<p><strong>ಚಾಮರಾಜನಗರ: </strong>ಜಿಲ್ಲೆಯಲ್ಲಿ ಬುಧವಾರ ಒಂಬತ್ತು ಜನರಿಗೆ ಕೋವಿಡ್ ಇರುವುದು ಖಚಿತವಾಗಿದೆ. ಒಬ್ಬರು ಮಾತ್ರ ಗುಣಮುಖರಾಗಿದ್ದಾರೆ. 85 ವರ್ಷದ ವೃದ್ಧರೊಬ್ಬರು ಮೃತಪಟ್ಟಿದ್ದಾರೆ.</p>.<p class="bodytext">ಗುಣಮುಖರಾದವರ ಸಂಖ್ಯೆ ಕಡಿಮೆ ಇರುವುದರಿಂದ ಸಕ್ರಿಯ ಪ್ರಕರಣಗಳ ಸಂಖ್ಯೆ 75ಕ್ಕೆ ಏರಿದೆ. ಸೋಂಕಿತರ ಪೈಕಿ ನಾಲ್ವರು ಐಸಿಯುನಲ್ಲಿ ಹಾಗೂ 18 ಮಂದಿ ಹೋಂ ಐಸೊಲೇಷನ್ನಲ್ಲಿದ್ದಾರೆ.</p>.<p class="bodytext">ಜಿಲ್ಲೆಯಲ್ಲಿ ಇದುವರೆಗೆ 32,331 ಕೋವಿಡ್ ಪ್ರಕರಣ ದೃಢಪಟ್ಟಿವೆ. 31,720 ಮಂದಿ ಸೋಂಕು ಮುಕ್ತರಾಗಿದ್ದಾರೆ. ಕೋವಿಡ್ ಹಾಗೂ ಕೋವಿಡ್ಯೇತರ ಕಾರಣಗಳಿಂದ ಈವರೆಗೆ 577 ಮಂದಿ ಮೃತಪಟ್ಟಿದ್ದಾರೆ. </p>.<p class="bodytext">ಬುಧವಾರ ದಾಖಲೆಯ 2,838 ಮಂದಿಯ ಕೋವಿಡ್ ಪರೀಕ್ಷಾ ವರದಿ ಬಂದಿದ್ದು, 2,824 ವರದಿಗಳು ನೆಗೆಟಿವ್ ಬಂದಿವೆ. 14 ಮಂದಿಗೆ ಸೋಂಕು ಇರುವುದು ಖಚಿತವಾಗಿದೆ. ಈ ಪೈಕಿ ಒಂದು ಪ್ರಕರಣ ಹೊರ ಜಿಲ್ಲೆಗೆ ಸೇರಿದೆ. ನಾಲ್ಕು ಪ್ರಕರಣಗಳು ಪರಿಹಾರ ಪೋರ್ಟಲ್ನಲ್ಲಿ ಅಪ್ಲೋಡ್ ಆಗಿಲ್ಲ. ಹಾಗಾಗಿ, ಒಂಬತ್ತು ಪ್ರಕರಣಗಳನ್ನು ಮಾತ್ರ ಜಿಲ್ಲಾಡಳಿತ ತನ್ನ ವರದಿಯಲ್ಲಿ ಉಲ್ಲೇಖಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಾಮರಾಜನಗರ: </strong>ಜಿಲ್ಲೆಯಲ್ಲಿ ಬುಧವಾರ ಒಂಬತ್ತು ಜನರಿಗೆ ಕೋವಿಡ್ ಇರುವುದು ಖಚಿತವಾಗಿದೆ. ಒಬ್ಬರು ಮಾತ್ರ ಗುಣಮುಖರಾಗಿದ್ದಾರೆ. 85 ವರ್ಷದ ವೃದ್ಧರೊಬ್ಬರು ಮೃತಪಟ್ಟಿದ್ದಾರೆ.</p>.<p class="bodytext">ಗುಣಮುಖರಾದವರ ಸಂಖ್ಯೆ ಕಡಿಮೆ ಇರುವುದರಿಂದ ಸಕ್ರಿಯ ಪ್ರಕರಣಗಳ ಸಂಖ್ಯೆ 75ಕ್ಕೆ ಏರಿದೆ. ಸೋಂಕಿತರ ಪೈಕಿ ನಾಲ್ವರು ಐಸಿಯುನಲ್ಲಿ ಹಾಗೂ 18 ಮಂದಿ ಹೋಂ ಐಸೊಲೇಷನ್ನಲ್ಲಿದ್ದಾರೆ.</p>.<p class="bodytext">ಜಿಲ್ಲೆಯಲ್ಲಿ ಇದುವರೆಗೆ 32,331 ಕೋವಿಡ್ ಪ್ರಕರಣ ದೃಢಪಟ್ಟಿವೆ. 31,720 ಮಂದಿ ಸೋಂಕು ಮುಕ್ತರಾಗಿದ್ದಾರೆ. ಕೋವಿಡ್ ಹಾಗೂ ಕೋವಿಡ್ಯೇತರ ಕಾರಣಗಳಿಂದ ಈವರೆಗೆ 577 ಮಂದಿ ಮೃತಪಟ್ಟಿದ್ದಾರೆ. </p>.<p class="bodytext">ಬುಧವಾರ ದಾಖಲೆಯ 2,838 ಮಂದಿಯ ಕೋವಿಡ್ ಪರೀಕ್ಷಾ ವರದಿ ಬಂದಿದ್ದು, 2,824 ವರದಿಗಳು ನೆಗೆಟಿವ್ ಬಂದಿವೆ. 14 ಮಂದಿಗೆ ಸೋಂಕು ಇರುವುದು ಖಚಿತವಾಗಿದೆ. ಈ ಪೈಕಿ ಒಂದು ಪ್ರಕರಣ ಹೊರ ಜಿಲ್ಲೆಗೆ ಸೇರಿದೆ. ನಾಲ್ಕು ಪ್ರಕರಣಗಳು ಪರಿಹಾರ ಪೋರ್ಟಲ್ನಲ್ಲಿ ಅಪ್ಲೋಡ್ ಆಗಿಲ್ಲ. ಹಾಗಾಗಿ, ಒಂಬತ್ತು ಪ್ರಕರಣಗಳನ್ನು ಮಾತ್ರ ಜಿಲ್ಲಾಡಳಿತ ತನ್ನ ವರದಿಯಲ್ಲಿ ಉಲ್ಲೇಖಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>