ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಪಕ್ಷ ತೊರೆದಿರುವ ನಾಗರಾಜು, ನಾಗಯ್ಯ ಅವರ ಬಗ್ಗೆ ಇಲ್ಲಸಲ್ಲದ ಮಾತುಗಳನ್ನು ಹೇಳಿದ್ದಾರೆ. ಚುನಾವಣೆಯಿಂದ ಚುನಾವಣೆಗೆ ಪಕ್ಷದಿಂದ ಪಕ್ಷಕ್ಕೆ ಹಾರುವ ನಾಗರಾಜು, ಪಕ್ಷಾಂತರಿ ಮಾತ್ರ ಅಲ್ಲ, ತತ್ವಾಂತರಿಯಾಗಿದ್ದಾರೆ. 12 ವರ್ಷಗಳ ಹಿಂದೆ ಬಿಎಸ್ಪಿಯಲ್ಲಿದ್ದ ನಾಗರಾಜು, ಕಾಂಗ್ರೆಸ್ಗೆ ಹೋಗಿದ್ದರು. ಅಲ್ಲಿ ಜಿಲ್ಲಾ ಪಂಚಾಯಿತಿ ಟಿಕೆಟ್ ಸಿಕ್ಕಿಲ್ಲ ಎಂದು ಬಿಜೆಪಿಗೆ ಸೇರಿದ್ದರು. ಅಲ್ಲಿ ಜಿಲ್ಲಾ ಪಂಚಾಯಿತಿ ಟಿಕೆಟ್ ಪಡೆದು ಗೆದ್ದಿದ್ದರು. ಅವಧಿ ಮುಗಿದ ನಂತರ ಬಿಎಸ್ಪಿಗೆ ಬಂದಿದ್ದರು. ಈಗ ಮತ್ತೆ ಕಾಂಗ್ರೆಸ್ಗೆ ಸೇರ್ಪಡೆಯಾಗಿದ್ದಾರೆ. ಅವರು ಯಾವುದೇ ಪಕ್ಷದಲ್ಲಿದ್ದರೂ, ಆಯಾ ಪಕ್ಷದ ತತ್ವ ಸಿದ್ಧಾಂತಕ್ಕೆ ನಿಷ್ಠರಾಗಿರುವುದಿಲ್ಲ’ ಎಂದು ದೂರಿದರು.