ಸಾಮಾನ್ಯಜ್ಞಾನ ಬೇಡವೇ: ರಾಜ್ಯದ ಬೊಕ್ಕಸ ಬರಿದಾಗಿದೆ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ನೀಡಿರುವ ಹೇಳಿಕೆಗೆ ಪ್ರತಿಕ್ರಿಯಿಸಿದ ಶ್ರೀನಿವಾಸ ಪ್ರಸಾದ್ ಅವರು, ‘ವಿರೋಧ ಪಕ್ಷದ ನಾಯಕರಾಗಿ ಸಿದ್ಧರಾಮಯ್ಯ ಅವರಿಗೆ ಜವಾಬ್ದಾರಿ ಇಲ್ಲವೇ? ಸಾಮಾನ್ಯ ಜ್ಞಾನ ಸ್ವಲ್ಪವಾದರೂ ಬೇಡವೇ? ಕೋವಿಡ್ ಕಾರಣದಿಂದ ಇಡೀ ಜಗತ್ತು ಆರ್ಥಿಕವಾಗಿ ತತ್ತರಿಸಿ ಹೋಗಿದೆ. ಜನಸಾಮಾನ್ಯರಿಗೆ ಪರಿಸ್ಥಿತಿ ಅರ್ಥವಾಗಿದೆ. ಅಂತಹದ್ದರಲ್ಲಿ ಹಣಕಾಸು ಸಚಿವರು, ಮುಖ್ಯಮಂತ್ರಿಯಾಗಿದ್ದವರಿಗೆ ಅರ್ಥವಾಗುವುದಿಲ್ಲವೇ? ಸಿದ್ದರಾಮಯ್ಯ ಅವರಿಗೆ ಶೋಭೆ ತರುವಂತಹ ಹೇಳಿಕೆ ಅಲ್ಲ ಇದು. ಪರಿಸ್ಥಿತಿ ನಿಭಾಯಿಸಲು ಅವರು ಸರ್ಕಾರದ ಜೊತೆ ಕೈಜೋಡಿಸಲಿ’ ಎಂದರು.