ಶುಕ್ರವಾರ, 10 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸುಮಲತಾ ಬಿಜೆಪಿ ಸೇರ್ಪಡೆ ಮಾತುಕತೆ ನಡೆದಿಲ್ಲ: ನಳಿನ್‌ ಕುಮಾರ್‌ ಕಟೀಲ್‌

Last Updated 29 ಡಿಸೆಂಬರ್ 2022, 10:21 IST
ಅಕ್ಷರ ಗಾತ್ರ

ಚಾಮರಾಜನಗರ: ಮಂಡ್ಯ ಸಂಸದೆ ಸುಮಲತಾ ಬಿಜೆಪಿ ಸೇರುವುದು ಅವರ ವೈಯಕ್ತಿಕ ವಿಚಾರ. ಸೇರ್ಪಡೆ ವಿಷಯವಾಗಿ ನಮ್ಮೊಂದಿಗೆ ಮಾತುಕತೆ ನಡೆದಿಲ್ಲ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್‌ ಕುಮಾರ್‌ ಕಟೀಲ್‌ ಗುರುವಾರ ಹೇಳಿದರು.

ಮಂಡ್ಯದಲ್ಲಿ ಬಿಜೆಪಿಯ ಬ್ಯಾನರ್‌, ಫ್ಲೆಕ್ಸ್‌ಗಳಲ್ಲಿ ಸುಮಲತಾ ಫೋಟೊ ಇರುವ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ‘ಅವರ ಹಿತೈಷಿಗಳು ಫೋಟೊ ಹಾಕಿರಬಹುದು’ ಎಂದಷ್ಟೇ ಹೇಳಿದರು.

ಕೇಂದ್ರ ಗೃಹ ಸಚಿವ ಅಮಿತ್‌ ಶಾ ಶುಕ್ರವಾರ ಮಂಡ್ಯಕ್ಕೆ ಭೇಟಿ ನೀಡುತ್ತಿರುವ ಬಗ್ಗೆ ಪ್ರತಿಕ್ರಿಯಿಸಿದ ಅವರು, ‘ನಾವುಚುನಾವಣೆಯ ಪೂರ್ವ ತಯಾರಿ ಮಾಡಿಕೊಳ್ಳುತ್ತಿದ್ದೇವೆ. ರಾಜ್ಯದ ಎಲ್ಲ ಕ್ಷೇತ್ರಗಳಲ್ಲಿ ನಾವು ಗೆಲ್ಲಬೇಕು. ಅದಕ್ಕೆ ಪೂರಕವಾದ ತಂತ್ರಗಾರಿಕೆಯನ್ನು ಮಂಡ್ಯದಿಂದ ಆರಂಭಿಸುತ್ತಿದ್ದೇವೆ’ ಎಂದರು.

ಪಕ್ಷ ಬೆಳೆಯುತ್ತಿದೆ:‘ಆಕಾಂಕ್ಷಿಗಳು ಟಿಕೆಟ್‌ಗಾಗಿ ಅರ್ಜಿ ಹಾಕುವ ಸಂಸ್ಕೃತಿ ನಮ್ಮಲ್ಲಿಲ್ಲ. ಪಕ್ಷವು ಕಾರ್ಯ, ಸಿದ್ಧಾಂತ, ಅವರ ನಿಷ್ಠೆಗಳನ್ನು ನೋಡಿಕೊಂಡು ಅಭ್ಯರ್ಥಿಯನ್ನು ಆಯ್ಕೆ ಮಾಡುತ್ತದೆ. ಒಂದು ಕಾಲದಲ್ಲಿ ಹಳೆ ಮೈಸೂರು ಭಾಗ, ಚಾಮರಾಜನಗರದಲ್ಲಿ ಪಕ್ಷಕ್ಕೆ ಅಭ್ಯರ್ಥಿಗಳು ಸಿಗುತ್ತಿರಲಿಲ್ಲ. ಅಂತಹದ್ದರಲ್ಲಿ ಈಗಅಭ್ಗರ್ಥಿಗಳ ದಂಡೇ ಇದೆ ಅಂದರೆ ಪಕ್ಷ ಬೆಳೆದಿದೆ ಎಂದರ್ಥ’ ಎಂದು ಪ್ರಶ್ನೆಯೊಂದಕ್ಕೆ ನಳಿನ್‌ ಉತ್ತರಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT