ಚಾಮರಾಜನಗರ: ಮೈಸೂರಿನಿಂದ ಚಾಮರಾಜನಗರಕ್ಕೆ ಬರುವ ಮತ್ತು ಹೋಗುವ ಎಲ್ಲ ರೈಲುಗಳನ್ನು ರೈಲ್ವೆ ಇಲಾಖೆ ಸ್ಥಗಿತಗೊಳಿಸಿದೆ. ಇದರಿಂದ ತುರ್ತು ಕಾರಣಗಳಿಗಾಗಿ ಮೈಸೂರಿಗೆ ತೆರಳುವ ಸಾರ್ವಜನಿಕರು ಗುರುವಾರ ಪರದಾಡಿದರು.
‘ಕೆಲವೇ ಕೆಲವು ಮಂದಿಯಷ್ಟೇ ರೈಲಿನಲ್ಲಿ ಪ್ರಯಾಣ ಮಾಡುತ್ತಿರುವುದರಿಂದ ನಷ್ಟ ಉಂಟಾಗುತ್ತಿತ್ತು. ಹಾಗಾಗಿ, ಚಾಮರಾಜನಗರಕ್ಕೆ ಬರುವ ಎಲ್ಲ ರೈಲುಗಳನ್ನು ಅನಿರ್ದಿಷ್ಟಾವಧಿಗೆ ಸ್ಥಗಿತಗೊಳಿಸಲಾಗಿದೆ’ ಎಂದು ರೈಲ್ವೆ ಇಲಾಖೆಯ ಮೂಲಗಳು ತಿಳಿಸಿವೆ.