಿಯಲ್ಲಿದೆ. ಅದು ಪೂರ್ಣಗೊಳ್ಳುವವರೆಗೆ ವಾಹನ ಸಂಚಾರಕ್ಕೆ ಅನನುಕೂಲವಾಗಲಿದೆ.ಆದ್ದರಿಂದಡಿಸೆಂಬರ್ 26ರೊಳಗೆ ಮಾರ್ಗಮಧ್ಯದ ಗುಂಡಿಗಳನ್ನು ಮುಚ್ಚಬೇಕು. ಜಿಲ್ಲೆಯಗಡಿಭಾಗದವರೆಗೂ ಯಾವುದೇ ತೊಂದರೆಯಾಗದಂತೆ ಕೆಲಸ ಪೂರ್ಣಗೊಳಿಸಬೇಕು’ ಎಂದುಹೇಳಿದರು.</p>.<p>‘ಕಾಮಗಾರಿಯಲ್ಲಿ ಗುಣಮಟ್ಟ ಕಾಯ್ದುಕೊಳ್ಳಬೇಕು. ರಸ್ತೆ ಅಭಿವೃದ್ಧಿ ಕೆಲಸದಲ್ಲಿ ಯಾವುದೇ ಲೋಪಕ್ಕೆ ಅವಕಾಶ ನೀಡಬಾರದು. ದೂರುಗಳು ಬರದಂತೆ ಉತ್ತಮ ಕಾಮಗಾರಿಪೂರೈಸಬೇಕು’ ಎಂದರು.</p>.<p class="Subhead"><strong>ಶೇ 37ರಷ್ಟು ಪ್ರಗತಿ:</strong> ರಾಷ್ಟ್ರೀಯ ಹೆದ್ದಾರಿ 209ರ ಕಾಮಗಾರಿ ಶೇ 37ರಷ್ಟು ಪ್ರಗತಿಯಾಗಿದೆ. ರಸ್ತೆ ವಿಸ್ತರಣೆ, ಸೇತುವೆ ನಿರ್ಮಾಣ ಕೆಲಸ ನಡೆಯುತ್ತಿದೆ ಎಂದರು.</p>.<p>‘ರಸ್ತೆ ಅಭಿವೃದ್ಧಿಗೆ ಅಗತ್ಯವಿರುವ ಭೂಸ್ವಾಧೀನ ಪ್ರಕ್ರಿಯೆ ಶೇ 90ರಷ್ಟು ಪೂರ್ಣಗೊಂಡಿದೆ. ಭೂಮಾಲೀಕರಿಗೆ ಪರಿಹಾರ ನೀಡುವ ಪ್ರಕ್ರಿಯೆನಡೆದಿದೆ. ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ ಪ್ರಾಧಿಕಾರ ಆಸಕ್ತಿಯಿಂದ ಎಲ್ಲ ಕೆಲಸವನ್ನು ಮಾಡುತ್ತಿದೆ’</p>.<p>ಎಪಿಎಂಸಿ ಸದಸ್ಯ ಬಿ.ಕೆ. ರವಿಕುಮಾರ್, ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ ಪ್ರಾಧಿಕಾರದ ಯೋಜನಾ ವ್ಯವಸ್ಥಾಪಕ ಶ್ರೀಧರ್, ಕಾರ್ಯಪಾಲಕ ಎಂಜಿನಿಯರ್ ಕಾಂತರಾಜು, ತಹಶೀಲ್ದಾರ್ ಕೆ. ಪುರಂದರ್, ಭೂಸ್ವಾಧೀನ ಇಲಾಖೆಯ ಹಿರಿಯ ಅಧಿಕಾರಿಗಳು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>