ಏ.27ರಂದು ನಡೆದ ಚರ್ಚೆಯಲ್ಲಿ, ವೈದ್ಯಾಧಿಕಾರಿಯೊಬ್ಬರು ‘ ಸರ್, ಇಂದು ನಡೆದ ಸಭೆಯಲ್ಲಿ ಮೈಸೂರು ಜಿಲ್ಲಾಧಿಕಾರಿ,ಚಾಮರಾಜನಗರಕ್ಕೆ ಆಮ್ಲಜನಕ ಪೂರೈಸುವುದಕ್ಕೆ ಆಕ್ಷೇಪಿಸಿದ್ದಾರೆ’ ಎಂದಿದ್ದು, ಇದರಿಂದ ಆಮ್ಲಜನಕ ತರಿಸಿಕೊಳ್ಳುವುದು ಕಷ್ಟವಾಗುತ್ತಿದೆ ಎಂದಿದ್ದಾರೆ. ಹೀಗಾಗಿ, ಜಿಲ್ಲೆಯು ಎದುರಿಸುತ್ತಿರುವ ಆಮ್ಲಜನಕದ ಕೊರತೆಯ ಸಮಸ್ಯೆಯು ಕೇವಲ ಒಂದೆರಡು ದಿನಗಳದ್ದಲ್ಲ ಎಂಬುದು ಬಹಿರಂಗಗೊಂಡಿದೆ.