<p><strong>ಚಾಮರಾಜನಗರ</strong>: ಜಿಲ್ಲೆಯ ಪ್ರಸಿದ್ಧ ಯಾತ್ರಾ ಸ್ಥಳ ಮಹದೇಶ್ವರ ಬೆಟ್ಟದ ಮಲೆ ಮಹದೇಶ್ವರ ಸ್ವಾಮಿ ದೇವಾಲಯದಲ್ಲಿಭೀಮನ ಅಮಾವಾಸ್ಯೆ ಹಾಗೂ ಶ್ರಾವಣ ಮಾಸದ ಅಂಗವಾಗಿ ನಡೆಯುವ ಧಾರ್ಮಿಕ ವಿಧಿವಿಧಾನಗಳ ಸಂದರ್ಭದಲ್ಲಿ ದೇವಾಲಯಕ್ಕೆ ಭಕ್ತರ ಪ್ರವೇಶಕ್ಕೆ ನಿರ್ಬಂಧ ವಿಧಿಸಿ ಜಿಲ್ಲಾಧಿಕಾರಿ ಡಾ.ಎಂ.ಆರ್.ರವಿ ಅವರು ಆದೇಶಿಸಿದ್ದಾರೆ.</p>.<p>ಅದರಂತೆ, ಇದೇ 6ರಿಂದ (ಶುಕ್ರವಾರ) 9ರ (ಸೋಮವಾರ) ಮಧ್ಯಾಹ್ನ 3 ಗಂಟೆಯವರೆಗೆ ಅರ್ಚಕರು, ಪ್ರಾಧಿಕಾರದ ಅಧಿಕಾರಿಗಳು ಹಾಗೂ ಸಿಬ್ಬಂದಿ, ಕಾರ್ಯನಿಮಿತ್ತ ಬೆಟ್ಟಕ್ಕೆ ಭೇಟಿ ನೀಡುವ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳನ್ನು ಬಿಟ್ಟು ಬೇರೆಯಾರಿಗೂ ಪ್ರವೇಶಕ್ಕೆ ಅವಕಾಶ ಇಲ್ಲ.</p>.<p>ಶುಕ್ರವಾರದಿಂದ ಭಾನುವಾರದವರೆಗೆ ದೇವಾಲಯದಲ್ಲಿ ಎಣ್ಣೆಮಜ್ಜನ ಸೇವೆ, ಭೀಮನ ಅಮಾವಾಸ್ಯೆಯ ವಿಶೇಷ ಪೂಜೆ ಪುನಸ್ಕಾರಗಳು ನಡೆಯಲಿವೆ. ಶ್ರಾವಣ ಮಾಸದ ಪ್ರಯುಕ್ತಸೋಮವಾರ ಬೆಳಿಗ್ಗೆ ಸ್ವಾಮಿಗೆ 108 ಕುಂಭಾಭಿಷೇಕ, ಸಹಸ್ರ ಅಭಿಷೇಕಗಳು ನಡೆಯಲಿವೆ. ಪ್ರತಿ ವರ್ಷ ಈ ಸಂದರ್ಭದಲ್ಲಿ ಸಾವಿರಾರು ಭಕ್ತರು ಕ್ಷೇತ್ರಕ್ಕೆ ಭೇಟಿ ನೀಡುತ್ತಾರೆ.ಕೋವಿಡ್ ಸಂದರ್ಭದಲ್ಲಿ ಭಕ್ತರ ನಿಯಂತ್ರಣ ಕಷ್ಟವಾಗಲಿರುವುದರಿಂದ ಮುನ್ನೆಚ್ಚರಿಕೆ ಕ್ರಮವಾಗಿ ಜಿಲ್ಲಾಡಳಿತ ಭಕ್ತರ ಪ್ರವೇಶ ನಿರ್ಬಂಧಿಸಿದೆ.</p>.