<p><strong>ಗುಂಡ್ಲುಪೇಟೆ (ಚಾಮರಾಜನಗರ)</strong>: ಪೂರ್ವಾಶ್ರಮದಲ್ಲಿ ಮುಸ್ಲಿಂ ಆಗಿದ್ದರು ಎಂಬ ವಿಷಯ ತಿಳಿದು ಭಕ್ತರು ವಿರೋಧಿಸಿದ್ದರಿಂದ, ತಾಲ್ಲೂಕಿನ ಚೌಡಹಳ್ಳಿಯ ಗುರುಮಲ್ಲೇಶ್ವರ ದಾಸೋಹದ ಶಾಖಾ ಮಠದ ನಿಜಲಿಂಗ ಸ್ವಾಮೀಜಿ ಅವರು ಪೀಠತ್ಯಾಗ ಮಾಡಿದ್ದಾರೆ.</p><p>ಬಸವತತ್ವಕ್ಕೆ ಮನಸೋತಿದ್ದ ಯಾದಗಿರಿ ಜಿಲ್ಲೆಯ ಶಹಾಪುರದ ಮಹಮ್ಮದ್ ನಿಸಾರ್ (22) ನಿಜಲಿಂಗ ಸ್ವಾಮೀಜಿಯಾಗಿ ಹೆಸರು ಬದಲಾಯಿಸಿಕೊಂಡು ಶಾಖಾಮಠದ ಸ್ವಾಮೀಜಿಯಾಗಿದ್ದರು.</p><p>ಈಚೆಗೆ ಭಕ್ತರು ಸ್ವಾಮೀಜಿ ಮೊಬೈಲ್ ಫೋನ್ ಗಮನಿಸುವಾಗ ಆಧಾರ್ ಕಾರ್ಡ್ನಲ್ಲಿ ಮಹಮ್ಮದ್ ನಿಸಾರ್ ಎಂದು ಇದ್ದದ್ದನ್ನು ಗಮನಿಸಿ ಗ್ರಾಮಸ್ಥರಿಗೆ ತಿಳಿಸಿದ್ದರು. ಮುಖಂಡರು, ಪೊಲೀಸರು ವಿಚಾರಿಸಿದಾಗ 2021ರಲ್ಲಿ ಲಿಂಗದೀಕ್ಷೆ ಪಡೆದಿದ್ದಾಗಿ ಸ್ವಾಮೀಜಿ ಸಮಜಾಯಿಷಿ ನೀಡಿದ್ದರು.</p><p>ಆದರೆ, ‘ಪೂರ್ವಾಶ್ರಮದ ಧರ್ಮ ಮುಚ್ಚಿಟ್ಟಿದ್ದರಿಂದ ಪೀಠಾಧಿಪತಿಯಾಗಿ ಮುಂದುವರಿಯುವುದು ಸರಿಯಲ್ಲ ಎಂದು ಎಲ್ಲರೂ ಒತ್ತಡ ಹಾಕಿದ್ದರು. ಹೀಗಾಗಿ ಸ್ವಾಮೀಜಿ ಪೀಠತ್ಯಾಗ ಮಾಡಿದ್ದಾರೆ’ ಎಂದು ಗ್ರಾಮಸ್ಥರು ತಿಳಿಸಿದರು.</p><p>ಮೂಲತಃ ಚೌಡಹಳ್ಳಿಯ, ಸದ್ಯ ಆಸ್ಟ್ರೇಲಿಯದಲ್ಲಿ ನೆಲಸಿರುವ ಮಹದೇವ ಪ್ರಸಾದ್ ಎಂಬವರು ಮಠಕ್ಕೆ ಜಾಗ ನೀಡಿ ಕಟ್ಟಡ ನಿರ್ಮಿಸಿಕೊಟ್ಟಿದ್ದರು. ವರ್ಷದ ಹಿಂದೆ ಮಠ ಲೋಕಾರ್ಪಣೆಗೊಂಡಿತ್ತು. ಅಕ್ಕಮಹಾದೇವಿ ಮಾತಾಜಿ ಅವರು ಪೀಠಾಧಿಪತಿಯಾಗಿದ್ದರು. ಕಾರಣಾಂತರದಿಂದ ಅವರು ಪೀಠತ್ಯಾಗ ಮಾಡಿದ ಬಳಿಕ ನಿಜಲಿಂಗ ಸ್ವಾಮೀಜಿ ಪೀಠಾಧಿಪತಿಯಾಗಿ ನಿಯುಕ್ತಿಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಗುಂಡ್ಲುಪೇಟೆ (ಚಾಮರಾಜನಗರ)</strong>: ಪೂರ್ವಾಶ್ರಮದಲ್ಲಿ ಮುಸ್ಲಿಂ ಆಗಿದ್ದರು ಎಂಬ ವಿಷಯ ತಿಳಿದು ಭಕ್ತರು ವಿರೋಧಿಸಿದ್ದರಿಂದ, ತಾಲ್ಲೂಕಿನ ಚೌಡಹಳ್ಳಿಯ ಗುರುಮಲ್ಲೇಶ್ವರ ದಾಸೋಹದ ಶಾಖಾ ಮಠದ ನಿಜಲಿಂಗ ಸ್ವಾಮೀಜಿ ಅವರು ಪೀಠತ್ಯಾಗ ಮಾಡಿದ್ದಾರೆ.</p><p>ಬಸವತತ್ವಕ್ಕೆ ಮನಸೋತಿದ್ದ ಯಾದಗಿರಿ ಜಿಲ್ಲೆಯ ಶಹಾಪುರದ ಮಹಮ್ಮದ್ ನಿಸಾರ್ (22) ನಿಜಲಿಂಗ ಸ್ವಾಮೀಜಿಯಾಗಿ ಹೆಸರು ಬದಲಾಯಿಸಿಕೊಂಡು ಶಾಖಾಮಠದ ಸ್ವಾಮೀಜಿಯಾಗಿದ್ದರು.</p><p>ಈಚೆಗೆ ಭಕ್ತರು ಸ್ವಾಮೀಜಿ ಮೊಬೈಲ್ ಫೋನ್ ಗಮನಿಸುವಾಗ ಆಧಾರ್ ಕಾರ್ಡ್ನಲ್ಲಿ ಮಹಮ್ಮದ್ ನಿಸಾರ್ ಎಂದು ಇದ್ದದ್ದನ್ನು ಗಮನಿಸಿ ಗ್ರಾಮಸ್ಥರಿಗೆ ತಿಳಿಸಿದ್ದರು. ಮುಖಂಡರು, ಪೊಲೀಸರು ವಿಚಾರಿಸಿದಾಗ 2021ರಲ್ಲಿ ಲಿಂಗದೀಕ್ಷೆ ಪಡೆದಿದ್ದಾಗಿ ಸ್ವಾಮೀಜಿ ಸಮಜಾಯಿಷಿ ನೀಡಿದ್ದರು.</p><p>ಆದರೆ, ‘ಪೂರ್ವಾಶ್ರಮದ ಧರ್ಮ ಮುಚ್ಚಿಟ್ಟಿದ್ದರಿಂದ ಪೀಠಾಧಿಪತಿಯಾಗಿ ಮುಂದುವರಿಯುವುದು ಸರಿಯಲ್ಲ ಎಂದು ಎಲ್ಲರೂ ಒತ್ತಡ ಹಾಕಿದ್ದರು. ಹೀಗಾಗಿ ಸ್ವಾಮೀಜಿ ಪೀಠತ್ಯಾಗ ಮಾಡಿದ್ದಾರೆ’ ಎಂದು ಗ್ರಾಮಸ್ಥರು ತಿಳಿಸಿದರು.</p><p>ಮೂಲತಃ ಚೌಡಹಳ್ಳಿಯ, ಸದ್ಯ ಆಸ್ಟ್ರೇಲಿಯದಲ್ಲಿ ನೆಲಸಿರುವ ಮಹದೇವ ಪ್ರಸಾದ್ ಎಂಬವರು ಮಠಕ್ಕೆ ಜಾಗ ನೀಡಿ ಕಟ್ಟಡ ನಿರ್ಮಿಸಿಕೊಟ್ಟಿದ್ದರು. ವರ್ಷದ ಹಿಂದೆ ಮಠ ಲೋಕಾರ್ಪಣೆಗೊಂಡಿತ್ತು. ಅಕ್ಕಮಹಾದೇವಿ ಮಾತಾಜಿ ಅವರು ಪೀಠಾಧಿಪತಿಯಾಗಿದ್ದರು. ಕಾರಣಾಂತರದಿಂದ ಅವರು ಪೀಠತ್ಯಾಗ ಮಾಡಿದ ಬಳಿಕ ನಿಜಲಿಂಗ ಸ್ವಾಮೀಜಿ ಪೀಠಾಧಿಪತಿಯಾಗಿ ನಿಯುಕ್ತಿಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>