ಹನೂರು: ನಾಡ ಬಂದೂಕಿನಿಂದ ಜಿಂಕೆಯನ್ನು ಬೇಟೆಯಾಡಿ ಮಾಂಸವನ್ನು ಸಾಗಾಣೆ ಮಾಡುತ್ತಿದ್ದ ಕಾಂಚಳ್ಳಿ ಗ್ರಾಮದ ಮುರುಗೇಗೌಡ ಎಂಬ ವ್ಯಕ್ತಿಯನ್ನು ಮಲೆಮಹದೇಶ್ವರ ವನ್ಯಾಧಾಮದ ಅರಣ್ಯಾಧಿಕಾರಿಗಳು ಬುಧವಾರ ಬಂಧಿಸಿದ್ದಾರೆ.ನಾಲ್ವರು ತಲೆಮರೆಸಿಕೊಂಡಿದ್ದಾರೆ.
ಆರೋಪಿ ಬಳಿಯಿಂದ ಒಂದು ನಳಿಕೆಯ ನಾಡ ಬಂದೂಕು ಮತ್ತು 20 ಕೆಜಿ ಜಿಂಕೆ ಮಾಂಸವನ್ನು ವಶಪಡಿಸಿಕೊಳ್ಳಲಾಗಿದೆ.
ಹನೂರು ವನ್ಯಜೀವು ವಲಯದ ಪಚ್ಚೆದೊಡ್ಡಿ ಶಾಖೆಯ ಉಪ್ಪಳ್ಳ ಅರಣ್ಯ ಪ್ರದೇಶದಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ಗಸ್ತಿನಲ್ಲಿದ್ದಾಗ ಬೆಳಿಗ್ಗೆ 4 ಗಂಟೆ ಸಮಯದಲ್ಲಿ ನಾಡ ಬಂದೂಕಿನೊಂದಿಗೆ ಕೆಲವರು ಅಡ್ಡಾಡುತ್ತಿದ್ದುದ್ದನ್ನು ಗಮನಿಸಿ ಸಿಬ್ಬಂದಿ ಕಾರ್ಯಾಚರಣೆ ನಡೆಸಿದ್ದಾರೆ.