<p><strong>ಹನೂರು: </strong>ತಾಲ್ಲೂಕು ಕೇಂದ್ರ ಹನೂರಿನಲ್ಲಿರುವಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರವು ಪಟ್ಟಣ ಹಾಗೂ ತಾಲ್ಲೂಕಿನ ಜನರ ಪಾಲಿಗೆ ಇದ್ದೂ ಇಲ್ಲದಂತಾಗಿದೆ.</p>.<p>ಆಸ್ಪತ್ರೆಯು ಅಗತ್ಯ ಮೂಲ ಸೌಕರ್ಯಗಳಿಂದ ವಂಚಿತವಾಗಿದ್ದು, ಜನರು ಸಾಮಾನ್ಯ ರೋಗಗಳಿಗೂ ಚಿಕಿತ್ಸೆ ಪಡೆಯಲು ಖಾಸಗಿ ಆಸ್ಪತ್ರೆ ಅಥವಾ ಕೊಳ್ಳೇಗಾಲದ ಸರ್ಕಾರಿ ಉಪವಿಭಾಗ ಆಸ್ಪತ್ರೆಗೆ ತೆರಳುವ ಪರಿಸ್ಥಿತಿ ನಿರ್ಮಾಣವಾಗಿದೆ.</p>.<p>ಆಸ್ಪತ್ರೆಯು ಸಾಕಷ್ಟು ವಿಶಾಲವಾದ ಆವರಣ ಹೊಂದಿದೆ. ಆದರೆ, ಸುತ್ತು ಗೋಡೆ ಇಲ್ಲದಿರುವುದರಿಂದ ಬಿಡಾಡಿ ಜಾನುವಾರುಗಳ ಆವಾಸ ಸ್ಥಾನವಾಗಿ, ಅನೈತಿಕ ಚಟುವಟಿಕೆಗಳ ತಾಣವಾಗಿ ಮಾರ್ಪಟ್ಟಿದೆ. ನಿರ್ವಹಣೆಯ ಕೊರತೆ ಯಿಂದ ಆವರಣದಲ್ಲಿ ಗಿಡಗಂಟಿಗಳು ಬೆಳೆದು ನಿಂತಿವೆ.</p>.<p class="Subhead"><strong>ವೈದ್ಯರ ಕೊರತೆ</strong></p>.<p class="Subhead">ಹನೂರು ಪ್ರತ್ಯೇಕ ತಾಲ್ಲೂಕು ಎಂದು ಘೋಷಣೆ ಯಾದರೂ, ಆಸ್ಪತ್ರೆ ಇನ್ನೂ ಪ್ರಾಥಮಿಕ ಆರೋಗ್ಯ ಕೇಂದ್ರವೇ ಆಗಿದೆ. ಇಲ್ಲಿ ಒಬ್ಬರೇ ವೈದ್ಯರಿದ್ದು,ಗ್ರಾಮೀಣ ಭಾಗದಿಂದ ಬರುವ ಜನರ ಚಿಕಿತ್ಸೆಗೆ ಸಮಸ್ಯೆಯಾಗಿದೆ.</p>.<p>ಹೆರಿಗೆಗೆಂದು ಮೀಸಲಾದ ಕೊಠಡಿಯೂ ಇಲ್ಲಿದೆ. ಆದರೆ, ಸೌಲಭ್ಯ ಕೊರತೆಯಿಂದ ಆ ಕೊಠಡಿ ಪಾಳು ಬಿದ್ದಿದೆ. ಗ್ರಾಮೀಣ ಭಾಗದಿಂದ ಬರುವ ಜನರು ಕೊಳ್ಳೇಗಾಲದ ಸರ್ಕಾರಿ ಆಸ್ಪತ್ರೆಯನ್ನೇ ಅವಲಂಬಿಸುತ್ತಿದ್ದಾರೆ.</p>.<p class="Subhead"><strong>ಹೆಸರಿಗಷ್ಟೇ 24X7 ಸೇವೆ</strong></p>.