<p><strong>ಮಹದೇಶ್ವರ ಬೆಟ್ಟ: </strong>ಪ್ರಸಿದ್ಧ ಯಾತ್ರಾ ಸ್ಥಳ ಮಹದೇಶ್ವರ ಬೆಟ್ಟದಲ್ಲಿ ಸಾವಿರಾರು ಭಕ್ತರು ‘ಉಘೇ ಉಘೇ ಮಾದಪ್ಪ’ ಎಂಬ ಘೋಷಣೆ ಕೂಗುತ್ತಾ ಹೊಸ ವರ್ಷವನ್ನು ಸ್ವಾಗತಿಸಿದರು.</p>.<p>2020ರ ಮೊದಲ ದಿನ ಸಾವಿರಾರು ಭಕ್ತರು ಮಾದಪ್ಪನ ದರ್ಶನ ಪಡೆದು ತಮ್ಮ ಹರಕೆಗಳನ್ನು ತೀರಿಸಿದರು.ಹೊಸ ವರ್ಷದಂದು ಸ್ವಾಮಿಯ ದರ್ಶನ ಪಡೆಯುವುದಕ್ಕಾಗಿ ಭಕ್ತರು ಮಂಗಳವಾರವೇ ಬೆಟ್ಟಕ್ಕೆ ಬಂದಿದ್ದರು.</p>.<p>ಹಲವು ಭಕ್ತರು ವಾಹನಗಳಲ್ಲಿ ಬಂದಿದ್ದರೆ, ಇನ್ನೂ ಕೆಲವರು ಕಾಲ್ನಡಿಗೆಯಲ್ಲೇ ಬೆಟ್ಟವನ್ನು ತಲುಪಿದ್ದರು.ಸಹಸ್ರಾರು ಸಂಖ್ಯೆಯಲ್ಲಿ ದೇವಾಲಯಕ್ಕೆ ಬಂದಿದ್ದ ಭಕ್ತರು ರಾತ್ರಿ 12 ಗಂಟೆಯವರೆಗೂ ದೇವಾಲಯದ ಮುಂದೆ ಕುಳಿತು, ಮಹದೇಶ್ವರ ಸ್ವಾಮಿಯನ್ನು ಸ್ಮರಿಸುತ್ತಾ ಹೊಸ ವರ್ಷವನ್ನು ಸ್ವಾಗತಿಸಿದರು.</p>.<p>ಹೊಸ ವರುಷದಲ್ಲಿ ಉತ್ತಮ ಮಳೆ ಬೆಳೆ ಚೆನ್ನಾಗಿ ಆಗಿ ತಮ್ಮ ಇಷ್ಟಾರ್ಥಗಳು ನೆರವೇರಲಿ ಎಂದು ಕೆಲವು ಭಕ್ತರು ಹರಕೆಗಳನ್ನು ಕಟ್ಟಿಕೊಂಡರೆ, ಮತ್ತೆ ಕೆಲವರು ಉರುಳುಸೇವೆ ಪಂಜಿನ ಸೇವೆ, ವಾಹನ ಉತ್ಸವಗಳನ್ನು ಮಾಡುವುದರ ಮೂಲಕ ವರ್ಷದ ಕೊನೆಯ ಹರಕೆಗಳನ್ನು ನೆರವೇರಿಸಿದರು.</p>.<p class="Subhead"><strong>ವ್ಯವಸ್ಥೆ:</strong> ಭಕ್ತರ ಅನುಕೂಲಕ್ಕಾಗಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರ ಸಕಲ ವ್ಯವಸ್ಥೆ ಮಾಡಿತ್ತು. ದರ್ಶನ, ಲಾಡು ಪ್ರಸಾದ ವಿತರಣೆಗೆ ವಿಶೇಷ ಕೌಂಟರ್ಗಳನ್ನು ತೆರೆಯಲಾಗಿತ್ತು. ಭಕ್ತರು ದೇವರ ದರ್ಶನಕ್ಕಾಗಿ ಸುಡು ಬಿಸಿಲನ್ನು ಲೆಕ್ಕಿಸದೆ ಸರತಿ ಸಾಲಿನಲ್ಲಿ ನಿಂತು ದರ್ಶನ ಪಡೆದರು. ನಿರಂತರ ದಾಸೋಹ ವ್ಯವಸ್ಥೆ ಮಾಡಲಾಗಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಹದೇಶ್ವರ ಬೆಟ್ಟ: </strong>ಪ್ರಸಿದ್ಧ ಯಾತ್ರಾ ಸ್ಥಳ ಮಹದೇಶ್ವರ ಬೆಟ್ಟದಲ್ಲಿ ಸಾವಿರಾರು ಭಕ್ತರು ‘ಉಘೇ ಉಘೇ ಮಾದಪ್ಪ’ ಎಂಬ ಘೋಷಣೆ ಕೂಗುತ್ತಾ ಹೊಸ ವರ್ಷವನ್ನು ಸ್ವಾಗತಿಸಿದರು.