<p>ಎಲ್ಲ ವಿಧಿವಿಧಾನಗಳು ದೇವಾಲಯದ ಆವರಣಕ್ಕೆ ಸೀಮಿತವಾಗಿ ಸಾಂಪ್ರದಾಯಿಕವಾಗಿ ಶಾಸ್ತ್ರಬಧ್ಧವಾಗಿವಾಗಿ ನಡೆಯಲಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಾಮರಾಜನಗರ</strong>: ಜಿಲ್ಲೆಯ ಪ್ರಸಿದ್ಧ ಯಾತ್ರಾ ಸ್ಥಳ ಮಹದೇಶ್ವರ ಬೆಟ್ಟದ ಮಲೆ ಮಹದೇಶ್ವರ ಸ್ವಾಮಿ ದೇವಾಲಯದಲ್ಲಿಭೀಮನ ಅಮಾವಾಸ್ಯೆ ಹಾಗೂ ಶ್ರಾವಣ ಮಾಸದ ಅಂಗವಾಗಿ ನಡೆಯುವ ಧಾರ್ಮಿಕ ವಿಧಿವಿಧಾನಗಳ ಸಂದರ್ಭದಲ್ಲಿ ದೇವಾಲಯಕ್ಕೆ ಭಕ್ತರ ಪ್ರವೇಶಕ್ಕೆ ನಿರ್ಬಂಧ ವಿಧಿಸಿ ಜಿಲ್ಲಾಧಿಕಾರಿ ಡಾ.ಎಂ.ಆರ್.ರವಿ ಅವರು ಆದೇಶಿಸಿದ್ದಾರೆ.</p>.<p>ಅದರಂತೆ, ಇದೇ 6ರಿಂದ (ಶುಕ್ರವಾರ) 9ರ (ಸೋಮವಾರ) ಮಧ್ಯಾಹ್ನ 3 ಗಂಟೆಯವರೆಗೆ ಅರ್ಚಕರು, ಪ್ರಾಧಿಕಾರದ ಅಧಿಕಾರಿಗಳು ಹಾಗೂ ಸಿಬ್ಬಂದಿ, ಕಾರ್ಯನಿಮಿತ್ತ ಬೆಟ್ಟಕ್ಕೆ ಭೇಟಿ ನೀಡುವ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳನ್ನು ಬಿಟ್ಟು ಬೇರೆಯಾರಿಗೂ ಪ್ರವೇಶಕ್ಕೆ ಅವಕಾಶ ಇಲ್ಲ.</p>.<p>ಶುಕ್ರವಾರದಿಂದ ಭಾನುವಾರದವರೆಗೆ ದೇವಾಲಯದಲ್ಲಿ ಎಣ್ಣೆಮಜ್ಜನ ಸೇವೆ, ಭೀಮನ ಅಮಾವಾಸ್ಯೆಯ ವಿಶೇಷ ಪೂಜೆ ಪುನಸ್ಕಾರಗಳು ನಡೆಯಲಿವೆ. ಶ್ರಾವಣ ಮಾಸದ ಪ್ರಯುಕ್ತಸೋಮವಾರ ಬೆಳಿಗ್ಗೆ ಸ್ವಾಮಿಗೆ 108 ಕುಂಭಾಭಿಷೇಕ, ಸಹಸ್ರ ಅಭಿಷೇಕಗಳು ನಡೆಯಲಿವೆ. ಪ್ರತಿ ವರ್ಷ ಈ ಸಂದರ್ಭದಲ್ಲಿ ಸಾವಿರಾರು ಭಕ್ತರು ಕ್ಷೇತ್ರಕ್ಕೆ ಭೇಟಿ ನೀಡುತ್ತಾರೆ.ಕೋವಿಡ್ ಸಂದರ್ಭದಲ್ಲಿ ಭಕ್ತರ ನಿಯಂತ್ರಣ ಕಷ್ಟವಾಗಲಿರುವುದರಿಂದ ಮುನ್ನೆಚ್ಚರಿಕೆ ಕ್ರಮವಾಗಿ ಜಿಲ್ಲಾಡಳಿತ ಭಕ್ತರ ಪ್ರವೇಶ ನಿರ್ಬಂಧಿಸಿದೆ.</p>.<p>ಎಲ್ಲ ವಿಧಿವಿಧಾನಗಳು ದೇವಾಲಯದ ಆವರಣಕ್ಕೆ ಸೀಮಿತವಾಗಿ ಸಾಂಪ್ರದಾಯಿಕವಾಗಿ ಶಾಸ್ತ್ರಬಧ್ಧವಾಗಿವಾಗಿ ನಡೆಯಲಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>