<p><strong>ಚಾಮರಾಜನಗರ:</strong> ಜಿಲ್ಲೆಯಲ್ಲಿರುವ ಸಕ್ರಿಯ ಕೋವಿಡ್ ಪ್ರಕರಣಗಳ ಸಂಖ್ಯೆ 91ಕ್ಕೆ ಇಳಿದಿದೆ. ಬುಧವಾರ 10 ಹೊಸ ಪ್ರಕರಣಗಳು ದೃಢಪಟ್ಟಿದ್ದು, 20 ಮಂದಿ ಗುಣಮುಖರಾಗಿದ್ದಾರೆ. ಸಾವಿನ ಪ್ರಕರಣ ವರದಿಯಾಗಿಲ್ಲ.</p>.<p>ಚಿಕಿತ್ಸೆ ಪಡೆಯುತ್ತಿರುವ 91 ಮಂದಿ ಸೋಂಕಿತರ ಪೈಕಿ 53 ಮಂದಿ ಮನೆಗಳಲ್ಲೇ ಇದ್ದಾರೆ. 11 ಮಂದಿ ಐಸಿಯುನಲ್ಲಿದ್ದಾರೆ. ಉಳಿದ 27 ಮಂದಿ ಕೋವಿಡ್ ಕೇರ್ ಆಸ್ಪತ್ರೆಗಳಲ್ಲಿದ್ದಾರೆ.</p>.<p>ಬುಧವಾರ ಅಂಕಿ ಅಂಶಗಳೊಂದಿಗೆ ಜಿಲ್ಲೆಯಲ್ಲಿ ಇದುವರೆಗೆ ದೃಢಪಟ್ಟ ಪ್ರಕರಣಗಳ ಸಂಖ್ಯೆ 6,204ಕ್ಕೆ ಏರಿದೆ. ಗುಣಮುಖರಾದವರ ಸಂಖ್ಯೆ 5,986ಕ್ಕೆ ತಲುಪಿದೆ. ಈವರೆಗೆ 108 ಮಂದಿ ಕೋವಿಡ್ನಿಂದ ಹಾಗೂ ಬೇರೆ ಅನಾರೋಗ್ಯಗಳಿಂದಾಗಿ 19 ಮಂದಿ ಮೃತಪಟ್ಟಿದ್ದಾರೆ.</p>.<p><strong>ದಾಖಲೆಯ ಪರೀಕ್ಷೆ:</strong> ಬುಧವಾರ ದಾಖಲೆಯ 1,659 ಮಂದಿಯ ಗಂಟಲು ದ್ರವ ಮಾದರಿಗಳ ಪರೀಕ್ಷಾ ವರದಿ ಬಂದಿದ್ದು, 1,649 ಮಂದಿಯ ವರದಿಗಳು ನೆಗೆಟಿವ್ ಬಂದಿವೆ.</p>.<p>ದೃಢಪಟ್ಟ 10 ಪ್ರಕರಣಗಳಲ್ಲಿ ಚಾಮರಾಜನಗರ ಹಾಗೂ ಗುಂಡ್ಲುಪೇಟೆ ತಾಲ್ಲೂಕುಗಳ ತಲಾ ಮೂರು, ಕೊಳ್ಳೇಗಾಲ ಹಾಗೂ ಹನೂರು ತಾಲ್ಲೂಕುಗಳ ತಲಾ ಎರಡು ಪ್ರಕರಣಗಳು ಸೇರಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಾಮರಾಜನಗರ:</strong> ಜಿಲ್ಲೆಯಲ್ಲಿರುವ ಸಕ್ರಿಯ ಕೋವಿಡ್ ಪ್ರಕರಣಗಳ ಸಂಖ್ಯೆ 91ಕ್ಕೆ ಇಳಿದಿದೆ. ಬುಧವಾರ 10 ಹೊಸ ಪ್ರಕರಣಗಳು ದೃಢಪಟ್ಟಿದ್ದು, 20 ಮಂದಿ ಗುಣಮುಖರಾಗಿದ್ದಾರೆ. ಸಾವಿನ ಪ್ರಕರಣ ವರದಿಯಾಗಿಲ್ಲ.</p>.<p>ಚಿಕಿತ್ಸೆ ಪಡೆಯುತ್ತಿರುವ 91 ಮಂದಿ ಸೋಂಕಿತರ ಪೈಕಿ 53 ಮಂದಿ ಮನೆಗಳಲ್ಲೇ ಇದ್ದಾರೆ. 11 ಮಂದಿ ಐಸಿಯುನಲ್ಲಿದ್ದಾರೆ. ಉಳಿದ 27 ಮಂದಿ ಕೋವಿಡ್ ಕೇರ್ ಆಸ್ಪತ್ರೆಗಳಲ್ಲಿದ್ದಾರೆ.</p>.<p>ಬುಧವಾರ ಅಂಕಿ ಅಂಶಗಳೊಂದಿಗೆ ಜಿಲ್ಲೆಯಲ್ಲಿ ಇದುವರೆಗೆ ದೃಢಪಟ್ಟ ಪ್ರಕರಣಗಳ ಸಂಖ್ಯೆ 6,204ಕ್ಕೆ ಏರಿದೆ. ಗುಣಮುಖರಾದವರ ಸಂಖ್ಯೆ 5,986ಕ್ಕೆ ತಲುಪಿದೆ. ಈವರೆಗೆ 108 ಮಂದಿ ಕೋವಿಡ್ನಿಂದ ಹಾಗೂ ಬೇರೆ ಅನಾರೋಗ್ಯಗಳಿಂದಾಗಿ 19 ಮಂದಿ ಮೃತಪಟ್ಟಿದ್ದಾರೆ.</p>.<p><strong>ದಾಖಲೆಯ ಪರೀಕ್ಷೆ:</strong> ಬುಧವಾರ ದಾಖಲೆಯ 1,659 ಮಂದಿಯ ಗಂಟಲು ದ್ರವ ಮಾದರಿಗಳ ಪರೀಕ್ಷಾ ವರದಿ ಬಂದಿದ್ದು, 1,649 ಮಂದಿಯ ವರದಿಗಳು ನೆಗೆಟಿವ್ ಬಂದಿವೆ.</p>.<p>ದೃಢಪಟ್ಟ 10 ಪ್ರಕರಣಗಳಲ್ಲಿ ಚಾಮರಾಜನಗರ ಹಾಗೂ ಗುಂಡ್ಲುಪೇಟೆ ತಾಲ್ಲೂಕುಗಳ ತಲಾ ಮೂರು, ಕೊಳ್ಳೇಗಾಲ ಹಾಗೂ ಹನೂರು ತಾಲ್ಲೂಕುಗಳ ತಲಾ ಎರಡು ಪ್ರಕರಣಗಳು ಸೇರಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>