<p><strong>ಚಾಮರಾಜನಗರ: </strong>ತಮ್ಮನ್ನು ಸರ್ಕಾರಿ ನೌಕರರೆಂದು ಪರಿಗಣಿಸುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಕೆಎಸ್ಆರ್ಟಿಸಿ ನೌಕರರು ಆರಂಭಿಸಿರುವ ದಿಢೀರ್ ಮುಷ್ಕರ ಜಿಲ್ಲೆಯಲ್ಲಿ ಶನಿವಾರವೂ ಮುಂದುವರಿಯಿತು.</p>.<p>ಚಾಲಕರು, ನಿರ್ವಾಹಕರು ಹಾಗೂ ಇತರ ಸಿಬ್ಬಂದಿ ಕರ್ತವ್ಯಕ್ಕೆ ಹಾಜರಾಗಲಿಲ್ಲ. ಇದರಿಂದ ಜಿಲ್ಲೆಯಾದ್ಯಂತ ಒಂದೇ ಒಂದು ಕೆಎಸ್ಆರ್ಟಿಸಿ ಬಸ್ಗಳು ಸಂಚರಿಸಲಿಲ್ಲ. ಎಲ್ಲ ಬಸ್ಗಳೂ ಡಿಪೋದಲ್ಲೇ ಇದ್ದವು.</p>.<p>ಎರಡನೇ ಶನಿವಾರದ ಕಾರಣಕ್ಕೆ ಸರ್ಕಾರಿ ರಜಾ ದಿನವಾಗಿದ್ದರಿಂದ ಪ್ರಯಾಣಿಕರ ಸಂಖ್ಯೆ ಕಡಿಮೆ ಇತ್ತು. ಆದರೂ ಅಗತ್ಯ ಕೆಲಸಗಳಿಗಾಗಿ ಬೇರೆ ಊರುಗಳಿಗೆ ಹೋಗಬೇಕಾದವರಿಗೆ ತೀವ್ರ ತೊಂದರೆಯಾಯಿತು.ಬಸ್ ಇರಬಹುದು ಎಂಬ ಲೆಕ್ಕಾಚಾರದಲ್ಲಿ ನಿಲ್ದಾಣಗಳಿಗೆ ಬಂದಿದ್ದ ಅವರು ನಿರಾಸೆ ಅನುಭವಿಸಿದರು. </p>.<p>ಪಟ್ಟಣ ಪ್ರದೇಶಗಳಿಗೆ ಕೂಲಿಗಾಗಿ ತೆರಳುವ ಕಾರ್ಮಿಕರು, ತರಬೇತಿ ಶಾಲೆಗಳಿಗೆ ಹಾಗೂ ಗಾರ್ಮೆಂಟ್ಸ್ ಗಳಿಗೆ ತೆರಳುವ ಪ್ರಯಾಣಿಕರು ಕೆಎಸ್ಆರ್ಟಿಸಿ ಬಸ್ ಬಾರದ ಕಾರಣ ಗೊದಲಕ್ಕೀಡಾದರು. ಅನಿವಾರ್ಯವಾಗಿ ಖಾಸಗಿ ಬಸ್ಗಳು, ಆಟೊ ಹಾಗೂ ಇತರ ವಾಹನಗಳನ್ನು ಅವಲಂಬಿಸಬೇಕಾಯಿತು.</p>.<p>ಸಾರಿಗೆ ಬಸ್ ಇಲ್ಲದಿದ್ದುದರಿಂದ ಖಾಸಗಿ ಬಸ್ಗಳಿಗೆ ಹೆಚ್ಚು ಬೇಡಿಕೆ ಇತ್ತು. ಖಾಸಗಿ ಬಸ್ ನಿಲ್ದಾಣದಲ್ಲಿ ಜನರ ಓಡಾಟ ಹೆಚ್ಚಿತ್ತು. ಜಿಲ್ಲಾ ಕೇಂದ್ರದಲ್ಲಿ ಬಹುತೇಕ ಖಾಸಗಿ ಬಸ್ಗಳು ಕೆಎಸ್ಆರ್ಟಿಸಿ ಬಸ್ ನಿಲ್ದಾಣದ ಬಳಿಗೆ ಬಂದು ಪ್ರಯಾಣಿಕರನ್ನು ಹತ್ತಿಸುತ್ತಿದ್ದವು.