<p><strong>ಚಾಮರಾಜನಗರ:</strong> ಗುಂಡ್ಲುಪೇಟೆಯ ಕಬ್ಬೆಕಟ್ಟೆ ಶನೇಶ್ವರ ದೇವಸ್ಥಾನದಲ್ಲಿ ನಡೆದ ದಲಿತ ವ್ಯಕ್ತಿಯ ಬೆತ್ತಲೆ ಮೆರವಣಿಗೆ ಪ್ರಕರಣದ ಆರೋಪಿಗಳ ಜಾಮೀನು ಅರ್ಜಿ ವಿಚಾರಣೆಯನ್ನು ಜಿಲ್ಲಾ ಪ್ರಧಾನ ಮತ್ತು ಸೆಷನ್ಸ್ ನ್ಯಾಯಾಲಯ ಗುರುವಾರಕ್ಕೆ (ಜುಲೈ 4) ಮುಂದೂಡಿದೆ.</p>.<p>ಆರೋಪಿಗಳಾದ ಶಿವಪ್ಪ, ಬಸವರಾಜು, ಮಾಣಿಕ್ಯ, ಸತೀಶ್, ಪುಟ್ಟಸ್ವಾಮಿ, ಚನ್ನಕೇಶವಮೂರ್ತಿ ಅವರು ಸಲ್ಲಿಸಿರುವ ಜಾಮೀನು ಅರ್ಜಿಯನ್ನು ಜಿಲ್ಲಾ ಪ್ರಧಾನ ಮತ್ತು ಸೆಷನ್ಸ್ ನ್ಯಾಯಾಧೀಶ ಜಿ.ಬಸವರಾಜ ಅವರು ಬುಧವಾರ ಕೈಗೆತ್ತಿಕೊಂಡರು.</p>.<p>ಜಾಮೀನು ಕೋರಿ ಹಿಂದಿನ ವಕೀಲರಾದ ಅರಳೀಕಟ್ಟೆ ಸಿದ್ದರಾಜು ಅವರು ಸಲ್ಲಿಸಿರುವ ದಾಖಲೆಗಳನ್ನು ಪರಿಶೀಲಿಸಲು ಕಾಲಾವಕಾಶ ಬೇಕು ಎಂದು ಪಬ್ಲಿಕ್ ಪ್ರಾಸಿಕ್ಯೂಟರ್ ಅವರು ಮನವಿ ಮಾಡಿದರು. ಹಾಗಾಗಿ,ನ್ಯಾಯಾಧೀಶರು ಅರ್ಜಿ ವಿಚಾರಣೆಯನ್ನು ಗುರುವಾರಕ್ಕೆ ಮುಂದೂಡಿದರು.</p>.<p class="Subhead"><strong>ಹಿಂದೆ ಸರಿದ ವಕೀಲ: </strong>ಈ ಮಧ್ಯೆ, ಆರೋಪಿಗಳ ಪರ ವಕಾಲತ್ತು ವಹಿಸಿದ್ದ ಹಿರಿಯ ವಕೀಲ ಅರಳೀಕಟ್ಟೆ ಸಿದ್ದರಾಜು ಅವರು ಪ್ರಕರಣದಿಂದ ಹಿಂದೆ ಸರಿದಿದ್ದಾರೆ. ನಂಜನಗೂಡಿನ ವಕೀಲರಾದ ಶೃತಿ ಅವರು ಆರೋಪಿಗಳ ಪರ ನ್ಯಾಯಾಲಯಕ್ಕೆ ಹಾಜರಾಗಲಿದ್ದಾರೆ ಎಂದು ಗೊತ್ತಾಗಿದೆ.</p>.<p>ಪ್ರಗತಿಪರ ಮತ್ತು ದಲಿತ ಸಂಘಟನೆಗಳ ಒಕ್ಕೂಟದ ಪದಾಧಿಕಾರಿಗಳು ಪ್ರಕರಣದ ಆರೋಪಿಗಳ ಪರ ಜಿಲ್ಲೆಯ ವಕೀಲರು ವಕಾಲತ್ತು ವಹಿಸಬಾರದೆಂದು ಜಿಲ್ಲಾ ವಕೀಲರ ಸಂಘಕ್ಕೆ ಮನವಿ ಮಾಡಿದ್ದರು. ಈ ಸಂಬಂಧ ಸಂಘವು ನಿರ್ಣಯವನ್ನೂ ಕೈಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಾಮರಾಜನಗರ:</strong> ಗುಂಡ್ಲುಪೇಟೆಯ ಕಬ್ಬೆಕಟ್ಟೆ ಶನೇಶ್ವರ ದೇವಸ್ಥಾನದಲ್ಲಿ ನಡೆದ ದಲಿತ ವ್ಯಕ್ತಿಯ ಬೆತ್ತಲೆ ಮೆರವಣಿಗೆ ಪ್ರಕರಣದ ಆರೋಪಿಗಳ ಜಾಮೀನು ಅರ್ಜಿ ವಿಚಾರಣೆಯನ್ನು ಜಿಲ್ಲಾ ಪ್ರಧಾನ ಮತ್ತು ಸೆಷನ್ಸ್ ನ್ಯಾಯಾಲಯ ಗುರುವಾರಕ್ಕೆ (ಜುಲೈ 4) ಮುಂದೂಡಿದೆ.</p>.<p>ಆರೋಪಿಗಳಾದ ಶಿವಪ್ಪ, ಬಸವರಾಜು, ಮಾಣಿಕ್ಯ, ಸತೀಶ್, ಪುಟ್ಟಸ್ವಾಮಿ, ಚನ್ನಕೇಶವಮೂರ್ತಿ ಅವರು ಸಲ್ಲಿಸಿರುವ ಜಾಮೀನು ಅರ್ಜಿಯನ್ನು ಜಿಲ್ಲಾ ಪ್ರಧಾನ ಮತ್ತು ಸೆಷನ್ಸ್ ನ್ಯಾಯಾಧೀಶ ಜಿ.ಬಸವರಾಜ ಅವರು ಬುಧವಾರ ಕೈಗೆತ್ತಿಕೊಂಡರು.</p>.<p>ಜಾಮೀನು ಕೋರಿ ಹಿಂದಿನ ವಕೀಲರಾದ ಅರಳೀಕಟ್ಟೆ ಸಿದ್ದರಾಜು ಅವರು ಸಲ್ಲಿಸಿರುವ ದಾಖಲೆಗಳನ್ನು ಪರಿಶೀಲಿಸಲು ಕಾಲಾವಕಾಶ ಬೇಕು ಎಂದು ಪಬ್ಲಿಕ್ ಪ್ರಾಸಿಕ್ಯೂಟರ್ ಅವರು ಮನವಿ ಮಾಡಿದರು. ಹಾಗಾಗಿ,ನ್ಯಾಯಾಧೀಶರು ಅರ್ಜಿ ವಿಚಾರಣೆಯನ್ನು ಗುರುವಾರಕ್ಕೆ ಮುಂದೂಡಿದರು.</p>.<p class="Subhead"><strong>ಹಿಂದೆ ಸರಿದ ವಕೀಲ: </strong>ಈ ಮಧ್ಯೆ, ಆರೋಪಿಗಳ ಪರ ವಕಾಲತ್ತು ವಹಿಸಿದ್ದ ಹಿರಿಯ ವಕೀಲ ಅರಳೀಕಟ್ಟೆ ಸಿದ್ದರಾಜು ಅವರು ಪ್ರಕರಣದಿಂದ ಹಿಂದೆ ಸರಿದಿದ್ದಾರೆ. ನಂಜನಗೂಡಿನ ವಕೀಲರಾದ ಶೃತಿ ಅವರು ಆರೋಪಿಗಳ ಪರ ನ್ಯಾಯಾಲಯಕ್ಕೆ ಹಾಜರಾಗಲಿದ್ದಾರೆ ಎಂದು ಗೊತ್ತಾಗಿದೆ.</p>.<p>ಪ್ರಗತಿಪರ ಮತ್ತು ದಲಿತ ಸಂಘಟನೆಗಳ ಒಕ್ಕೂಟದ ಪದಾಧಿಕಾರಿಗಳು ಪ್ರಕರಣದ ಆರೋಪಿಗಳ ಪರ ಜಿಲ್ಲೆಯ ವಕೀಲರು ವಕಾಲತ್ತು ವಹಿಸಬಾರದೆಂದು ಜಿಲ್ಲಾ ವಕೀಲರ ಸಂಘಕ್ಕೆ ಮನವಿ ಮಾಡಿದ್ದರು. ಈ ಸಂಬಂಧ ಸಂಘವು ನಿರ್ಣಯವನ್ನೂ ಕೈಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>