<p class="Subhead">ಜನಸಾಮಾನ್ಯರಿಗೆ ದಿನದ 24 ಗಂಟೆಗಳ ಕಾಲವೂ ಆರೋಗ್ಯ ಸೌಲಭ್ಯ ನೀಡಬೇಕು ಎಂಬ ಉದ್ದೇಶದಿಂದ ಸರ್ಕಾರ ಆರಂಭಿಸಿದ 24X7 ಆರೋಗ್ಯ ಸೌಲಭ್ಯ ಪಟ್ಟಣದ ಜನತೆಗೆ ಮರೀಚಿಕೆಯಾಗಿದೆ.</p>.<p>ದಿನಪೂರ್ತಿ ಜನರಿಗೆ ಚಿಕಿತ್ಸಾ ಸೌಲಭ್ಯ ನೀಡಬೇಕು ಎಂದರೆ ಅದಕ್ಕೆ ತಕ್ಕಂತೆ ವೈದ್ಯಕೀಯ ಉಪಕರಣಗಳು ಇರಬೇಕು. ಆದರೆ, ಇಲ್ಲಿ ಉನ್ನತ ಮಟ್ಟದ ಚಿಕಿತ್ಸಾ ಸೌಲಭ್ಯವಿಲ್ಲದ ಕಾರಣ 24 ಗಂಟೆ ಸೇವೆ ಕೇವಲ ಹೆಸರಿಗಷ್ಟೇ ಸೀಮಿತವಾಗಿದೆ ಎಂಬುದು ನಾಗರಿಕರ ಆರೋಪ.</p>.<p>ರಾತ್ರಿ ಹೊತ್ತು ಸಿಬ್ಬಂದಿ ಇರುವುದಿಲ್ಲ. 24 ಗಂಟೆಗಳ ಕಾಲವು ಚಿಕಿತ್ಸೆ ಇದೆ ಎಂದು ತುರ್ತು ಸಂದರ್ಭದಲ್ಲಿ ಬಂದರೆ ನಿರಾಸೆ ಕಟ್ಟಿಟ್ಟಬುತ್ತಿ.ಈಚೆಗೆ ಪಟ್ಟಣದ ವ್ಯಕ್ತಿಯೊಬ್ಬರಿಗೆ ರಕ್ತದೊತ್ತಡ ಸಮಸ್ಯೆಯಾಗಿ ಚಿಕಿತ್ಸೆ ಸಿಗದೆ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.</p>.<p>‘ಇಂತಹ ಪ್ರಕರಣಗಳು ಪಟ್ಟಣದಲ್ಲಿ ಮೇಲಿಂದ ಮೇಲೆ ಜರುಗುತ್ತಿದ್ದರೂ, ಅಧಿಕಾರಿಗಳು, ಸಿಬ್ಬಂದಿ ಸ್ಪಂದಿಸುತ್ತಿಲ್ಲ’ ಎಂದು ಸ್ಥಳೀಯರು ಆರೋಪಿಸುತ್ತಾರೆ.</p>.<p>ಪ್ರತಿನಿತ್ಯ ಇಲ್ಲಿಗೆ ನೂರಾರು ಮಂದಿ ಚಿಕಿತ್ಸೆಗೆ ಬರುತ್ತಾರೆ. ರಕ್ತಪರೀಕ್ಷೆ ಬಿಟ್ಟು ಮೂತ್ರ ಪರೀಕ್ಷೆ, ಎಕ್ಸ್ ರೇ ಸೇರಿದಂತೆ ವಿವಿಧ ಪರೀಕ್ಷೆಗಳಿಗೆ ಕಾಮಗೆರೆಯಲ್ಲಿರುವ ಖಾಸಗಿ ಆಸ್ಪತ್ರೆ ಅಥವಾ ಕೊಳ್ಳೇಗಾಲಕ್ಕೆ ತೆರಳಬೇಕು.</p>.