</p>.<p>ಕೊಳ್ಳೇಗಾಲ, ಗುಂಡ್ಲುಪೇಟೆ, ಹನೂರು ಹಾಗೂ ಯಳಂದೂರುಗಳಲ್ಲೂ ಇದೇ ಸ್ಥಿತಿ ಇತ್ತು.</p>.<p class="Subhead"><strong>ಪ್ರತಿಭಟನೆಗೆ ಇಳಿಯದ ನೌಕರರು</strong></p>.<p class="Subhead">ಮುಷ್ಕರದ ಮೊದಲ ದಿನವಾದ ಶುಕ್ರವಾರ ಜಿಲ್ಲೆಯಲ್ಲಿ ಚಾಮರಾಜನಗರ ಮತ್ತು ಗುಂಡ್ಲುಪೇಟೆಯಲ್ಲಿ ನೌಕರರು ಪ್ರತಿಭಟನೆ ನಡೆಸಿದ್ದರು. ಆದರೆ, ಶನಿವಾರ ಎಲ್ಲೂ ಪ್ರತಿಭಟನೆ ನಡೆಸಲಿಲ್ಲ. ಅಹಿತಕರ ಘಟನೆಗಳೂ ವರದಿಯಾಗಿಲ್ಲ. ಮುನ್ನೆಚ್ಚರಿಕೆ ಕ್ರಮವಾಗಿ ನಿಲ್ದಾಣಗಳಲ್ಲಿ ಪೊಲೀಸ್ ಸಿಬ್ಬಂದಿ ನಿಯೋಜಿಸಲಾಗಿತ್ತು.</p>.<p>‘ಶನಿವಾರ ಜಿಲ್ಲೆಯಾದ್ಯಂತ ಚಾಲಕರು, ನಿರ್ವಾಹಕರು ಹಾಗೂ ಇತರ ಸಿಬ್ಬಂದಿ ಕರ್ತವ್ಯಕ್ಕೆ ಹಾಜರಾಗಿಲ್ಲ. ಹೀಗಾಗಿ ನಮ್ಮ ವಿಭಾಗದಲ್ಲಿ ಒಂದೂ ಬಸ್ ಸಂಚರಿಸಿಲ್ಲ’ ಎಂದು ಕೆಎಸ್ಆರ್ಟಿಸಿ ಚಾಮರಾಜನಗರ ವಿಭಾಗೀಯ ನಿಯಂತ್ರಣಾಧಿಕಾರಿ ಶ್ರೀನಿವಾಸ್ ಬಿ. ಅವರು ‘ಪ್ರಜಾವಾಣಿ’ಗೆ ತಿಳಿಸಿದರು.</p>.<p class="Briefhead">ಮೈಸೂರು, ಬೆಂಗಳೂರು ಪ್ರಯಾಣಿಕರಿಗೆ ತೊಂದರೆ</p>.<p>ದೂರದ ಮೈಸೂರು, ಬೆಂಗಳೂರಿನ ಕಡೆಗೆ ತೆರಳಬೇಕಿದ್ದ ಪ್ರಯಾಣಿಕರು ಬಸ್ ಸಂಚಾರ ಸ್ಥಗಿತದಿಂದಾಗಿ ತೊಂದರೆ ಅನುಭವಿಸಿದರು.</p>.