<p><strong>ಚಾಮರಾಜನಗರ:</strong> ಜಿಲ್ಲಾಡಳಿತ ಭವನದ ಆವರಣದಲ್ಲಿ ಮಹರ್ಷಿ ವಾಲ್ಮೀಕಿ ಪುತ್ಥಳಿ ನಿರ್ಮಾಣಕ್ಕೆ ಶಂಕುಸ್ಥಾಪನೆ ಮಾಡಲೆತ್ನಿಸಿದ ನಾಯಕ ಸಮಾಜದ ಹಲವು ಮುಖಂಡರನ್ನು ಪೊಲೀಸರು ಗುರುವಾರ ವಶಕ್ಕೆ ಪಡೆದುಕೊಂಡರು.</p>.<p>ಜಿಲ್ಲಾಡಳಿತ ಹಮ್ಮಿಕೊಂಡಿದ್ದ ವಾಲ್ಮೀಕಿ ಜಯಂತಿಯನ್ನು ಬಹಿಷ್ಕರಿಸಿ, ಪ್ರತ್ಯೇಕವಾಗಿ ಜಯಂತಿ ಆಚರಿಸಿದ ಮುಖಂಡರು ಜಿಲ್ಲಾಡಳಿತ ಭವನದ ಆವರಣದೊಳಗೆ ನುಗ್ಗಲು ಯತ್ನಿಸಿದಾಗ ಪೊಲೀಸರು ತಡೆದು ಲಾಠಿ ಬೀಸಿ ಉದ್ರಿಕ್ತರ ಗುಂಪನ್ನು ಚದುರಿಸಿದರು.</p>.<p>ಈ ವೇಳೆ ಪೊಲೀಸರು ಹಾಗೂ ಪ್ರತಿಭಟನಕಾರರ ಮಧ್ಯೆ ತಳ್ಳಾಟ ನಡೆದು ಗೊಂದಲದ ಸನ್ನಿವೇಶ ನಿರ್ಮಾಣವಾಯಿತು. ಪ್ರತಿಭಟನಕಾರರನ್ನು ವಶಕ್ಕೆ ಪಡೆದ ಪೊಲೀಸರು ಬಸ್ ಹಾಗೂ ಡಿಎಆರ್ ವಾಹನಗಳಲ್ಲಿ ಠಾಣೆಗೆ ಕರೆದೊಯ್ದರು.</p>.<p>ಇದೇ ವೇಳೆ ಸಭೆ ನಡೆಸಿದ ಸಮಾಜದ ಮುಖಂಡರು, ಎರಡು ತಿಂಗಳೊಳಗೆ ಸರ್ಕಾರ ವಾಲ್ಮೀಕಿ ಪುತ್ಥಳಿ ನಿರ್ಮಿಸದಿದ್ದರೆ ಹೋರಾಟ ತೀವ್ರಗೊಳಿಸುವ ಒಮ್ಮತದ ನಿರ್ಣಯ ಕೈಗೊಂಡರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಾಮರಾಜನಗರ:</strong> ಜಿಲ್ಲಾಡಳಿತ ಭವನದ ಆವರಣದಲ್ಲಿ ಮಹರ್ಷಿ ವಾಲ್ಮೀಕಿ ಪುತ್ಥಳಿ ನಿರ್ಮಾಣಕ್ಕೆ ಶಂಕುಸ್ಥಾಪನೆ ಮಾಡಲೆತ್ನಿಸಿದ ನಾಯಕ ಸಮಾಜದ ಹಲವು ಮುಖಂಡರನ್ನು ಪೊಲೀಸರು ಗುರುವಾರ ವಶಕ್ಕೆ ಪಡೆದುಕೊಂಡರು.</p>.<p>ಜಿಲ್ಲಾಡಳಿತ ಹಮ್ಮಿಕೊಂಡಿದ್ದ ವಾಲ್ಮೀಕಿ ಜಯಂತಿಯನ್ನು ಬಹಿಷ್ಕರಿಸಿ, ಪ್ರತ್ಯೇಕವಾಗಿ ಜಯಂತಿ ಆಚರಿಸಿದ ಮುಖಂಡರು ಜಿಲ್ಲಾಡಳಿತ ಭವನದ ಆವರಣದೊಳಗೆ ನುಗ್ಗಲು ಯತ್ನಿಸಿದಾಗ ಪೊಲೀಸರು ತಡೆದು ಲಾಠಿ ಬೀಸಿ ಉದ್ರಿಕ್ತರ ಗುಂಪನ್ನು ಚದುರಿಸಿದರು.</p>.<p>ಈ ವೇಳೆ ಪೊಲೀಸರು ಹಾಗೂ ಪ್ರತಿಭಟನಕಾರರ ಮಧ್ಯೆ ತಳ್ಳಾಟ ನಡೆದು ಗೊಂದಲದ ಸನ್ನಿವೇಶ ನಿರ್ಮಾಣವಾಯಿತು. ಪ್ರತಿಭಟನಕಾರರನ್ನು ವಶಕ್ಕೆ ಪಡೆದ ಪೊಲೀಸರು ಬಸ್ ಹಾಗೂ ಡಿಎಆರ್ ವಾಹನಗಳಲ್ಲಿ ಠಾಣೆಗೆ ಕರೆದೊಯ್ದರು.</p>.<p>ಇದೇ ವೇಳೆ ಸಭೆ ನಡೆಸಿದ ಸಮಾಜದ ಮುಖಂಡರು, ಎರಡು ತಿಂಗಳೊಳಗೆ ಸರ್ಕಾರ ವಾಲ್ಮೀಕಿ ಪುತ್ಥಳಿ ನಿರ್ಮಿಸದಿದ್ದರೆ ಹೋರಾಟ ತೀವ್ರಗೊಳಿಸುವ ಒಮ್ಮತದ ನಿರ್ಣಯ ಕೈಗೊಂಡರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>