‘ಕೆ.ಆರ್.ಪೇಟೆ ಉಪ ಚುನಾವಣೆ ಸಂದರ್ಭದಲ್ಲಿ ನಟಿ ರಾಗಿಣಿ ಅವರನ್ನು ಪ್ರಚಾರಕ್ಕೆ ನಾನು ಕರೆಯಿಸಿರಲಿಲ್ಲ. ಹಿತೈಷಿಗಳು ಕರೆಸಿದ್ದರು. ರಾಗಿಣಿ ಈ ರೀತಿ ಎಂದು ಗೊತ್ತಿರಲಿಲ್ಲ. ಪ್ರಚಾರ ಮಾಡಲು ಬಂದಾಗ, ನಾವು ಬೇಡ ಎಂದು ಹೇಳುವುದಕ್ಕೆ ಆಗುತ್ತದೆಯೇ?’ ಎಂದು ಕೇಳಿದ ಅವರು, ತಮ್ಮ ಪಕ್ಷದಲ್ಲಿ ಈ ನಟಿಯ ಪರವಾಗಿ ಯಾರೂ ಇಲ್ಲ; ಈ ಬಗ್ಗೆ ಸುಳ್ಳು ಸುದ್ದಿ ಹಬ್ಬಿಸಲಾಗುತ್ತಿದೆ ಎಂದರು.