‘ದಸರಾ, ದೀಪಾವಳಿ ಹಾಗೂ ಕಾರ್ತಿಕ ಸೋಮವಾರಗಳಂದು ಜಾತ್ರೋತ್ಸವದ ಬಗ್ಗೆ ತೀರ್ಮಾನ ಕೈಗೊಳ್ಳುವುದಕ್ಕಾಗಿ ಸಭೆ ನಡೆಸಲಾಗಿತ್ತು. ದಸರಾ, ದೀಪಾವಳಿ ಮತ್ತು ಕಾರ್ತಿಕ ಸೋಮವಾರದ ಪೂಜೆಗಳನ್ನು ಸರಳವಾಗಿ ಆಚರಿಸಲು ನಿರ್ಧರಿಸಲಾಗಿದೆ. ದಸರಾ ಸಂದರ್ಭದಲ್ಲಿ ಸಾಂಪ್ರದಾಯಿಕವಾಗಿ ದೇವಾಲಯದ ಮಟ್ಟಿಗೆ ಪೂಜೆ ಪುನಸ್ಕಾರಗಳು ನಡೆಯಲಿವೆ. ಭಕ್ತರಿಗೆ ಪ್ರವೇಶ ಇರುವುದಿಲ್ಲ. ದೀಪಾವಳಿ ಜಾತ್ರೆಯನ್ನು ಹೇಗೆ ಸರಳವಾಗಿ ಆಚರಿಸಬೇಕು ಎಂಬ ಬಗ್ಗೆ ಮುಂದಿನ ತಿಂಗಳ ಮೊದಲ ವಾರದಲ್ಲಿ ತೀರ್ಮಾನಿಸಲಾಗುವುದು’ ಎಂದು ಪ್ರಾಧಿಕಾರದ ಕಾರ್ಯದರ್ಶಿ ಜಯವಿಭವಸ್ವಾಮಿ ಅವರು ತಿಳಿಸಿದ್ದಾರೆ.