<p class="Subhead">ಮೇಲ್ದರ್ಜೆಗೇರದ ಆಸ್ಪತ್ರೆ:ಹೋಬಳಿ ಕೇಂದ್ರವಾಗಿದ್ದ ಹನೂರು ತಾಲ್ಲೂಕು ಕೇಂದ್ರವಾಗಿ ಮೇಲ್ದರ್ಜೆಗೇರಿದ್ದರೂ, ಆರೋಗ್ಯ ಸೇವೆಗಳು ಮೇಲ್ದರ್ಜೆಗೇರಿಲ್ಲ.</p>.<p>ಪ್ರಾಥಮಿಕ ಆರೋಗ್ಯ ಕೇಂದ್ರ ತಾಲ್ಲೂಕು ಆಸ್ಪತ್ರೆಯಾಗಿ ಬದಲಾದರೆ, ಪಟ್ಟಣ, ಗ್ರಾಮೀಣ ಜನರಿಗೆ ಅನುಕೂಲ ವಾಗುತ್ತದೆ. ಕನಿಷ್ಠ ಚಿಕಿತ್ಸಾ ಸೌಲಭ್ಯಗಳು ಇಲ್ಲಿಯೇ ಸಿಗುವಂತಾಗುತ್ತದೆ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಜಿಲ್ಲಾಡಳಿತ ಈ ಬಗ್ಗೆ ಗಮನ ಹರಿಸಬೇಕು ಎಂಬುದು ಸ್ಥಳೀಯರ ಆಗ್ರಹ.</p>.<p class="Briefhead"><strong>‘ಮೇಲ್ದರ್ಜೆಗೇರಿಸಲು ಸರ್ಕಾರಕ್ಕೆ ಪ್ರಸ್ತಾವ’</strong></p>.<p>‘ಹನೂರಿನ ಆರೋಗ್ಯ ಕೇಂದ್ರದಲ್ಲಿರುವ ಮೂಲಸೌಕರ್ಯ ಕೊರತೆ ಹಾಗೂ ಗುಣಮಟ್ಟದ ಚಿಕಿತ್ಸೆ ದೊರೆದಿರುವುದು ನನ್ನ ಗಮನಕ್ಕೆ ಬಂದಿದೆ. ಕೇಂದ್ರವನ್ನು ಮೇಲ್ದರ್ಜೆಗೆ ಏರಿಸುವ ಅಗತ್ಯವಿದೆ. ಈ ಕೆಲಸವಾದರೆ ಮೂಲಸೌಕರ್ಯ, ಸಿಬ್ಬಂದಿ ಕೊರತೆ ಸಮಸ್ಯೆಗಳು ನಿವಾರಣೆಯಾಗಲಿವೆ. ಈ ಬಗ್ಗೆ ತಾಲ್ಲೂಕು ಆರೋಗ್ಯಾಧಿಕಾರಿಗಳಿಂದ ಸಂಪೂರ್ಣ ವರದಿ ಸಂಗ್ರಹಿಸಿ ಮೇಲ್ದರ್ಜೆಗೇರಿಸುವ ಸಂಬಂಧ ಈಗಾಗಲೇ ಕ್ರಿಯಾಯೋಜನೆ ತಯಾರಿಸಿ ಸರ್ಕಾರಕ್ಕೆ ಕಳುಹಿಸಲಾಗಿದೆ’ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಎಂ.ಸಿ.ರವಿ ‘ಪ್ರಜಾವಾಣಿ’ಗೆ ತಿಳಿಸಿದರು.</p>.<p class="Briefhead"><strong>ತುರ್ತು ನಿಗಾ ಘಟಕ ಇಲ್ಲ</strong></p>.