<p>ಬೆಳಿಗ್ಗೆ ಬೇಗ ಹೋಗುವ ಯೋಜನೆ ಹಾಕಿಕೊಂಡು ಬಂದಿದ್ದ ಪ್ರಯಾಣಿಕರು, ಕೆಎಸ್ಆರ್ಟಿಸಿ ಬಸ್ಗಳು ಇಲ್ಲದೇ ಇದ್ದುದರಿಂದ ಕಾದು ಕುಳಿತುರು. ಕೊನೆಗೆ ಕೆಲವರು ವಾಪಸ್ ಮನೆಗೆ ತೆರಳಿದರೆ, ಇನ್ನೂ ಕೆಲವರು ಸಿಕ್ಕಿದ ವಾಹನಗಳನ್ನು ಹತ್ತಿಕೊಂಡು ಹೋದರು.</p>.<p class="Subhead">ಖಾಸಗಿ ವಾಹನಗಳ ಹಾವಳಿ: ‘ಸಾರಿಗೆ ನೌಕರರ ಮುಷ್ಕರವನ್ನೇ ಬಂಡವಾಳ ಮಾಡಿಕೊಂಡ ಖಾಸಗಿ ಬಸ್ ಸಿಬ್ಬಂದಿ ಮತ್ತು ಕಾರು ಚಾಲಕರು ಪ್ರಯಾಣಿಕರಿಂದ ದುಪ್ಪಟ್ಟು ಹಣ ತೆಗೆದುಕೊಳ್ಳುತ್ತಿದ್ದರು. ಈ ಬಗ್ಗೆ ಪ್ರಯಾಣಿಕರು ಪ್ರಶ್ನೆ ಮಾಡಿದರೆ, ಮಾಮೂಲಿಯಂತೆ ಹಣ ಸ್ವೀಕರಿಸುತ್ತಿದ್ದರು’ ಎಂದು ಗುಂಡ್ಲುಪೇಟೆಯ ಪ್ರಯಾಣಿಕ ಜಿ.ಆರ್.ರವಿ ಅವರು ದೂರಿದರು.</p>.<p>ಬೇಡಿಕೆಗಳ ಈಡೇರಿಕೆಗೆ ಪಟ್ಟು ಹಿಡಿದಿರುವ ನೌಕರರು ಭಾನುವಾರ ಕರ್ತವ್ಯಕ್ಕೆ ಹಾಜರಾಗುತ್ತಾರೆಯೇ ಎಂಬುದು ಇನ್ನೂ ಸ್ಪಷ್ಟಗೊಂಡಿಲ್ಲ. ಹಾಗಾಗಿ, ಭಾನುವಾರ ಬಸ್ ಸಂಚಾರ ಆರಂಭವಾಗುವ ಬಗ್ಗೆ ಅನುಮಾನ ಇದೆ. ಅಧಿಕಾರಿಗಳಿಗೂ ಈ ಬಗ್ಗೆ ಮಾಹಿತಿ ಇಲ್ಲ. ಮಾತುಕತೆ ಫಲಕೊಟ್ಟರೆ ಭಾನುವಾರ ಮಧ್ಯಾಹ್ನದ ನಂತರ ಬಸ್ಗಳು ಸಂಚರಿಸುವ ಸಾಧ್ಯತೆ ಇದೆ ಎಂದು ಅವರು ಹೇಳುತ್ತಾರೆ.</p>.<p>‘ರಾಜ್ಯ ಮಟ್ಟದಲ್ಲಿ ನಡೆಯುತ್ತಿರುವ ಮಾತುಕತೆ ಇನ್ನೂ ಫಲಪ್ರದವಾಗದೇ ಇರುವುದರಿಂದ ಭಾನುವಾರ ಬಸ್ ಸಂಚಾರ ಆರಂಭವಾಗಲಿದೆಯೇ ಎಂಬುದನ್ನು ಈಗಲೇ ಹೇಳಲು ಸಾಧ್ಯವಿಲ್ಲ’ ಎಂದು ಶ್ರೀನಿವಾಸ್ ಅವರು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಾಮರಾಜನಗರ: </strong>ತಮ್ಮನ್ನು ಸರ್ಕಾರಿ ನೌಕರರೆಂದು ಪರಿಗಣಿಸುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಕೆಎಸ್ಆರ್ಟಿಸಿ ನೌಕರರು ಆರಂಭಿಸಿರುವ ದಿಢೀರ್ ಮುಷ್ಕರ ಜಿಲ್ಲೆಯಲ್ಲಿ ಶನಿವಾರವೂ ಮುಂದುವರಿಯಿತು.</p>.<p>ಚಾಲಕರು, ನಿರ್ವಾಹಕರು ಹಾಗೂ ಇತರ ಸಿಬ್ಬಂದಿ ಕರ್ತವ್ಯಕ್ಕೆ ಹಾಜರಾಗಲಿಲ್ಲ. ಇದರಿಂದ ಜಿಲ್ಲೆಯಾದ್ಯಂತ ಒಂದೇ ಒಂದು ಕೆಎಸ್ಆರ್ಟಿಸಿ ಬಸ್ಗಳು ಸಂಚರಿಸಲಿಲ್ಲ. ಎಲ್ಲ ಬಸ್ಗಳೂ ಡಿಪೋದಲ್ಲೇ ಇದ್ದವು.</p>.<p>ಎರಡನೇ ಶನಿವಾರದ ಕಾರಣಕ್ಕೆ ಸರ್ಕಾರಿ ರಜಾ ದಿನವಾಗಿದ್ದರಿಂದ ಪ್ರಯಾಣಿಕರ ಸಂಖ್ಯೆ ಕಡಿಮೆ ಇತ್ತು. ಆದರೂ ಅಗತ್ಯ ಕೆಲಸಗಳಿಗಾಗಿ ಬೇರೆ ಊರುಗಳಿಗೆ ಹೋಗಬೇಕಾದವರಿಗೆ ತೀವ್ರ ತೊಂದರೆಯಾಯಿತು.ಬಸ್ ಇರಬಹುದು ಎಂಬ ಲೆಕ್ಕಾಚಾರದಲ್ಲಿ ನಿಲ್ದಾಣಗಳಿಗೆ ಬಂದಿದ್ದ ಅವರು ನಿರಾಸೆ ಅನುಭವಿಸಿದರು. </p>.<p>ಪಟ್ಟಣ ಪ್ರದೇಶಗಳಿಗೆ ಕೂಲಿಗಾಗಿ ತೆರಳುವ ಕಾರ್ಮಿಕರು, ತರಬೇತಿ ಶಾಲೆಗಳಿಗೆ ಹಾಗೂ ಗಾರ್ಮೆಂಟ್ಸ್ ಗಳಿಗೆ ತೆರಳುವ ಪ್ರಯಾಣಿಕರು ಕೆಎಸ್ಆರ್ಟಿಸಿ ಬಸ್ ಬಾರದ ಕಾರಣ ಗೊದಲಕ್ಕೀಡಾದರು. ಅನಿವಾರ್ಯವಾಗಿ ಖಾಸಗಿ ಬಸ್ಗಳು, ಆಟೊ ಹಾಗೂ ಇತರ ವಾಹನಗಳನ್ನು ಅವಲಂಬಿಸಬೇಕಾಯಿತು.</p>.<p>ಸಾರಿಗೆ ಬಸ್ ಇಲ್ಲದಿದ್ದುದರಿಂದ ಖಾಸಗಿ ಬಸ್ಗಳಿಗೆ ಹೆಚ್ಚು ಬೇಡಿಕೆ ಇತ್ತು. ಖಾಸಗಿ ಬಸ್ ನಿಲ್ದಾಣದಲ್ಲಿ ಜನರ ಓಡಾಟ ಹೆಚ್ಚಿತ್ತು. ಜಿಲ್ಲಾ ಕೇಂದ್ರದಲ್ಲಿ ಬಹುತೇಕ ಖಾಸಗಿ ಬಸ್ಗಳು ಕೆಎಸ್ಆರ್ಟಿಸಿ ಬಸ್ ನಿಲ್ದಾಣದ ಬಳಿಗೆ ಬಂದು ಪ್ರಯಾಣಿಕರನ್ನು ಹತ್ತಿಸುತ್ತಿದ್ದವು.