ಜಾತ್ರೆಯ ವಿಶೇಷ
ಚಾಮರಾಜೇಶ್ವರಸ್ವಾಮಿ ದೇವಸ್ಥಾನಕ್ಕೆ 200ಕ್ಕೂ ಹೆಚ್ಚು ವರ್ಷಗಳ ಇತಿಹಾಸವಿದೆ. ಸಾಮಾನ್ಯವಾಗಿ ಆಷಾಢ ಮಾಸದಲ್ಲಿ ಎಲ್ಲೂ ರಥೋತ್ಸವ ನಡೆಯುವುದಿಲ್ಲ. ಹಾಗಾಗಿ, ಇಲ್ಲಿನ ಜಾತ್ರೆ ಬಲು ಅಪರೂಪ.ಜಾತ್ರೆಯ ದಿನದಂದು ಜಿಲ್ಲೆಯ, ಹೊರ ಜಿಲ್ಲೆಗಳ ಸಾವಿರಾರು ನವ ದಂಪತಿ ದೇವಸ್ಥಾನಕ್ಕೆ ಬಂದು ಹರಕೆ ಒಪ್ಪಿಸುವುದು ವಾಡಿಕೆ. ಆಷಾಢ ಮಾಸವನ್ನು ಶೂನ್ಯಮಾಸ ಎಂದು ಕರೆಯುತ್ತಾರೆ. ಈ ಮಾಸದಲ್ಲಿ ಹೊಸದಾಗಿ ಮದುವೆಯಾದ ಜೋಡಿಗಳು ದೂರ ಇರುತ್ತಾರೆ. ಆದರೆ, ಈ ರಥೋತ್ಸವ ನವದಂಪತಿಯನ್ನು ಒಂದುಗೂಡಿಸುತ್ತಿತ್ತು.