</p>.<p>2020ರ ಮೊದಲ ದಿನ ಸಾವಿರಾರು ಭಕ್ತರು ಮಾದಪ್ಪನ ದರ್ಶನ ಪಡೆದು ತಮ್ಮ ಹರಕೆಗಳನ್ನು ತೀರಿಸಿದರು.ಹೊಸ ವರ್ಷದಂದು ಸ್ವಾಮಿಯ ದರ್ಶನ ಪಡೆಯುವುದಕ್ಕಾಗಿ ಭಕ್ತರು ಮಂಗಳವಾರವೇ ಬೆಟ್ಟಕ್ಕೆ ಬಂದಿದ್ದರು.</p>.<p>ಹಲವು ಭಕ್ತರು ವಾಹನಗಳಲ್ಲಿ ಬಂದಿದ್ದರೆ, ಇನ್ನೂ ಕೆಲವರು ಕಾಲ್ನಡಿಗೆಯಲ್ಲೇ ಬೆಟ್ಟವನ್ನು ತಲುಪಿದ್ದರು.ಸಹಸ್ರಾರು ಸಂಖ್ಯೆಯಲ್ಲಿ ದೇವಾಲಯಕ್ಕೆ ಬಂದಿದ್ದ ಭಕ್ತರು ರಾತ್ರಿ 12 ಗಂಟೆಯವರೆಗೂ ದೇವಾಲಯದ ಮುಂದೆ ಕುಳಿತು, ಮಹದೇಶ್ವರ ಸ್ವಾಮಿಯನ್ನು ಸ್ಮರಿಸುತ್ತಾ ಹೊಸ ವರ್ಷವನ್ನು ಸ್ವಾಗತಿಸಿದರು.</p>.<p>ಹೊಸ ವರುಷದಲ್ಲಿ ಉತ್ತಮ ಮಳೆ ಬೆಳೆ ಚೆನ್ನಾಗಿ ಆಗಿ ತಮ್ಮ ಇಷ್ಟಾರ್ಥಗಳು ನೆರವೇರಲಿ ಎಂದು ಕೆಲವು ಭಕ್ತರು ಹರಕೆಗಳನ್ನು ಕಟ್ಟಿಕೊಂಡರೆ, ಮತ್ತೆ ಕೆಲವರು ಉರುಳುಸೇವೆ ಪಂಜಿನ ಸೇವೆ, ವಾಹನ ಉತ್ಸವಗಳನ್ನು ಮಾಡುವುದರ ಮೂಲಕ ವರ್ಷದ ಕೊನೆಯ ಹರಕೆಗಳನ್ನು ನೆರವೇರಿಸಿದರು.</p>.<p class="Subhead"><strong>ವ್ಯವಸ್ಥೆ:</strong> ಭಕ್ತರ ಅನುಕೂಲಕ್ಕಾಗಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರ ಸಕಲ ವ್ಯವಸ್ಥೆ ಮಾಡಿತ್ತು. ದರ್ಶನ, ಲಾಡು ಪ್ರಸಾದ ವಿತರಣೆಗೆ ವಿಶೇಷ ಕೌಂಟರ್ಗಳನ್ನು ತೆರೆಯಲಾಗಿತ್ತು. ಭಕ್ತರು ದೇವರ ದರ್ಶನಕ್ಕಾಗಿ ಸುಡು ಬಿಸಿಲನ್ನು ಲೆಕ್ಕಿಸದೆ ಸರತಿ ಸಾಲಿನಲ್ಲಿ ನಿಂತು ದರ್ಶನ ಪಡೆದರು. ನಿರಂತರ ದಾಸೋಹ ವ್ಯವಸ್ಥೆ ಮಾಡಲಾಗಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>