<p><strong>ಚಾಮರಾಜನಗರ:</strong> ತಾಲ್ಲೂಕಿನ ವೆಂಕಟಯ್ಯನಛತ್ರದಲ್ಲಿ ಮಹಿಳೆಯೊಬ್ಬರ ಮನೆಯ ಮುಂದೆ ಸ್ಥಳೀಯ ಗ್ರಾಮ ಪಂಚಾಯಿತಿಯ ಬಿಲ್ಕಲೆಕ್ಟರ್ ಬಸವರಾಜು (35) ಅವರ ಶವ ಗುರುವಾರ ಬೆಳಿಗ್ಗೆ ಪತ್ತೆಯಾಗಿದೆ.</p>.<p>ಬಸವರಾಜು ಅವರ ದೇಹದಲ್ಲಿವಿಷ ಸೇರಿರುವುದು ದೃಢಪಟ್ಟಿದ್ದು, ಸಾವಿನ ಬಗ್ಗೆ ಅನುಮಾನ ಹುಟ್ಟಿಕೊಂಡಿದೆ.</p>.<p>‘ಬಸವರಾಜು ಅವರ ಬಟ್ಟೆಯ ಜೇಬಿನಲ್ಲಿ ಮರಣಪೂರ್ವ ಪತ್ರ ಸಿಕ್ಕಿದ್ದು, ಮೇಲ್ನೋಟಕ್ಕೆ ಆತ್ಮಹತ್ಯೆಯಂತೆ ಕಾಣುತ್ತಿದೆ. ಈ ಪತ್ರವನ್ನು ಬಸವರಾಜು ಅವರೇ ಬರೆದಿದ್ದಾರೆಯೇ ಎಂಬ ಬಗ್ಗೆ ತನಿಖೆ ನಡೆಯುತ್ತಿದ್ದು, ಅನುಮಾನಾಸ್ಪದ ಸಾವು ಎಂದು ಪ್ರಕರಣ ದಾಖಲಿಸಿಕೊಂಡಿದ್ದೇವೆ’ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಚ್.ಡಿ.ಆನಂದಕುಮಾರ್ ಅವರು ಹೇಳಿದ್ದಾರೆ.</p>.<p>‘ವೆಂಕಟಯ್ಯನಛತ್ರ ನಿವಾಸಿಯಾಗಿದ್ದ ಬಸವರಾಜು ಅವರಿಗೆ ಮದುವೆಯಾಗಿ ಒಂದು ವರ್ಷ ಗಂಡು ಮಗುವೂ ಇದೆ. ಹಾಗಿದ್ದರೂ ಮತ್ತೊಬ್ಬ ಮಹಿಳೆಯೊಂದಿಗೆ ಸಂಬಂಧ ಹೊಂದಿದ್ದರು. ಅವರನ್ನು ಗಾಢವಾಗಿ ಪ್ರೀತಿಸುತ್ತಿದ್ದರು. ಗಂಡನನ್ನು ಕಳೆದುಕೊಂಡಿದ್ದ ಆ ಮಹಿಳೆಯು ಬಸವರಾಜು ಮಾತ್ರವಲ್ಲದೇ ಬೇರೆ ವ್ಯಕ್ತಿಯೊಂದಿಗೂ ಸಲುಗೆಯಿಂದ ಇದ್ದರು. ಈ ವಿಷಯ ಗೊತ್ತಾಗಿ ಮನನೊಂದು ಬಸವರಾಜು ಅವರು ವಿಷ ಸೇವಿಸಿದ್ದಾರೆ ಎಂಬ ಮಾಹಿತಿ ಸದ್ಯಕ್ಕೆ ಲಭ್ಯವಾಗಿದೆ’ ಎಂದು ಅವರು ತಿಳಿಸಿದ್ದಾರೆ.</p>.<p>‘ಬೆಳಿಗ್ಗೆ 6 ಗಂಟೆ ಸ್ಥಳೀಯರು ನಮಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಶ್ವಾನದಳ, ಬೆರಳಚ್ಚು ತಜ್ಞರು, ವಿಧಿವಿಧಾನಗಳ ತಜ್ಞರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸದ್ಯಕ್ಕೆ ಈ ಪ್ರಕರಣದಲ್ಲಿ ಯಾರನ್ನೂ ಬಂಧಿಸಿಲ್ಲ. ಆದರೆ, ಸಂಬಂಧಿಸಿದ ಎಲ್ಲರನ್ನೂ ವಿಚಾರಣೆ ನಡೆಸಲಾಗುತ್ತದೆ’ ಎಂದು ಅವರು ಹೇಳಿದ್ದಾರೆ.</p>.