ಸ್ವಂತಕ್ಕೆ ಮಾಡಿಕೊಳ್ಳಲಿ: ಟಿಪ್ಪು ಸುಲ್ತಾನ್ ಪ್ರತಿಮೆ ನಿರ್ಮಾಣ ವಿಚಾರದ ಬಗ್ಗೆ ಪ್ರತಿಕ್ರಿಯಿಸಿದ ಸಂಸದರು, ‘ಟಿಪ್ಪು ಪ್ರತಿಮೆಯನ್ನು ಅವರ ಸ್ವಂತಕ್ಕೆ ಮಾಡಿಕೊಂಡರೆ ಅದರಲ್ಲೇನೂ ತಪ್ಪಿಲ್ಲ. ತೊಂದರೆಯೂ ಇಲ್ಲ.ಟಿಪ್ಪು ಜಯಂತಿಯನ್ನು ಸರ್ಕಾರದಿಂದ ಮಾಡಬಾರದು ಎಂದು ಈಗಾಗಲೇ ತೀರ್ಮಾನವಾಗಿದೆ. ಮುಸ್ಲಿಂ ಸಮುದಾಯದವರು ಪ್ರತಿಮೆ ನಿರ್ಮಿಸಿದರೆ, ಜಯಂತಿ ಆಚರಿಸಿದರೆ ಅಭ್ಯಂತರವಿಲ್ಲ. ಮುಸ್ಲಿಮರಲ್ಲಿ ಪ್ರತಿಮೆ ಸಂಸ್ಕೃತಿ, ವಿಗ್ರಹಾರಾಧನೆ ಇಲ್ಲ. ಹಾಗಾಗಿ, ಅವರು ಇನ್ನೊಮ್ಮೆ ಯೋಚನೆ ಮಾಡಲಿ’ ಎಂದರು.