<p>ಹನೂರು ಪಟ್ಟಣ ಸಾಕಷ್ಟು ಬೆಳೆದಿದೆ. ಪ್ರತಿನಿತ್ಯ ಒಂದಿಲ್ಲೊಂದು ಅವಘಡ ಸಂಭವಿಸುತ್ತಲೇ ಇರುತ್ತದೆ. ಆದರೆ, ಅದನ್ನು ಸಮರ್ಪಕವಾಗಿ ನಿರ್ವಹಿಸಲು ಇಲ್ಲಿನ ಆಸ್ಪತ್ರೆಯಲ್ಲಿ ತುರ್ತು ನಿಗಾ ಘಟಕವೇ ಇಲ್ಲ. ಈ ಬಗ್ಗೆ ಅಧಿಕಾರಿಗಳು ಕ್ರಮವಹಿಸಬೇಕು.</p>.<p><strong>–ಸಿದ್ದರಾಜು, ಹನೂರು</strong></p>.<p class="Briefhead"><strong>***</strong></p>.<p class="Briefhead"><strong>ಆಸ್ಪತ್ರೆ ಇದ್ದೂ ಇಲ್ಲದಂತೆ</strong></p>.<p>ತಾಲ್ಲೂಕು ಕೇಂದ್ರದಲ್ಲಿರುವ ಸರ್ಕಾರಿ ಆಸ್ಪತ್ರೆ ಇದ್ದೂ ಇಲ್ಲದಂತಾಗಿದೆ. ಪಟ್ಟಣಿಗರು ಸೇರಿದಂತೆ ಸುತ್ತಮುತ್ತಲ ಹಳ್ಳಿಯ ಜನರು ಚಿಕಿತ್ಸೆಗಾಗಿ ಖಾಸಗಿ ಹಾಗೂ ಕೊಳ್ಳೇಗಾಲ, ಸಂತೇಮರಳ್ಳಿ ಆಸ್ಪತ್ರೆಗೆ ಹೋಗಬೇಕಾಗಿದೆ. ತಾಲ್ಲೂಕು ವ್ಯಾಪ್ತಿಯಲ್ಲಿ ಹೆಚ್ಚಾಗಿ ಗ್ರಾಮಗಳೇ ಇರುವುದರಿಂದ ಉತ್ತಮ ಆಸ್ಪತ್ರೆ ಅಗತ್ಯವಿದೆ.</p>.<p><strong>–ಉದ್ದನೂರು ಪ್ರಸಾದ್, ಹನೂರು</strong></p>.<p class="Briefhead">***</p>.<p class="Briefhead"><strong>ರಾತ್ರಿ ವೇಳೆ ಸಿಬ್ಬಂದಿ ಇಲ್ಲ</strong></p>.<p>ಹೆಸರಿಗೆ ಮಾತ್ರ ದಿನದ 24 ಗಂಟೆ ಆರೋಗ್ಯ ಸೌಲಭ್ಯ ಎಂದು ಬರೆಯಲಾಗಿದೆ. ವಾಸ್ತವವಾಗಿ ರಾತ್ರಿ ವೇಳೆ ಸಿಬ್ಬಂದಿಯೇ ಇರುವುದಿಲ್ಲ. ರಾತ್ರಿ ವೇಳೆ ಚಿಕಿತ್ಸೆಗಾಗಿ ಬರುವ ಜನರು ನಿರಾಸೆಯಿಂದ ಖಾಸಗಿ ಆಸ್ಪತ್ರೆಗೆ ಹೋಗಬೇಕಿದೆ. ಹೀಗಾಗಿ, ಕೂಡಲೇ ಭದ್ರತಾ ಸಿಬ್ಬಂದಿಯನ್ನು ನೇಮಿಸಬೇಕು. ಮೂಲಸೌಕರ್ಯ ಕಲ್ಪಿಸಬೇಕು.</p>.<p><strong>–ಜೆ.