ಅಭಿಯಾನ:ಮಹದೇಶ್ವರ ಬೆಟ್ಟದಲ್ಲಿ (ದಾಸೋಹ ಭವನ ಸುತ್ತಮುತ್ತಲ ಪ್ರದೇಶ) ಸುರಪನೇನಿ ವಿದ್ಯಾಸಾಗರ ಫೌಂಡೇಷನ್, ಮಲೆ ಮಹದೇಶ್ವರ ವನ್ಯಧಾಮ ಹಾಗೂ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಜಂಟಿ ಸಹಯೋಗದಲ್ಲಿ ಪ್ಲಾಸ್ಟಿಕ್ ಮುಕ್ತ ಮಹದೇಶ್ವರ ಬೆಟ್ಟ ಎರಡನೇ ಹಂತದ ಅಭಿಯಾನ ಶನಿವಾರ ನಡೆಯಲಿದೆ. ಬೆಳಿಗ್ಗೆ 7.30ರಿಂದ ಅಭಿಯಾನ ನಡೆಯಲಿದ್ದು, ಆಸಕ್ತರು ಭಾಗವಹಿಸಬೇಕು ಎಂದು ಜಯವಿಭವಸ್ವಾಮಿ ಮನವಿ ಮಾಡಿದ್ದಾರೆ.