</p>.<p>ಕೊಳ್ಳೇಗಾಲ, ಗುಂಡ್ಲುಪೇಟೆ, ಹನೂರು ಹಾಗೂ ಯಳಂದೂರುಗಳಲ್ಲೂ ಇದೇ ಸ್ಥಿತಿ ಇತ್ತು.</p>.<p class="Subhead"><strong>ಪ್ರತಿಭಟನೆಗೆ ಇಳಿಯದ ನೌಕರರು</strong></p>.<p class="Subhead">ಮುಷ್ಕರದ ಮೊದಲ ದಿನವಾದ ಶುಕ್ರವಾರ ಜಿಲ್ಲೆಯಲ್ಲಿ ಚಾಮರಾಜನಗರ ಮತ್ತು ಗುಂಡ್ಲುಪೇಟೆಯಲ್ಲಿ ನೌಕರರು ಪ್ರತಿಭಟನೆ ನಡೆಸಿದ್ದರು. ಆದರೆ, ಶನಿವಾರ ಎಲ್ಲೂ ಪ್ರತಿಭಟನೆ ನಡೆಸಲಿಲ್ಲ. ಅಹಿತಕರ ಘಟನೆಗಳೂ ವರದಿಯಾಗಿಲ್ಲ. ಮುನ್ನೆಚ್ಚರಿಕೆ ಕ್ರಮವಾಗಿ ನಿಲ್ದಾಣಗಳಲ್ಲಿ ಪೊಲೀಸ್ ಸಿಬ್ಬಂದಿ ನಿಯೋಜಿಸಲಾಗಿತ್ತು.</p>.<p>‘ಶನಿವಾರ ಜಿಲ್ಲೆಯಾದ್ಯಂತ ಚಾಲಕರು, ನಿರ್ವಾಹಕರು ಹಾಗೂ ಇತರ ಸಿಬ್ಬಂದಿ ಕರ್ತವ್ಯಕ್ಕೆ ಹಾಜರಾಗಿಲ್ಲ. ಹೀಗಾಗಿ ನಮ್ಮ ವಿಭಾಗದಲ್ಲಿ ಒಂದೂ ಬಸ್ ಸಂಚರಿಸಿಲ್ಲ’ ಎಂದು ಕೆಎಸ್ಆರ್ಟಿಸಿ ಚಾಮರಾಜನಗರ ವಿಭಾಗೀಯ ನಿಯಂತ್ರಣಾಧಿಕಾರಿ ಶ್ರೀನಿವಾಸ್ ಬಿ. ಅವರು ‘ಪ್ರಜಾವಾಣಿ’ಗೆ ತಿಳಿಸಿದರು.</p>.<p class="Briefhead">ಮೈಸೂರು, ಬೆಂಗಳೂರು ಪ್ರಯಾಣಿಕರಿಗೆ ತೊಂದರೆ</p>.<p>ದೂರದ ಮೈಸೂರು, ಬೆಂಗಳೂರಿನ ಕಡೆಗೆ ತೆರಳಬೇಕಿದ್ದ ಪ್ರಯಾಣಿಕರು ಬಸ್ ಸಂಚಾರ ಸ್ಥಗಿತದಿಂದಾಗಿ ತೊಂದರೆ ಅನುಭವಿಸಿದರು.</p>.