‘ಕೋವಿಡ್ ನಿಯಂತ್ರಣ ಮಾನದಂಡಗಳಿಗೆ ಒಳಪಟ್ಟು, ಗರಿಷ್ಠ 500 ಜನರ ಮಿತಿಯಲ್ಲಿ ಜಾತ್ರೆಯು ಸರಳವಾಗಿ ಹಾಗೂ ಸಾಂಪ್ರದಾಯಿಕವಾಗಿ ನಡೆಯಲಿದೆ. ಜಾತ್ರೆಗೆ ಸಂಬಂಧಿಸಿದ ಎಲ್ಲ ಉತ್ಸವಗಳು ನಡೆಯಲಿದೆ. ದೇವಸ್ಥಾನದ ಅರ್ಚಕರು, ಪ್ರಾಧಿಕಾರದ ಸಿಬ್ಬಂದಿ, ಸ್ಥಳೀಯ ನಿವಾಸಿಗಳು, ಸರ್ಕಾರಿ ಕೆಲಸದ ನಿಮಿತ್ತ ಬರುವ ಅಧಿಕಾರಿಗಳು ಹಾಗೂ ವಿಶೇಷ ಆಹ್ವಾನಿತರಿಗೆ ಮಾತ್ರ ಅವಕಾಶ ಇದೆ. ಜಿಲ್ಲೆ, ಹೊರ ಜಿಲ್ಲೆ ಮತ್ತು ಹೊರ ರಾಜ್ಯಗಳ ಭಕ್ತರಿಗೆ ಪ್ರವೇಶ ನಿರ್ಬಂಧಿಸಲಾಗಿದೆ’ ಎಂದು ಜಯವಿಭವಸ್ವಾಮಿ ಅವರು ಹೇಳಿದ್ದಾರೆ.