ಸರ್ಕಾರದ ಸೌಲಭ್ಯ ಪಡೆಯಿರಿ: ‘ರೈತರು ಸ್ವಯಂ ಪ್ರೇರಿತರಾಗಿ ಆಧಾರ್ ಸೀಡಿಂಗ್ ಮಾಡಿಸಲು ಮುಂದೆ ಬರುತ್ತಿಲ್ಲ. ಹೀಗಾಗಿ, ಗ್ರಾಮ ಮಟ್ಟದಲ್ಲಿ ಸಿಬ್ಬಂದಿ ಗಣಕ ಯಂತ್ರದೊಂದಿಗೆ ಧಾವಿಸಿ, ರೈತರನ್ನು ಈ ದೆಸೆಯಲ್ಲಿ ಉತ್ತೇಜಿಸಿ ಜೋಡಣೆ ಕಾರ್ಯ ಮಾಡುತ್ತಿದ್ದಾರೆ. ಈಚೆಗೆ ಸಾಗುವಳಿದಾರರಲ್ಲಿ ಮುಂದೆ ಬರುತ್ತಿದ್ದಾರೆ. ನಿಗಧಿತ ಸಮಯದಲ್ಲಿ ಕಂದಾಯ ನಿರೀಕ್ಷಕರು, ಕಂದಾಯ ಸಿಬ್ಬಂದಿ ಗ್ರಾಮಕ್ಕೆ ಬಂದಾಗ ರೈತರು ಸಹಕಾರ ನೀಡಬೇಕು. ಮಹಿಳಾ ಕೃಷಿಕರನ್ನು ಈ ದೆಸೆಯಲ್ಲಿ ಉತ್ತೇಜಿಸಿ ಈ ಕಾರ್ಯಕ್ಕೆ ಸಹಕರಿಸಬೇಕು’ ಎಂದು ರಾಜಸ್ವ ನಿರೀಕ್ಷಕ ಎಂ.ಎಸ್.ಯದುಗಿರಿ ‘ಪ್ರಜಾವಾಣಿ’ಗೆ ತಿಳಿಸಿದರು.