ಶಿವರಾಜು, ಹನೂರು</strong></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹನೂರು: </strong>ತಾಲ್ಲೂಕು ಕೇಂದ್ರ ಹನೂರಿನಲ್ಲಿರುವಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರವು ಪಟ್ಟಣ ಹಾಗೂ ತಾಲ್ಲೂಕಿನ ಜನರ ಪಾಲಿಗೆ ಇದ್ದೂ ಇಲ್ಲದಂತಾಗಿದೆ.</p>.<p>ಆಸ್ಪತ್ರೆಯು ಅಗತ್ಯ ಮೂಲ ಸೌಕರ್ಯಗಳಿಂದ ವಂಚಿತವಾಗಿದ್ದು, ಜನರು ಸಾಮಾನ್ಯ ರೋಗಗಳಿಗೂ ಚಿಕಿತ್ಸೆ ಪಡೆಯಲು ಖಾಸಗಿ ಆಸ್ಪತ್ರೆ ಅಥವಾ ಕೊಳ್ಳೇಗಾಲದ ಸರ್ಕಾರಿ ಉಪವಿಭಾಗ ಆಸ್ಪತ್ರೆಗೆ ತೆರಳುವ ಪರಿಸ್ಥಿತಿ ನಿರ್ಮಾಣವಾಗಿದೆ.</p>.<p>ಆಸ್ಪತ್ರೆಯು ಸಾಕಷ್ಟು ವಿಶಾಲವಾದ ಆವರಣ ಹೊಂದಿದೆ. ಆದರೆ, ಸುತ್ತು ಗೋಡೆ ಇಲ್ಲದಿರುವುದರಿಂದ ಬಿಡಾಡಿ ಜಾನುವಾರುಗಳ ಆವಾಸ ಸ್ಥಾನವಾಗಿ, ಅನೈತಿಕ ಚಟುವಟಿಕೆಗಳ ತಾಣವಾಗಿ ಮಾರ್ಪಟ್ಟಿದೆ. ನಿರ್ವಹಣೆಯ ಕೊರತೆ ಯಿಂದ ಆವರಣದಲ್ಲಿ ಗಿಡಗಂಟಿಗಳು ಬೆಳೆದು ನಿಂತಿವೆ.</p>.<p class="Subhead"><strong>ವೈದ್ಯರ ಕೊರತೆ</strong></p>.<p class="Subhead">ಹನೂರು ಪ್ರತ್ಯೇಕ ತಾಲ್ಲೂಕು ಎಂದು ಘೋಷಣೆ ಯಾದರೂ, ಆಸ್ಪತ್ರೆ ಇನ್ನೂ ಪ್ರಾಥಮಿಕ ಆರೋಗ್ಯ ಕೇಂದ್ರವೇ ಆಗಿದೆ. ಇಲ್ಲಿ ಒಬ್ಬರೇ ವೈದ್ಯರಿದ್ದು,ಗ್ರಾಮೀಣ ಭಾಗದಿಂದ ಬರುವ ಜನರ ಚಿಕಿತ್ಸೆಗೆ ಸಮಸ್ಯೆಯಾಗಿದೆ.</p>.<p>ಹೆರಿಗೆಗೆಂದು ಮೀಸಲಾದ ಕೊಠಡಿಯೂ ಇಲ್ಲಿದೆ. ಆದರೆ, ಸೌಲಭ್ಯ ಕೊರತೆಯಿಂದ ಆ ಕೊಠಡಿ ಪಾಳು ಬಿದ್ದಿದೆ. ಗ್ರಾಮೀಣ ಭಾಗದಿಂದ ಬರುವ ಜನರು ಕೊಳ್ಳೇಗಾಲದ ಸರ್ಕಾರಿ ಆಸ್ಪತ್ರೆಯನ್ನೇ ಅವಲಂಬಿಸುತ್ತಿದ್ದಾರೆ.</p>.<p class="Subhead"><strong>ಹೆಸರಿಗಷ್ಟೇ 24X7 ಸೇವೆ</strong></p>.<p class="Subhead">ಜನಸಾಮಾನ್ಯರಿಗೆ ದಿನದ 24 ಗಂಟೆಗಳ ಕಾಲವೂ ಆರೋಗ್ಯ ಸೌಲಭ್ಯ ನೀಡಬೇಕು ಎಂಬ ಉದ್ದೇಶದಿಂದ ಸರ್ಕಾರ ಆರಂಭಿಸಿದ 24X7 ಆರೋಗ್ಯ ಸೌಲಭ್ಯ ಪಟ್ಟಣದ ಜನತೆಗೆ ಮರೀಚಿಕೆಯಾಗಿದೆ.</p>.<p>ದಿನಪೂರ್ತಿ ಜನರಿಗೆ ಚಿಕಿತ್ಸಾ ಸೌಲಭ್ಯ ನೀಡಬೇಕು ಎಂದರೆ ಅದಕ್ಕೆ ತಕ್ಕಂತೆ ವೈದ್ಯಕೀಯ ಉಪಕರಣಗಳು ಇರಬೇಕು. ಆದರೆ, ಇಲ್ಲಿ ಉನ್ನತ ಮಟ್ಟದ ಚಿಕಿತ್ಸಾ ಸೌಲಭ್ಯವಿಲ್ಲದ ಕಾರಣ 24 ಗಂಟೆ ಸೇವೆ ಕೇವಲ ಹೆಸರಿಗಷ್ಟೇ ಸೀಮಿತವಾಗಿದೆ ಎಂಬುದು ನಾಗರಿಕರ ಆರೋಪ.</p>.<p>ರಾತ್ರಿ ಹೊತ್ತು ಸಿಬ್ಬಂದಿ ಇರುವುದಿಲ್ಲ. 24 ಗಂಟೆಗಳ ಕಾಲವು ಚಿಕಿತ್ಸೆ ಇದೆ ಎಂದು ತುರ್ತು ಸಂದರ್ಭದಲ್ಲಿ ಬಂದರೆ ನಿರಾಸೆ ಕಟ್ಟಿಟ್ಟಬುತ್ತಿ.ಈಚೆಗೆ ಪಟ್ಟಣದ ವ್ಯಕ್ತಿಯೊಬ್ಬರಿಗೆ ರಕ್ತದೊತ್ತಡ ಸಮಸ್ಯೆಯಾಗಿ ಚಿಕಿತ್ಸೆ ಸಿಗದೆ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.</p>.<p>‘ಇಂತಹ ಪ್ರಕರಣಗಳು ಪಟ್ಟಣದಲ್ಲಿ ಮೇಲಿಂದ ಮೇಲೆ ಜರುಗುತ್ತಿದ್ದರೂ, ಅಧಿಕಾರಿಗಳು, ಸಿಬ್ಬಂದಿ ಸ್ಪಂದಿಸುತ್ತಿಲ್ಲ’ ಎಂದು ಸ್ಥಳೀಯರು ಆರೋಪಿಸುತ್ತಾರೆ.</p>.<p>ಪ್ರತಿನಿತ್ಯ ಇಲ್ಲಿಗೆ ನೂರಾರು ಮಂದಿ ಚಿಕಿತ್ಸೆಗೆ ಬರುತ್ತಾರೆ. ರಕ್ತಪರೀಕ್ಷೆ ಬಿಟ್ಟು ಮೂತ್ರ ಪರೀಕ್ಷೆ, ಎಕ್ಸ್ ರೇ ಸೇರಿದಂತೆ ವಿವಿಧ ಪರೀಕ್ಷೆಗಳಿಗೆ ಕಾಮಗೆರೆಯಲ್ಲಿರುವ ಖಾಸಗಿ ಆಸ್ಪತ್ರೆ ಅಥವಾ ಕೊಳ್ಳೇಗಾಲಕ್ಕೆ ತೆರಳಬೇಕು.</p>.