<p><strong>ಹನೂರು: </strong>ತಾಲ್ಲೂಕಿನ ಸುಳ್ವಾಡಿಯ ಕಿಚ್ಚುಗುತ್ತಿ ಮಾರಮ್ಮನ ದೇವಾಲಯಕ್ಕೆ ಧಾರ್ಮಿಕ ದತ್ತಿ ಇಲಾಖೆಯ ರಾಜ್ಯ ಆಗಮಿಕ ಪಂಡಿತ ವಿದ್ವಾನ್ ಜಿ.ಎ.ವಿಜಯ್ಕುಮಾರ್ ಅವರು ಮಂಗಳವಾರ ಭೇಟಿ ನೀಡಿ ಪರಿಶೀಲಿಸಿದರು.</p>.<p>ಜಿಲ್ಲಾ ಉಸ್ತುವಾರಿ ಸಚಿವ ಎಸ್.ಸುರೇಶ್ ಕುಮಾರ್ ಅವರು ಇತ್ತೀಚೆಗೆಸುಳ್ವಾಡಿಗೆ ಭೇಟಿ ನೀಡಿದ್ದ ಸಂದರ್ಭದಲ್ಲಿ ದೇವಾಲಯವನ್ನು ತೆರೆಯುವಂತೆ ಭಕ್ತರು ಒತ್ತಾಯಿಸಿದ್ದರು.</p>.<p>ವಿಷಪ್ರಸಾದ ದುರಂತ ನಡೆದ ಬಳಿಕ ದೇವಾಲಯವನ್ನು ಮುಜುರಾಯಿ ಇಲಾಖೆ ತನ್ನ ಸುಪರ್ದಿಗೆ ತೆಗೆದುಕೊಂಡಿತ್ತು. ಮಂಗಳವಾರ ದೇವಾಲಯಕ್ಕೆ ಭೇಟಿ ನೀಡಿದ ಪಂಡಿತರು ಪೂಜಾ ವಿಧಿವಿಧಾನಗಳ ಬಗ್ಗೆ ಸಂಪೂರ್ಣ ಮಾಹಿತಿ ಪಡೆದರು.</p>.<p>ನಂತರ ಮಾತನಾಡಿದ ವಿಜಯ್ ಕುಮಾರ್ ಅವರು, ‘ದೇವಾಲಯದಲ್ಲಿ ದುರಂತ ಸಂಭವಿಸಿ ಒಂದು ವರ್ಷವಾಗಿದೆ.ಅಂದಿನಿಂದ ಪೂಜೆ ನಡೆದಿಲ್ಲ. ಮತ್ತೆ ದೇವಸ್ಥಾನ ತೆರೆಯಲು ಅನುಸರಿಸಬೇಕಾದ ವಿಧಿ ವಿಧಾನಗಳ ಬಗ್ಗೆ ನಿರ್ಧರಿಸಿ ಜಿಲ್ಲಾಧಿಕಾರಿ ಅವರಿಗೆ ತಿಳಿಸಲಾಗುವುದು’ ಎಂದು ಹೇಳಿದರು.</p>.<p>ಜಿಲ್ಲಾಧಿಕಾರಿ ಕಚೇರಿ ಸಹಾಯಕ ಮೋಹನ್ಕುಮಾರ್, ಉಪವಿಭಾಗಾಧಿಕಾರಿ ಕಚೇರಿ ಸಹಾಯಕ ಸುರೇಶ್, ಕಂದಾಯ ನಿರೀಕ್ಷಕ ನಂಜುಂಡಸ್ವಾಮಿ, ಗ್ರಾಮ ಲೆಕ್ಕಾಧಿಕಾರಿ ವಿನೋದ್, ಕೊಳ್ಳೇಗಾಲ ಮರಳೇಶ್ವರ ದೇವಾಲಯ ಆರ್ಚಕ ನಾಗೇಂದ್ರ ಭಟ್, ಸುಳ್ವಾಡಿ ದೇವಾಲಯದ ಆರ್ಚಕರು, ಗ್ರಾಮಸ್ಥರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹನೂರು: </strong>ತಾಲ್ಲೂಕಿನ ಸುಳ್ವಾಡಿಯ ಕಿಚ್ಚುಗುತ್ತಿ ಮಾರಮ್ಮನ ದೇವಾಲಯಕ್ಕೆ ಧಾರ್ಮಿಕ ದತ್ತಿ ಇಲಾಖೆಯ ರಾಜ್ಯ ಆಗಮಿಕ ಪಂಡಿತ ವಿದ್ವಾನ್ ಜಿ.