ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚಾಮರಾಜನಗರ: ಬಿಜೆಪಿ ಜಿಲ್ಲಾ ಘಟಕ ಅಧ್ಯಕ್ಷರಾಗಿ ನಾರಾಯಣ ಪ್ರಸಾದ್ ನೇಮಕ

Last Updated 6 ಫೆಬ್ರುವರಿ 2023, 6:53 IST
ಅಕ್ಷರ ಗಾತ್ರ

ಚಾಮರಾಜನಗರ: ದಿಢೀರ್ ಬೆಳವಣಿಗೆಯಲ್ಲಿ ಜಿಲ್ಲೆಯ ಬಿಜೆಪಿ ಘಟಕದ ಅಧ್ಯಕ್ಷರನ್ನಾಗಿ ಜಿ.ನಾರಾಯಣ ಪ್ರಸಾದ್ ಅವರನ್ನು ನೇಮಕ ಮಾಡಿ ರಾಜ್ಯ ಅಧ್ಯಕ್ಷ ‌ನಳಿನ್ ಕುಮಾರ್ ಕಟೀಲ್ ಭಾನುವಾರ ಆದೇಶ ಹೊರಡಿಸಿದ್ದಾರೆ.

ನಾರಾಯಣ ಪ್ರಸಾದ್ ಜಿಲ್ಲಾ ಘಟಕದ ಹಾಲಿ ಪ್ರಧಾನ ಕಾರ್ಯದರ್ಶಿಯಾಗಿದ್ದಾರೆ.

ವಿಧಾನಸಭಾ ಚುನಾವಣೆಗೆ ಇನ್ನು ಕೆಲವೇ ತಿಂಗಳುಗಳಿರುವಾಗ ಅಧ್ಯಕ್ಷರಾಗಿದ್ದ ಆರ್.ಸುಂದರ್ ಅವರನ್ನು ಏಕಾಏಕಿ ಬದಲಾವಣೆ ಮಾಡಲು ಏನು ಕಾರಣ ಎಂಬುದು ತಕ್ಷಣಕ್ಕೆ ಗೊತ್ತಾಗಿಲ್ಲ.

ಸ್ಥಳೀಯ ಮುಖಂಡರಿಗೂ ಈ ಬಗ್ಗೆ ಮಾಹಿತಿ ಇಲ್ಲ ಎಂದು ತಿಳಿದು ಬಂದಿದೆ. ಸುಂದರ್‌ ಅವರು 2020ರ ಜನವರಿ 28ರಂದು ಜಿಲ್ಲಾ ಘಟಕದ ಅಧ್ಯಕ್ಷರಾಗಿ ನೇಮಕಗೊಂಡಿದ್ದರು.

‘ಸುಂದರ್‌ ಅವರು ಜಿಲ್ಲಾ ಅಧ್ಯಕ್ಷರಾಗಿ ಮೂರು ವರ್ಷಗಳಾಗಿವೆ. ಇದು ಪಕ್ಷದ ನಿರ್ಧಾರ. ಪಕ್ಷ ಅವರಿಗೆ ಬೇರೆ ಜವಾಬ್ದಾರಿ ಕೊಡಬಹುದು’ ಎಂದು ಪಕ್ಷದ ಮುಖಂಡರೊಬ್ಬರು ‘ಪ್ರಜಾವಾಣಿ’ಗೆ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT