<p><strong>ಚಾಮರಾಜನಗರ</strong>: ‘ಜನಸಾಮಾನ್ಯರಲ್ಲಿ ವಿಜ್ಞಾನದ ಬಗ್ಗೆ ಅರಿವು ಮೂಡಿಸುವುದು ರಾಷ್ಟ್ರೀಯ ವಿಜ್ಞಾನ ದಿನ ಆಚರಣೆಯ ಪ್ರಮುಖ ಉದ್ದೇಶ’ ಎಂದು ನಗರದ ಯೂನಿವರ್ಸ್ ಶಾಲೆಯ ಮುಖ್ಯಶಿಕ್ಷಕಿ ಎನ್.ವಿಜಯಲಕ್ಷ್ಮಿ ಬುಧವಾರ ಹೇಳಿದರು.</p>.<p>ಸೋಮವಾರಪೇಟೆಯ ಯೂನಿವರ್ಸ್ ಶಾಲೆಯಲ್ಲಿ ಹಮ್ಮಿಕೊಳ್ಳಲಾಗಿದ್ದ ರಾಷ್ಟ್ರೀಯ ವಿಜ್ಞಾನ ದಿನ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ‘ಭೌತ ವಿಜ್ಞಾನಿ ಸಿ.ವಿ.ರಾಮನ್ ಅವರು 1928ರ ಫೆ. 28 ರಂದು ‘ರಾಮನ್ ಎಫೆಕ್ಟ್’ ಅಧ್ಯಯನದ ವಿವರಗಳನ್ನು ಜಗತ್ತಿಗೆ ತಿಳಿಸಿದರು. ಈ ಸಾಧನೆಯ ದಿನವನ್ನು ರಾಷ್ಟ್ರೀಯ ವಿಜ್ಞಾನ ದಿನ ಎಂದು ಆಚರಿಸಲಾಗುತ್ತದೆ’ ಎಂದರು.</p>.<p>‘ಯುವಜನರು ವಿಜ್ಞಾನಕ್ಕೆ ಹೆಚ್ಚು ಒತ್ತು ನೀಡಬೇಕು. ಸಾಮಾಜಿಕ ಸಮಸ್ಯೆಗಳನ್ನು ನಿವಾರಿಸುವ ನಿಟ್ಟಿನಲ್ಲಿ ವೈಜ್ಞಾನಿಕ ಸಂಶೋಧನೆ ನಡೆಯುವ ಅವಶ್ಯಕತೆ ಇದೆ’ ಎಂದು ವಿಜಯಲಕ್ಷ್ಮಿ ಪ್ರತಿಪಾದಿಸಿದರು. </p>.<p>ಶಾಲೆಯ ನೂರಕ್ಕೂ ಹೆಚ್ಚು ಮಕ್ಕಳು ತಾವು ತಯಾರಿಸಿದ ವೈವಿಧ್ಯಮಯ ವಿಜ್ಞಾನ ಮಾದರಿಗಳನ್ನು ಪ್ರದರ್ಶಿಸಿದರು. ಶಿಕ್ಷಕಿಯರಾದ ಜ್ಯೋತಿ, ರಶ್ಮಿ, ಪಲ್ಲವಿ, ಭಾವನಾ, ಲಕ್ಷ್ಮಿಶ್ರೀ, ಮಾನಸ ಭಾಗವಹಿಸಿದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಾಮರಾಜನಗರ</strong>: ‘ಜನಸಾಮಾನ್ಯರಲ್ಲಿ ವಿಜ್ಞಾನದ ಬಗ್ಗೆ ಅರಿವು ಮೂಡಿಸುವುದು ರಾಷ್ಟ್ರೀಯ ವಿಜ್ಞಾನ ದಿನ ಆಚರಣೆಯ ಪ್ರಮುಖ ಉದ್ದೇಶ’ ಎಂದು ನಗರದ ಯೂನಿವರ್ಸ್ ಶಾಲೆಯ ಮುಖ್ಯಶಿಕ್ಷಕಿ ಎನ್.ವಿಜಯಲಕ್ಷ್ಮಿ ಬುಧವಾರ ಹೇಳಿದರು.</p>.<p>ಸೋಮವಾರಪೇಟೆಯ ಯೂನಿವರ್ಸ್ ಶಾಲೆಯಲ್ಲಿ ಹಮ್ಮಿಕೊಳ್ಳಲಾಗಿದ್ದ ರಾಷ್ಟ್ರೀಯ ವಿಜ್ಞಾನ ದಿನ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ‘ಭೌತ ವಿಜ್ಞಾನಿ ಸಿ.ವಿ.ರಾಮನ್ ಅವರು 1928ರ ಫೆ. 28 ರಂದು ‘ರಾಮನ್ ಎಫೆಕ್ಟ್’ ಅಧ್ಯಯನದ ವಿವರಗಳನ್ನು ಜಗತ್ತಿಗೆ ತಿಳಿಸಿದರು. ಈ ಸಾಧನೆಯ ದಿನವನ್ನು ರಾಷ್ಟ್ರೀಯ ವಿಜ್ಞಾನ ದಿನ ಎಂದು ಆಚರಿಸಲಾಗುತ್ತದೆ’ ಎಂದರು.</p>.<p>‘ಯುವಜನರು ವಿಜ್ಞಾನಕ್ಕೆ ಹೆಚ್ಚು ಒತ್ತು ನೀಡಬೇಕು. ಸಾಮಾಜಿಕ ಸಮಸ್ಯೆಗಳನ್ನು ನಿವಾರಿಸುವ ನಿಟ್ಟಿನಲ್ಲಿ ವೈಜ್ಞಾನಿಕ ಸಂಶೋಧನೆ ನಡೆಯುವ ಅವಶ್ಯಕತೆ ಇದೆ’ ಎಂದು ವಿಜಯಲಕ್ಷ್ಮಿ ಪ್ರತಿಪಾದಿಸಿದರು. </p>.<p>ಶಾಲೆಯ ನೂರಕ್ಕೂ ಹೆಚ್ಚು ಮಕ್ಕಳು ತಾವು ತಯಾರಿಸಿದ ವೈವಿಧ್ಯಮಯ ವಿಜ್ಞಾನ ಮಾದರಿಗಳನ್ನು ಪ್ರದರ್ಶಿಸಿದರು. ಶಿಕ್ಷಕಿಯರಾದ ಜ್ಯೋತಿ, ರಶ್ಮಿ, ಪಲ್ಲವಿ, ಭಾವನಾ, ಲಕ್ಷ್ಮಿಶ್ರೀ, ಮಾನಸ ಭಾಗವಹಿಸಿದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>