<p class="Subhead">ಮೇಲ್ದರ್ಜೆಗೇರದ ಆಸ್ಪತ್ರೆ:ಹೋಬಳಿ ಕೇಂದ್ರವಾಗಿದ್ದ ಹನೂರು ತಾಲ್ಲೂಕು ಕೇಂದ್ರವಾಗಿ ಮೇಲ್ದರ್ಜೆಗೇರಿದ್ದರೂ, ಆರೋಗ್ಯ ಸೇವೆಗಳು ಮೇಲ್ದರ್ಜೆಗೇರಿಲ್ಲ.</p>.<p>ಪ್ರಾಥಮಿಕ ಆರೋಗ್ಯ ಕೇಂದ್ರ ತಾಲ್ಲೂಕು ಆಸ್ಪತ್ರೆಯಾಗಿ ಬದಲಾದರೆ, ಪಟ್ಟಣ, ಗ್ರಾಮೀಣ ಜನರಿಗೆ ಅನುಕೂಲ ವಾಗುತ್ತದೆ. ಕನಿಷ್ಠ ಚಿಕಿತ್ಸಾ ಸೌಲಭ್ಯಗಳು ಇಲ್ಲಿಯೇ ಸಿಗುವಂತಾಗುತ್ತದೆ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಜಿಲ್ಲಾಡಳಿತ ಈ ಬಗ್ಗೆ ಗಮನ ಹರಿಸಬೇಕು ಎಂಬುದು ಸ್ಥಳೀಯರ ಆಗ್ರಹ.</p>.<p class="Briefhead"><strong>‘ಮೇಲ್ದರ್ಜೆಗೇರಿಸಲು ಸರ್ಕಾರಕ್ಕೆ ಪ್ರಸ್ತಾವ’</strong></p>.<p>‘ಹನೂರಿನ ಆರೋಗ್ಯ ಕೇಂದ್ರದಲ್ಲಿರುವ ಮೂಲಸೌಕರ್ಯ ಕೊರತೆ ಹಾಗೂ ಗುಣಮಟ್ಟದ ಚಿಕಿತ್ಸೆ ದೊರೆದಿರುವುದು ನನ್ನ ಗಮನಕ್ಕೆ ಬಂದಿದೆ. ಕೇಂದ್ರವನ್ನು ಮೇಲ್ದರ್ಜೆಗೆ ಏರಿಸುವ ಅಗತ್ಯವಿದೆ. ಈ ಕೆಲಸವಾದರೆ ಮೂಲಸೌಕರ್ಯ, ಸಿಬ್ಬಂದಿ ಕೊರತೆ ಸಮಸ್ಯೆಗಳು ನಿವಾರಣೆಯಾಗಲಿವೆ. ಈ ಬಗ್ಗೆ ತಾಲ್ಲೂಕು ಆರೋಗ್ಯಾಧಿಕಾರಿಗಳಿಂದ ಸಂಪೂರ್ಣ ವರದಿ ಸಂಗ್ರಹಿಸಿ ಮೇಲ್ದರ್ಜೆಗೇರಿಸುವ ಸಂಬಂಧ ಈಗಾಗಲೇ ಕ್ರಿಯಾಯೋಜನೆ ತಯಾರಿಸಿ ಸರ್ಕಾರಕ್ಕೆ ಕಳುಹಿಸಲಾಗಿದೆ’ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಎಂ.ಸಿ.ರವಿ ‘ಪ್ರಜಾವಾಣಿ’ಗೆ ತಿಳಿಸಿದರು.</p>.<p class="Briefhead"><strong>ತುರ್ತು ನಿಗಾ ಘಟಕ ಇಲ್ಲ</strong></p>.