<p><strong>ಚಾಮರಾಜನಗರ: </strong>ಆನ್ಲೈನ್ನಲ್ಲಿ ಔಷಧಗಳನ್ನು ಮಾರಾಟ ಮಾಡಲು ಅವಕಾಶ ನೀಡುವ ಕೇಂದ್ರ ಸರ್ಕಾರದ ಕ್ರಮವನ್ನು ಖಂಡಿಸಿ ಕರ್ನಾಟಕ ಔಷಧ ವ್ಯಾಪಾರಿಗಳ ಸಂಘ ನೀಡಿದ್ದ ಬಂದ್ಗೆ ಜಿಲ್ಲೆಯಲ್ಲಿ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದೆ.</p>.<p>ಜಿಲ್ಲಾ ಕೇಂದ್ರ ಚಾಮರಾಜನಗರ ಸೇರಿದಂತೆ ಗುಂಡ್ಲುಪೇಟೆ, ಕೊಳ್ಳೇಗಾಲ ಸೇರಿದಂತೆ ಎಲ್ಲ ಕಡೆಗಳಲ್ಲಿ ಶುಕ್ರವಾರ ಔಷಧದ ಅಂಗಡಿಗಳು ಎಂದಿನಂತೆ ವಹಿವಾಟು ನಡೆಸಿದವು.</p>.<p>ರಾಜ್ಯದ ಔಷಧ ವ್ಯಾಪಾರಿಗಳ ಒಂದು ವರ್ಗವು ಸುವರ್ಣ ಕರ್ನಾಟಕ ಔಷಧ ಮಾರಾಟಗಾರರು ಮತ್ತು ವಿತರಕರ ಸಂಘ ಎಂಬ ಸಂಘಟನೆಯನ್ನು ಕಟ್ಟಿಕೊಂಡಿದ್ದು, 19 ಜಿಲ್ಲೆಗಳಲ್ಲಿ ಇದು ಕಾರ್ಯನಿರ್ವಹಿಸುತ್ತಿದೆ. ಈ ಸಂಘವು ಬಂದ್ಗೆ ಬೆಂಬಲ ನೀಡಿಲ್ಲ. ಜಿಲ್ಲೆಯಲ್ಲಿ ಈ ಸಂಘ ಸಕ್ರಿಯವಾಗಿದೆ. ಹಾಗಾಗಿ ಬಂದ್ ನಡೆದಿಲ್ಲ.</p>.<p>‘ಆನ್ಲೈನ್ನಲ್ಲಿ ಔಷಧ ಮಾರಾಟಕ್ಕೆ ಅವಕಾಶ ನೀಡಿರುವುದಕ್ಕೆ ನಮ್ಮ ವಿರೋಧ ಇದೆ. ಆದರೆ, ಜನರ ಹಿತದೃಷ್ಟಿಯಿಂದ ನಾವು ಅಂಗಡಿಗಳನ್ನು ಬಂದ್ ಮಾಡಿಲ್ಲ’ ಎಂದು ಸಂಘದ ಚಾಮರಾಜನಗರ ತಾಲ್ಲೂಕು ಘಟಕದ ಕಾರ್ಯದರ್ಶಿ ಎ.ಪ್ರಶಾಂತ್ ‘ಪ್ರಜಾವಾಣಿ’ಗೆ ತಿಳಿಸಿದರು.</p>.<p>‘ಕಳೆದ ವರ್ಷ ರಾಜ್ಯದಾದ್ಯಂತ ಬಂದ್ ಮಾಡಿದ್ದೆವು. ಅದರಿಂದ ನಮಗೆ ಏನೂ ಲಾಭ ಆಗಿಲ್ಲ. ವಿರೋಧದ ನಡುವೆಯೂ ಕೇಂದ್ರ ಸರ್ಕಾರ ಆನ್ಲೈನ್ ಮಾರಾಟಕ್ಕೆ ಅವಕಾಶ ನೀಡಿತ್ತು’ ಎಂದು ಅವರು ಹೇಳಿದರು.</p>.<p>‘ಸಂಘದ ಪದಾಧಿಕಾರಿಗಳು ಅಕ್ಟೋಬರ್ 3ರಂದು ದೆಹಲಿಯಲ್ಲಿ ಪ್ರಧಾನಿ ಹಾಗೂ ರಾಷ್ಟ್ರಪತಿ ಅವರನ್ನು ಭೇಟಿ ಮಾಡಿ, ಔಷಧಗಳ ಆನ್ಲೈನ್ ಮಾರಾಟಕ್ಕೆ ಅವಕಾಶ ನೀಡುವ ನಿಯಮವನ್ನು ರದ್ದುಪಡಿಸಬೇಕು ಎಂದು ಮನವಿ ಮಾಡಲಿದ್ದಾರೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಾಮರಾಜನಗರ: </strong>ಆನ್ಲೈನ್ನಲ್ಲಿ ಔಷಧಗಳನ್ನು ಮಾರಾಟ ಮಾಡಲು ಅವಕಾಶ ನೀಡುವ ಕೇಂದ್ರ ಸರ್ಕಾರದ ಕ್ರಮವನ್ನು ಖಂಡಿಸಿ ಕರ್ನಾಟಕ ಔಷಧ ವ್ಯಾಪಾರಿಗಳ ಸಂಘ ನೀಡಿದ್ದ ಬಂದ್ಗೆ ಜಿಲ್ಲೆಯಲ್ಲಿ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದೆ.</p>.<p>ಜಿಲ್ಲಾ ಕೇಂದ್ರ ಚಾಮರಾಜನಗರ ಸೇರಿದಂತೆ ಗುಂಡ್ಲುಪೇಟೆ, ಕೊಳ್ಳೇಗಾಲ ಸೇರಿದಂತೆ ಎಲ್ಲ ಕಡೆಗಳಲ್ಲಿ ಶುಕ್ರವಾರ ಔಷಧದ ಅಂಗಡಿಗಳು ಎಂದಿನಂತೆ ವಹಿವಾಟು ನಡೆಸಿದವು.</p>.<p>ರಾಜ್ಯದ ಔಷಧ ವ್ಯಾಪಾರಿಗಳ ಒಂದು ವರ್ಗವು ಸುವರ್ಣ ಕರ್ನಾಟಕ ಔಷಧ ಮಾರಾಟಗಾರರು ಮತ್ತು ವಿತರಕರ ಸಂಘ ಎಂಬ ಸಂಘಟನೆಯನ್ನು ಕಟ್ಟಿಕೊಂಡಿದ್ದು, 19 ಜಿಲ್ಲೆಗಳಲ್ಲಿ ಇದು ಕಾರ್ಯನಿರ್ವಹಿಸುತ್ತಿದೆ. ಈ ಸಂಘವು ಬಂದ್ಗೆ ಬೆಂಬಲ ನೀಡಿಲ್ಲ. ಜಿಲ್ಲೆಯಲ್ಲಿ ಈ ಸಂಘ ಸಕ್ರಿಯವಾಗಿದೆ. ಹಾಗಾಗಿ ಬಂದ್ ನಡೆದಿಲ್ಲ.</p>.<p>‘ಆನ್ಲೈನ್ನಲ್ಲಿ ಔಷಧ ಮಾರಾಟಕ್ಕೆ ಅವಕಾಶ ನೀಡಿರುವುದಕ್ಕೆ ನಮ್ಮ ವಿರೋಧ ಇದೆ. ಆದರೆ, ಜನರ ಹಿತದೃಷ್ಟಿಯಿಂದ ನಾವು ಅಂಗಡಿಗಳನ್ನು ಬಂದ್ ಮಾಡಿಲ್ಲ’ ಎಂದು ಸಂಘದ ಚಾಮರಾಜನಗರ ತಾಲ್ಲೂಕು ಘಟಕದ ಕಾರ್ಯದರ್ಶಿ ಎ.ಪ್ರಶಾಂತ್ ‘ಪ್ರಜಾವಾಣಿ’ಗೆ ತಿಳಿಸಿದರು.</p>.<p>‘ಕಳೆದ ವರ್ಷ ರಾಜ್ಯದಾದ್ಯಂತ ಬಂದ್ ಮಾಡಿದ್ದೆವು. ಅದರಿಂದ ನಮಗೆ ಏನೂ ಲಾಭ ಆಗಿಲ್ಲ. ವಿರೋಧದ ನಡುವೆಯೂ ಕೇಂದ್ರ ಸರ್ಕಾರ ಆನ್ಲೈನ್ ಮಾರಾಟಕ್ಕೆ ಅವಕಾಶ ನೀಡಿತ್ತು’ ಎಂದು ಅವರು ಹೇಳಿದರು.</p>.<p>‘ಸಂಘದ ಪದಾಧಿಕಾರಿಗಳು ಅಕ್ಟೋಬರ್ 3ರಂದು ದೆಹಲಿಯಲ್ಲಿ ಪ್ರಧಾನಿ ಹಾಗೂ ರಾಷ್ಟ್ರಪತಿ ಅವರನ್ನು ಭೇಟಿ ಮಾಡಿ, ಔಷಧಗಳ ಆನ್ಲೈನ್ ಮಾರಾಟಕ್ಕೆ ಅವಕಾಶ ನೀಡುವ ನಿಯಮವನ್ನು ರದ್ದುಪಡಿಸಬೇಕು ಎಂದು ಮನವಿ ಮಾಡಲಿದ್ದಾರೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>