ವರದಿಗೆ ಸ್ಪಂದಿಸಿದ್ದ ಕಾವೇರಿ ವನ್ಯಧಾಮದ ಹಿರಿಯ ಅರಣ್ಯಾಧಿಕಾರಿಗಳು ಸ್ಥಳೀಯ ಅಧಿಕಾರಿಗಳ ಸಹಕಾರದೊಂದಿಗೆ ಕಾರ್ಯಾಚರಣೆ ಆರಂಭಿಸಿದ್ದರು. ಮೂರು ದಿನಗಳ ಬಳಿಕ, ಬುಧವಾರ ಮಧ್ಯರಾತ್ರಿ ವೇಳೆ ಅಕ್ರಮವಾಗಿ ಅರಣ್ಯ ಪ್ರವೇಶಿಸಿ ಮರಳು ಸಾಗಣೆ ಮಾಡುತ್ತಿದ್ದಾಗ ದಾಳಿ ನಡೆಸಿ ಟ್ರ್ಯಾಕ್ಟರ್ ಸಮೇತ ವ್ಯಕ್ತಿಯನ್ನು ಬಂಧಿಸಿದ್ದಾರೆ.