<p>ಬೆಳಿಗ್ಗೆ ಬೇಗ ಹೋಗುವ ಯೋಜನೆ ಹಾಕಿಕೊಂಡು ಬಂದಿದ್ದ ಪ್ರಯಾಣಿಕರು, ಕೆಎಸ್ಆರ್ಟಿಸಿ ಬಸ್ಗಳು ಇಲ್ಲದೇ ಇದ್ದುದರಿಂದ ಕಾದು ಕುಳಿತುರು. ಕೊನೆಗೆ ಕೆಲವರು ವಾಪಸ್ ಮನೆಗೆ ತೆರಳಿದರೆ, ಇನ್ನೂ ಕೆಲವರು ಸಿಕ್ಕಿದ ವಾಹನಗಳನ್ನು ಹತ್ತಿಕೊಂಡು ಹೋದರು.</p>.<p class="Subhead">ಖಾಸಗಿ ವಾಹನಗಳ ಹಾವಳಿ: ‘ಸಾರಿಗೆ ನೌಕರರ ಮುಷ್ಕರವನ್ನೇ ಬಂಡವಾಳ ಮಾಡಿಕೊಂಡ ಖಾಸಗಿ ಬಸ್ ಸಿಬ್ಬಂದಿ ಮತ್ತು ಕಾರು ಚಾಲಕರು ಪ್ರಯಾಣಿಕರಿಂದ ದುಪ್ಪಟ್ಟು ಹಣ ತೆಗೆದುಕೊಳ್ಳುತ್ತಿದ್ದರು. ಈ ಬಗ್ಗೆ ಪ್ರಯಾಣಿಕರು ಪ್ರಶ್ನೆ ಮಾಡಿದರೆ, ಮಾಮೂಲಿಯಂತೆ ಹಣ ಸ್ವೀಕರಿಸುತ್ತಿದ್ದರು’ ಎಂದು ಗುಂಡ್ಲುಪೇಟೆಯ ಪ್ರಯಾಣಿಕ ಜಿ.ಆರ್.ರವಿ ಅವರು ದೂರಿದರು.</p>.<p>ಬೇಡಿಕೆಗಳ ಈಡೇರಿಕೆಗೆ ಪಟ್ಟು ಹಿಡಿದಿರುವ ನೌಕರರು ಭಾನುವಾರ ಕರ್ತವ್ಯಕ್ಕೆ ಹಾಜರಾಗುತ್ತಾರೆಯೇ ಎಂಬುದು ಇನ್ನೂ ಸ್ಪಷ್ಟಗೊಂಡಿಲ್ಲ. ಹಾಗಾಗಿ, ಭಾನುವಾರ ಬಸ್ ಸಂಚಾರ ಆರಂಭವಾಗುವ ಬಗ್ಗೆ ಅನುಮಾನ ಇದೆ. ಅಧಿಕಾರಿಗಳಿಗೂ ಈ ಬಗ್ಗೆ ಮಾಹಿತಿ ಇಲ್ಲ. ಮಾತುಕತೆ ಫಲಕೊಟ್ಟರೆ ಭಾನುವಾರ ಮಧ್ಯಾಹ್ನದ ನಂತರ ಬಸ್ಗಳು ಸಂಚರಿಸುವ ಸಾಧ್ಯತೆ ಇದೆ ಎಂದು ಅವರು ಹೇಳುತ್ತಾರೆ.</p>.<p>‘ರಾಜ್ಯ ಮಟ್ಟದಲ್ಲಿ ನಡೆಯುತ್ತಿರುವ ಮಾತುಕತೆ ಇನ್ನೂ ಫಲಪ್ರದವಾಗದೇ ಇರುವುದರಿಂದ ಭಾನುವಾರ ಬಸ್ ಸಂಚಾರ ಆರಂಭವಾಗಲಿದೆಯೇ ಎಂಬುದನ್ನು ಈಗಲೇ ಹೇಳಲು ಸಾಧ್ಯವಿಲ್ಲ’ ಎಂದು ಶ್ರೀನಿವಾಸ್ ಅವರು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>