<p>ಹನೂರು ಪಟ್ಟಣ ಸಾಕಷ್ಟು ಬೆಳೆದಿದೆ. ಪ್ರತಿನಿತ್ಯ ಒಂದಿಲ್ಲೊಂದು ಅವಘಡ ಸಂಭವಿಸುತ್ತಲೇ ಇರುತ್ತದೆ. ಆದರೆ, ಅದನ್ನು ಸಮರ್ಪಕವಾಗಿ ನಿರ್ವಹಿಸಲು ಇಲ್ಲಿನ ಆಸ್ಪತ್ರೆಯಲ್ಲಿ ತುರ್ತು ನಿಗಾ ಘಟಕವೇ ಇಲ್ಲ. ಈ ಬಗ್ಗೆ ಅಧಿಕಾರಿಗಳು ಕ್ರಮವಹಿಸಬೇಕು.</p>.<p><strong>–ಸಿದ್ದರಾಜು, ಹನೂರು</strong></p>.<p class="Briefhead"><strong>***</strong></p>.<p class="Briefhead"><strong>ಆಸ್ಪತ್ರೆ ಇದ್ದೂ ಇಲ್ಲದಂತೆ</strong></p>.<p>ತಾಲ್ಲೂಕು ಕೇಂದ್ರದಲ್ಲಿರುವ ಸರ್ಕಾರಿ ಆಸ್ಪತ್ರೆ ಇದ್ದೂ ಇಲ್ಲದಂತಾಗಿದೆ. ಪಟ್ಟಣಿಗರು ಸೇರಿದಂತೆ ಸುತ್ತಮುತ್ತಲ ಹಳ್ಳಿಯ ಜನರು ಚಿಕಿತ್ಸೆಗಾಗಿ ಖಾಸಗಿ ಹಾಗೂ ಕೊಳ್ಳೇಗಾಲ, ಸಂತೇಮರಳ್ಳಿ ಆಸ್ಪತ್ರೆಗೆ ಹೋಗಬೇಕಾಗಿದೆ. ತಾಲ್ಲೂಕು ವ್ಯಾಪ್ತಿಯಲ್ಲಿ ಹೆಚ್ಚಾಗಿ ಗ್ರಾಮಗಳೇ ಇರುವುದರಿಂದ ಉತ್ತಮ ಆಸ್ಪತ್ರೆ ಅಗತ್ಯವಿದೆ.</p>.<p><strong>–ಉದ್ದನೂರು ಪ್ರಸಾದ್, ಹನೂರು</strong></p>.<p class="Briefhead">***</p>.<p class="Briefhead"><strong>ರಾತ್ರಿ ವೇಳೆ ಸಿಬ್ಬಂದಿ ಇಲ್ಲ</strong></p>.<p>ಹೆಸರಿಗೆ ಮಾತ್ರ ದಿನದ 24 ಗಂಟೆ ಆರೋಗ್ಯ ಸೌಲಭ್ಯ ಎಂದು ಬರೆಯಲಾಗಿದೆ. ವಾಸ್ತವವಾಗಿ ರಾತ್ರಿ ವೇಳೆ ಸಿಬ್ಬಂದಿಯೇ ಇರುವುದಿಲ್ಲ. ರಾತ್ರಿ ವೇಳೆ ಚಿಕಿತ್ಸೆಗಾಗಿ ಬರುವ ಜನರು ನಿರಾಸೆಯಿಂದ ಖಾಸಗಿ ಆಸ್ಪತ್ರೆಗೆ ಹೋಗಬೇಕಿದೆ. ಹೀಗಾಗಿ, ಕೂಡಲೇ ಭದ್ರತಾ ಸಿಬ್ಬಂದಿಯನ್ನು ನೇಮಿಸಬೇಕು. ಮೂಲಸೌಕರ್ಯ ಕಲ್ಪಿಸಬೇಕು.</p>.<p><strong>–ಜೆ.ಶಿವರಾಜು, ಹನೂರು</strong></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>