<p>ರಾಮಸಮುದ್ರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಾಮರಾಜನಗರ:</strong> ತಾಲ್ಲೂಕಿನ ವೆಂಕಟಯ್ಯನಛತ್ರದಲ್ಲಿ ಮಹಿಳೆಯೊಬ್ಬರ ಮನೆಯ ಮುಂದೆ ಸ್ಥಳೀಯ ಗ್ರಾಮ ಪಂಚಾಯಿತಿಯ ಬಿಲ್ಕಲೆಕ್ಟರ್ ಬಸವರಾಜು (35) ಅವರ ಶವ ಗುರುವಾರ ಬೆಳಿಗ್ಗೆ ಪತ್ತೆಯಾಗಿದೆ.</p>.<p>ಬಸವರಾಜು ಅವರ ದೇಹದಲ್ಲಿವಿಷ ಸೇರಿರುವುದು ದೃಢಪಟ್ಟಿದ್ದು, ಸಾವಿನ ಬಗ್ಗೆ ಅನುಮಾನ ಹುಟ್ಟಿಕೊಂಡಿದೆ.</p>.<p>‘ಬಸವರಾಜು ಅವರ ಬಟ್ಟೆಯ ಜೇಬಿನಲ್ಲಿ ಮರಣಪೂರ್ವ ಪತ್ರ ಸಿಕ್ಕಿದ್ದು, ಮೇಲ್ನೋಟಕ್ಕೆ ಆತ್ಮಹತ್ಯೆಯಂತೆ ಕಾಣುತ್ತಿದೆ. ಈ ಪತ್ರವನ್ನು ಬಸವರಾಜು ಅವರೇ ಬರೆದಿದ್ದಾರೆಯೇ ಎಂಬ ಬಗ್ಗೆ ತನಿಖೆ ನಡೆಯುತ್ತಿದ್ದು, ಅನುಮಾನಾಸ್ಪದ ಸಾವು ಎಂದು ಪ್ರಕರಣ ದಾಖಲಿಸಿಕೊಂಡಿದ್ದೇವೆ’ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಚ್.ಡಿ.ಆನಂದಕುಮಾರ್ ಅವರು ಹೇಳಿದ್ದಾರೆ.</p>.<p>‘ವೆಂಕಟಯ್ಯನಛತ್ರ ನಿವಾಸಿಯಾಗಿದ್ದ ಬಸವರಾಜು ಅವರಿಗೆ ಮದುವೆಯಾಗಿ ಒಂದು ವರ್ಷ ಗಂಡು ಮಗುವೂ ಇದೆ. ಹಾಗಿದ್ದರೂ ಮತ್ತೊಬ್ಬ ಮಹಿಳೆಯೊಂದಿಗೆ ಸಂಬಂಧ ಹೊಂದಿದ್ದರು. ಅವರನ್ನು ಗಾಢವಾಗಿ ಪ್ರೀತಿಸುತ್ತಿದ್ದರು. ಗಂಡನನ್ನು ಕಳೆದುಕೊಂಡಿದ್ದ ಆ ಮಹಿಳೆಯು ಬಸವರಾಜು ಮಾತ್ರವಲ್ಲದೇ ಬೇರೆ ವ್ಯಕ್ತಿಯೊಂದಿಗೂ ಸಲುಗೆಯಿಂದ ಇದ್ದರು. ಈ ವಿಷಯ ಗೊತ್ತಾಗಿ ಮನನೊಂದು ಬಸವರಾಜು ಅವರು ವಿಷ ಸೇವಿಸಿದ್ದಾರೆ ಎಂಬ ಮಾಹಿತಿ ಸದ್ಯಕ್ಕೆ ಲಭ್ಯವಾಗಿದೆ’ ಎಂದು ಅವರು ತಿಳಿಸಿದ್ದಾರೆ.</p>.<p>‘ಬೆಳಿಗ್ಗೆ 6 ಗಂಟೆ ಸ್ಥಳೀಯರು ನಮಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಶ್ವಾನದಳ, ಬೆರಳಚ್ಚು ತಜ್ಞರು, ವಿಧಿವಿಧಾನಗಳ ತಜ್ಞರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸದ್ಯಕ್ಕೆ ಈ ಪ್ರಕರಣದಲ್ಲಿ ಯಾರನ್ನೂ ಬಂಧಿಸಿಲ್ಲ. ಆದರೆ, ಸಂಬಂಧಿಸಿದ ಎಲ್ಲರನ್ನೂ ವಿಚಾರಣೆ ನಡೆಸಲಾಗುತ್ತದೆ’ ಎಂದು ಅವರು ಹೇಳಿದ್ದಾರೆ.</p>.<p>ರಾಮಸಮುದ್ರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>