ಎ.ವಿಜಯ್ಕುಮಾರ್ ಅವರು ಮಂಗಳವಾರ ಭೇಟಿ ನೀಡಿ ಪರಿಶೀಲಿಸಿದರು.</p>.<p>ಜಿಲ್ಲಾ ಉಸ್ತುವಾರಿ ಸಚಿವ ಎಸ್.ಸುರೇಶ್ ಕುಮಾರ್ ಅವರು ಇತ್ತೀಚೆಗೆಸುಳ್ವಾಡಿಗೆ ಭೇಟಿ ನೀಡಿದ್ದ ಸಂದರ್ಭದಲ್ಲಿ ದೇವಾಲಯವನ್ನು ತೆರೆಯುವಂತೆ ಭಕ್ತರು ಒತ್ತಾಯಿಸಿದ್ದರು.</p>.<p>ವಿಷಪ್ರಸಾದ ದುರಂತ ನಡೆದ ಬಳಿಕ ದೇವಾಲಯವನ್ನು ಮುಜುರಾಯಿ ಇಲಾಖೆ ತನ್ನ ಸುಪರ್ದಿಗೆ ತೆಗೆದುಕೊಂಡಿತ್ತು. ಮಂಗಳವಾರ ದೇವಾಲಯಕ್ಕೆ ಭೇಟಿ ನೀಡಿದ ಪಂಡಿತರು ಪೂಜಾ ವಿಧಿವಿಧಾನಗಳ ಬಗ್ಗೆ ಸಂಪೂರ್ಣ ಮಾಹಿತಿ ಪಡೆದರು.</p>.<p>ನಂತರ ಮಾತನಾಡಿದ ವಿಜಯ್ ಕುಮಾರ್ ಅವರು, ‘ದೇವಾಲಯದಲ್ಲಿ ದುರಂತ ಸಂಭವಿಸಿ ಒಂದು ವರ್ಷವಾಗಿದೆ.ಅಂದಿನಿಂದ ಪೂಜೆ ನಡೆದಿಲ್ಲ. ಮತ್ತೆ ದೇವಸ್ಥಾನ ತೆರೆಯಲು ಅನುಸರಿಸಬೇಕಾದ ವಿಧಿ ವಿಧಾನಗಳ ಬಗ್ಗೆ ನಿರ್ಧರಿಸಿ ಜಿಲ್ಲಾಧಿಕಾರಿ ಅವರಿಗೆ ತಿಳಿಸಲಾಗುವುದು’ ಎಂದು ಹೇಳಿದರು.</p>.<p>ಜಿಲ್ಲಾಧಿಕಾರಿ ಕಚೇರಿ ಸಹಾಯಕ ಮೋಹನ್ಕುಮಾರ್, ಉಪವಿಭಾಗಾಧಿಕಾರಿ ಕಚೇರಿ ಸಹಾಯಕ ಸುರೇಶ್, ಕಂದಾಯ ನಿರೀಕ್ಷಕ ನಂಜುಂಡಸ್ವಾಮಿ, ಗ್ರಾಮ ಲೆಕ್ಕಾಧಿಕಾರಿ ವಿನೋದ್, ಕೊಳ್ಳೇಗಾಲ ಮರಳೇಶ್ವರ ದೇವಾಲಯ ಆರ್ಚಕ ನಾಗೇಂದ್ರ ಭಟ್, ಸುಳ್ವಾಡಿ ದೇವಾಲಯದ ಆರ್ಚಕರು, ಗ್ರಾಮಸ್ಥರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>